ದಕ್ಷಿಣ ಕನ್ನಡ | ಶಾಲೆಯಲ್ಲಿ ಶಾಸಕರ ಗೂಂಡಾಗಿರಿ; ಡಿವೈಎಫ್‌ಐ ಖಂಡನೆ

Date:

ಮಂಗಳೂರಿನ ಸೈಂಟ್ ಜರೋಜಾ ಶಾಲೆಯ ಶಿಕ್ಷಕಿ ಹಿಂದು ಧರ್ಮ ನಿಂದನೆ ಮಾಡಿದ್ದರೆ ಅವರ ಮೇಲೆ ಕಾನೂನಾತ್ಮಕವಾಗಿ ಕ್ರಮ ಆಗಲಿ, ಶಿಕ್ಷೆಯೂ ಆಗಲಿ. ಅದಕ್ಕೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದರದ್ದೇ ಕ್ರಮ, ನಿಯಮಗಳಿವೆ ಎಂದು ಡಿವೈಎಫ್‌ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಪ್ರತಿಕ್ರಿಯಿಸಿದ್ದಾರೆ.

ಸೈಂಟ್ ಜರೋಜಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗ ಪಾಠ ಮಾಡಿದ್ದ ಶಿಕ್ಷಕಿ ರಾಮಾಯಣ, ಮಹಾಭಾರತ ಕಾಲ್ಪನಿಕವೆಂದು ಹೇಳಿದ್ದರು. ಇದು ಹಿಂದು ಧರ್ಮೀಯರ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌ ಅವರು ಶಾಲೆಗೆ ಮುತ್ತಿಗೆ ಹಾಕಿ ಗೂಂಡಾಗಿರಿ ನಡೆಸಿದ್ದಾರೆ. ಶಾಸಕರ ವರ್ತನೆಯನ್ನು ಖಂಡಿಸಿ ಮುನೀರ್ ಕಾಟಿಪಳ್ಳ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ಯಾವುದೇ ಆರೋಪಗಳ ಕುರಿತು ನಿಯಮಗಳ ಪ್ರಕಾರ ತನಿಖೆ ನಡೆದು ಅಪರಾಧ ಸಾಬೀತಾದರೆ ಶಿಕ್ಷೆ ವಿಧಿಸುವುದು ಸರಿಯಾದ ವಿಧಾನ. ʼಬೀದಿ ನ್ಯಾಯʼ ವಿಧಿಸಲು ಇದು ಅರಾಜಕ ದೇಶ ಅಲ್ಲ, ಸರ್ವಾಧಿಕಾರಿಗಳ ನಾಡೂ ಅಲ್ಲ. ಶಾಸಕರಾದವರಿಗೆ ಈ ಜ್ಞಾನ ಇರಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಾಥಮಿಕ ಶಾಲೆಯ ಮುಗ್ಧ ವಿದ್ಯಾರ್ಥಿಗಳನ್ನು ತಮ್ಮದೇ ಶಾಲೆಯ ವಿರುದ್ಧ ಮುತ್ತಿಗೆಗೆ ಬಳಸಿರುವುದು, ಧಾರ್ಮಿಕ ಘೋಷಣೆಗಳನ್ನು ಕೂಗಿಸಿರುವುದು ನಾಚಿಕೆಗೇಡಿನ ಕೃತ್ಯ. ಶಾಸಕನಿಗಿರಬೇಕಾದ ಕನಿಷ್ಟ ಪ್ರಜ್ಞೆ, ಸಮಾಜದ ಭವಿಷ್ಯದ ಕುರಿತು ಕಾಳಜಿ ವೇದವ್ಯಾಸ ಕಾಮತರಿಗೆ ಇಲ್ಲ ಎಂಬುದು ಈ ಘಟನೆಯಿಂದ ಸಾಬೀತಾಗಿದೆ” ಎಂದು ಮುನೀರ್ ಕಾಟಿಪಳ್ಳ ಹೇಳಿದ್ದಾರೆ.

“ಮಂಗಳೂರಿನ ಸಾಮಾನ್ಯ, ಕಡಿಮೆ ಆದಾಯದ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಕಾಗಿರುವ ಡೊನೇಷನ್ ಹಾವಳಿ, ದುಬಾರಿ ಫೀಸು, ನಿಯಮ ಬಾಹಿರ ಶಿಕ್ಷಣ ವ್ಯವಸ್ಥೆಯ ಕುರಿತು ವಿಧಾನ ಸಭೆಯಲ್ಲಿ ಧ್ವನಿ ಎತ್ತಬೇಕಿದ್ದ ಶಾಸಕರು, ಅದರ ಬದಲಿಗೆ ಅಧಿವೇಶನ ತೊರೆದು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯೊಂದರ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು, ಮತೀಯ ಭಾವನೆ ಕೆರಳಿಸಲು ಪ್ರಕರಣವನ್ನು ಬಳಸುತ್ತಿರುವುದು ಖಂಡನೀಯ. ಇದರ ಹಿಂದೆ ಚುನಾವಣೆಯ ಸಿದ್ದತೆ ಇರುವುದು ಸ್ಪಷ್ಟ” ಎಂದರು.

ಜಿಲ್ಲಾಡಳಿತ, ಸರ್ಕಾರ ಇಂತಹ ಗೂಂಡಾಗಿರಿಯನ್ನು ಸಹಿಸಬಾರದು, ಕಾನೂನಿನ ಪಾಠ, ಜವಾಬ್ದಾರಿಯನ್ನು ಶಾಸಕರಿಗೆ ಮನವರಿಕೆ ಮಾಡಿಕೊಡಬೇಕು, ಹಿಂಸೆಗೆ ಪ್ರಚೋದಿಸುವ, ಗೂಂಡಾಗಿರಿ ಮೆರೆದಿರುವ ಶಾಸಕ ವೇದವ್ಯಾಸ ಕಾಮತರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ ಸಮಿತಿ ರಾಜ್ಯ ಸರ್ಕಾರವನ್ನು ಆಗ್ರಹಿಸುವುದಾಗಿ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...