ಮಂಗಳೂರು ಗುಂಪು ಹತ್ಯೆ | ಅಶ್ರಫ್‌ ಅಂತ್ಯಸಂಸ್ಕಾರ; ಮಗನ ಮೃತದೇಹ ಕಂಡು ಕಣ್ಣೀರಿಟ್ಟ ತಾಯಿ ರುಕಿಯಾ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪು ಮೈದಾನದಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಮೃತಪಟ್ಟ ಕೇರಳದ ಯುವಕ ಅಶ್ರಫ್ ಅವರ ಅಂತ್ಯಸಂಸ್ಕಾರವು ಮಲಪ್ಪುರಂ ಜಿಲ್ಲೆಯಲ್ಲಿ ನಡೆಸಲಾಯಿತು.

ಗುಂಪಿನಿಂದ ಹತ್ಯೆಯಾಗಿದ್ದ ವ್ಯಕ್ತಿಯನ್ನು ಮೊದಲು ಅಪರಿಚಿತ ಎಂದು ಕಂಡುಬಂದಿತ್ತು. ಆ ಬಳಿಕ ಗುರುತನ್ನು ಪತ್ತೆ ಹಚ್ಚಲಾಗಿದ್ದು, ಕೇರಳದ ವಯನಾಡ್ ಜಿಲ್ಲೆಯ ಮಾನಂದವಾಡಿ ತಾಲೂಕಿನ ಪುಲ್ಪಳ್ಳಿ ನಿವಾಸಿ ಮುಹಮ್ಮದ್ ಅಶ್ರಫ್(38) ಎಂದು ಗುರುತಿಸಲಾಗಿತ್ತು.

ಮರಣೋತ್ತರ ಪರೀಕ್ಷೆಯ ನಂತರ ವೆನ್‌ಲಾಕ್ ಜಿಲ್ಲಾಸ್ಪತ್ರೆಯ ಶವಾಗಾರದಲ್ಲೇ ಇರಿಸಲಾಗಿತ್ತು. ಮಂಗಳವಾರ ರಾತ್ರಿ ಮಂಗಳೂರಿಗೆ ಅಶ್ರಫ್ ಅವರ ತಮ್ಮ ಅಬ್ದುಲ್ ಜಬ್ಬಾರ್ ಅವರು ಆಗಮಿಸಿದ ಬಳಿಕ ಮೃತದೇಹವನ್ನು ಮಂಗಳೂರಿನ ಕೇಂದ್ರ ಜುಮಾ ಮಸೀದಿಯಾದ ಝೀನತ್ ಭಕ್ಷ್ ಮಸೀದಿಯಲ್ಲಿ ಸ್ನಾನ ಮಾಡಿಸಿ, ಆ್ಯಂಬುಲೆನ್ಸ್‌ನ ಮೂಲಕ ಕೇರಳಕ್ಕೆ ಕೊಂಡೊಯ್ಯಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಅಶ್ರಫ್ ಅವರ ಕುಟುಂಬವು ಮಲಪ್ಪುರಂ ಜಿಲ್ಲೆಯ ಚೋಲಕ್ಕುಂಡು ಎಂಬಲ್ಲಿ ವಾಸಿಸುತ್ತಿದ್ದು, ಅಲ್ಲಿಯೇ ಸಮೀಪದ ಮಸೀದಿಯಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ.

WhatsApp Image 2025 04 30 at 12.01.04 PM

ಮೃತಪಟ್ಟ ಅಶ್ರಫ್ ಅವರು ಸಣ್ಣ ಪ್ರಮಾಣದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ನಿರ್ದಿಷ್ಟವಾದ ಕೆಲಸ ಎಂಬುದು ಇರಲಿಲ್ಲ. ಅವರು ಊರೂರು ತಿರುಗುತ್ತಾ ಸಿಕ್ಕಿದ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮಗನ ಮೃತದೇಹ ಕಂಡು ಕಣ್ಣೀರಿಟ್ಟ ತಾಯಿ ರುಕಿಯಾ

ಮೃತಪಟ್ಟ ಅಶ್ರಫ್ ಅವರು ಮಾನಸಿಕವಾಗಿ ಸ್ವಲ್ಪ ಸಮಸ್ಯೆ ಇದ್ದುದ್ದರಿಂದ ವಿವಾಹಿತರಾಗಿರಲಿಲ್ಲ. ತಂದೆ ಕುಂಞೀದುಕ್ಕ ಹಾಗೂ ತಾಯಿ ರುಕಿಯಾ ಸೇರಿದಂತೆ ಇಬ್ಬರು ಸಹೋದರಿಯರು ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.

ಅಶ್ರಫ್ ಅವರ ಮೃತದೇಹ ವೀಕ್ಷಿಸಲು ಕುಟುಂಬದ ಸದಸ್ಯರಿಗೆ ಆ್ಯಂಬುಲೆನ್ಸ್‌ನಲ್ಲಿಯೇ ವ್ಯವಸ್ಥೆ ಮಾಡಿದ್ದರು. ಮಗನ ಮೃತದೇಹ ಊರಿಗೆ ತಲುಪುತ್ತಿದ್ದಂತೆಯೇ ಆ್ಯಂಬುಲೆನ್ಸ್‌ನಲ್ಲಿದ್ದ ಮಗನ ಮೃತದೇಹವನ್ನು ವೀಕ್ಷಿಸಿದ ತಾಯಿ ರುಕಿಯಾ ಅವರು, ಕಣ್ಣೀರಿಟ್ಟು ಮಗನ ಹಣೆಗೆ ಮುತ್ತಿಟ್ಟು, ಬೀಳ್ಕೊಟ್ಟರು. ಈ ದೃಶ್ಯ ನೋಡಿ, ಅಲ್ಲಿ ನೆರೆದಿದ್ದವರೆಲ್ಲ ಕಣ್ಣೀರಾದರು.

ಈದಿನ ಡಾಟ್‌ ಕಾಮ್ ಜೊತೆಗೆ ಮಾತನಾಡಿದ ಅಶ್ರಫ್ ಅವರ ಸಹೋದರ ಹಮೀದ್, “ನನ್ನ ತಮ್ಮ ಯಾರೊಂದಿಗೂ ಹೆಚ್ಚು ಮಾತನಾಡುವ ಸ್ವಭಾವದವನಲ್ಲ. ಮಾನಸಿಕ ಸಮಸ್ಯೆ ಇದ್ದರೂ ಕೂಡ ಕಾರ್ಮಿಕನಾಗಿ ದುಡಿಯುತ್ತಿದ್ದ. ಕೈಯ್ಯಲ್ಲಿ ಸಿಕ್ಕ ಹಣವನ್ನು ತಮಗಿಷ್ಟ ಬಂದವರಿಗೆ ಹಂಚುತ್ತಿದ್ದ. ಮನಸಾದಾಗ ಅಮ್ಮನನ್ನು ನೋಡಲು ಊರಿಗೆ ಬರುತ್ತಿದ್ದ. ಕಳೆದ ಎರಡು ತಿಂಗಳ ಹಿಂದಷ್ಟೇ ಅಮ್ಮನನ್ನು ನೋಡಲು ಬಂದಿದ್ದ. ಸಾಧು ಸ್ವಭಾವದವನ್ನು ಹೊಡೆದು ಕೊಂದವರಿಗೆ ಸರಿಯಾದ ಶಿಕ್ಷೆ ಆಗಲೇಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು ಘಟನೆ | ಇನ್ಸ್‌ಪೆಕ್ಟರ್‌ ಅಮಾನತು ಮಾಡಿ, ಉನ್ನತ ತನಿಖೆ ನಡೆಸಿ: ಗೃಹ ಸಚಿವರಿಗೆ ಉಸ್ತುವಾರಿ ಸಚಿವರಿಂದಲೇ ಪತ್ರ

“ಸಹೋದರ ಅಶ್ರಫ್ ಈ ಹಿಂದೆ ಬಾಂಬೆಗೂ ಹೋಗಿದ್ದರು. ಅಲ್ಲಿ ನೋಡಿದ ನಮ್ಮ ಪರಿಚಯದವರು ನಮಗೆ ತಿಳಿಸಿದ್ದರು. ಮಾನಸಿಕವಾಗಿ ಸ್ವಲ್ಪ ಸಮಸ್ಯೆ ಇದ್ದುದ್ದರಿಂದ ಚಿಕಿತ್ಸೆ ಕೂಡ ನೀಡಲು ಶ್ರಮಿಸಿದ್ದೆವು. ಆದರೂ ಗುಣಮುಖರಾಗಿರಲಿಲ್ಲ. ಅವರು ಊರೂರು ತಿರುಗುತ್ತಾ ಸಿಕ್ಕಿದ ಕೆಲಸ ಮಾಡುತ್ತಿದ್ದರು. ಸಹೋದರನ ಗುಂಪು ಹತ್ಯೆಗೆ ಕಾರಣರಾದ ಪ್ರತಿಯೊಬ್ಬರಿಗೂ ಕರ್ನಾಟಕ ಸರ್ಕಾರ ಶಿಕ್ಷೆಯಾಗುವಂತೆ ಮಾಡಬೇಕೆಂಬುದೇ ನಮ್ಮ ಆಗ್ರಹ. ನ್ಯಾಯ ಸಿಗಲಿದೆ ಎಂಬುದು ನಮ್ಮ ನಂಬಿಕೆ. ಓರ್ವನನ್ನು ಈ ರೀತಿಯಲ್ಲಿ ಹೊಡೆದು ಕೊಲ್ಲುತ್ತಾರೆಂದರೆ ಅವರು ಮನುಷ್ಯರೇ?” ಎಂದು ಮೃತ ಅಶ್ರಫ್ ಅವರ ಸಹೋದರ ಹಮೀದ್ ಈದಿನ ಡಾಟ್‌ ಕಾಮ್ ಜೊತೆಗೆ ಮಾತನಾಡುತ್ತಾ ಭಾವುಕರಾದರು.

WhatsApp Image 2025 04 30 at 12.16.10 PM
ಕೃಪೆ: ಮೀಡಿಯಾ ವನ್ ಚಾನೆಲ್, ಕೇರಳ

ಈವರೆಗೆ 20 ಮಂದಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ವಾಮಂಜೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಮುಸ್ಲಿಂ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರಾದ ಒಟ್ಟು ಆರೋಪಿಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಬಂಧಿತ ಆರೋಪಿಗಳನ್ನು ಯತಿರಾಜ್, ಸಚಿನ್, ಅನಿಲ್, ಸುಶಾಂತ್ ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಈ ಹಿಂದೆ ಇದೇ ಪ್ರಕರಣದಲ್ಲಿ 15 ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಐವರನ್ನು ಬಂಧಿಸುವ ಮೂಲಕ ತನಿಖೆಗೆ ಮತ್ತಷ್ಟು ಬಲ ಬಂದಿದೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...