ಮಂಗಳೂರು | ದಿನನಿತ್ಯದ ಬದುಕಿನಲ್ಲಿ ಚಂದ್ರನ ಪಾತ್ರ ಬಹುದೊಡ್ಡದು: ಅತುಲ್ ಭಟ್

Date:

ಚಂದ್ರನ ಅನ್ವೇಷಣೆಯಲ್ಲಿ ಮನುಕುಲವು ಸಾಧಿಸಿದ ಪ್ರಮುಖ ಮೈಲಿಗಲ್ಲುಗಳನ್ನು ಮನವರಿಕೆ ಮಾಡುವುದರ ಜತೆಗೆ ಜನರ ದಿನನಿತ್ಯದ ಬದುಕಿನಲ್ಲಿ ಚಂದ್ರನ ಪ್ರಭಾವ ಬೀರುವ ಅಂಶಗಳು ಹಾಗೂ ಉಪಯೋಗಗಳ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದು ಮಣಿಪಾಲ ಮಾಹೆಯ ಸಂಶೋಧನಾ ಸ್ಕಾಲರ್ ಅತುಲ್ ಭಟ್ ಹೇಳಿದರು.

ಮಂಗಳೂರು ನಗರದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಜ್ಞಾನ ಕೇಂದ್ರವು ಹಲವು ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಸಾಕ್ಷಿಯಾಗುತ್ತಿದ್ದು, ಇದರ ಸಂಪೂರ್ಣ ಸದುಪಯೋಗವನ್ನು ನಿರಂತರವಾಗಿ ಪಡೆದುಕೊಳ್ಳಬೇಕೆಂದು ತಿಳಿಸಿದರು. ನಂತರ ಚಂದ್ರನ ವಿವಿಧ ಆಯಾಮಗಳು, ಚಂದ್ರನ ಭ್ರಮಣೆ ಮತ್ತು ಪರಿಭ್ರಮಣೆಯ ಅವಧಿಗಳು ಮತ್ತು ಕುಳಿಗಳ ಬಗ್ಗೆ ಸಂರ್ಪೂಣವಾದ ಮಾಹಿತಿಯನ್ನು ಭಾಗವಹಿಸಿದ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷವಾದ ಕಿಟ್‍ಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿತೆಗಳ ಮುಖಾಂತರ ಚಂದ್ರನ ವಿವಿಧ ಆಯಾಮಗಳನ್ನು ಪ್ರಾಯೋಗಿಕವಾಗಿ ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಭಟ್ ಹಾಗೂ ತಂಡದವರು ನಡೆಸಿಕೊಟ್ಟರು. ತಾರಾಲಯದಲ್ಲಿ ‘ದಿ ಮೂನ್ʼ ಎಂಬ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು.

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಅರುಣ್ ಕುಮಾರ್ ಎನ್. ಮಾತನಾಡಿ, ಇಂತಹ ಕಾರ್ಯಕ್ರಮಗಳು ನಾವು ಚಂದ್ರನ ಮೇಲೆ ಮಾಡಿದ ಅನ್ವೇಷಣೆಗಳನ್ನು ಮೆಲುಕು ಹಾಕುವುದರ ಜತೆಗೆ ಮುಂದೆ ಕೈಗೊಳ್ಳಬಹುದಾದ ಸಂಶೋಧನೆಗಳಿಗೆ ಪ್ರೇರಣೆಯಾಗಲಿವೆ ಎಂದರು. ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ ಅಶೋಕ್ ಕೆ.ಆರ್ ಮಾತನಾಡಿ, ಪಿಲಿಕುಳವು ನಿರಂತರವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಇದನ್ನೂ ಓದಿ: ಮಂಗಳೂರು | ಜು.23ರಂದು ಲೋಕಾಯುಕ್ತ ಜನಸಂಪರ್ಕ ಸಭೆ

ಕಾರ್ಯಕ್ರಮದಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕಿ  ಡಾ. ಶಕೀಲಾ ಹಾಗೂ ಯೆನೆಪೋಯ ಇನ್ಸಿಟ್ಯೂಟ್ ಆಫ್ ಆಟ್ರ್ಸ್, ಸೈನ್ಸ್, ಕಾಮರ್ಸ್ ಆಂಡ್ ಮ್ಯಾನೇಜ್‍ಮೆಂಟ್‍ನ ಸಹ ಪ್ರಾಧ್ಯಾಪಕಿ ಕೆ. ಮಾಯಾ ಕುಡ್ವ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...