ಮಂಗಳೂರು | ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ ಬಳಿಕವೂ ಮುಂದುವರಿದ ಅನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

Date:

  • ‘ಕೇರಳ ಸ್ಟೋರಿ’ ನೋಡಿಯೂ ನಿಮಗೆ ಬುದ್ಧಿ ಬರುವುದಿಲ್ವ ಎಂದು ಹೇಳಿ ಹಲ್ಲೆ
  • ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಯುವತಿಯರು

ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕಾರ್ಯ ಪ್ರವೃತ್ತರಾದ ಮಂಗಳೂರು ಪೊಲೀಸರು, ಇಬ್ಬರು ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ.

ಬಂಧಿತರನ್ನು ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ(32) ಎಂದು ಗುರುತಿಸಲಾಗಿದೆ.

ಮಂಗಳೂರಿನ ಬ್ಯಾಚುಲರ್ ಆಫ್ ಹಾಸ್ಪಿಟಲ್ ಆ್ಯಡ್ಮೀಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪಣಂಬೂರು ಬೀಚ್‌ಗೆ ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳನ್ನು ವೀಕ್ಷಿಸುತ್ತಿದ್ದ ಈ ಇಬ್ಬರು ಆರೋಪಿಗಳು, ತಮ್ಮ ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಚಲನವಲನಗಳನ್ನು ಚಿತ್ರೀಕರಿಸಿದ್ದರು. ಆದರೆ ಇದನ್ನು ಗಮನಿಸಿದ್ದರೂ ಕೂಡ ವಿದ್ಯಾರ್ಥಿಗಳ ಗುಂಪಿನ ಯುವಕರು, ತಮ್ಮಪಾಡಿಗೆ ಇದ್ದರು. ಬಳಿಕ ಯುವಕರು ಬೈಕ್‌ನಲ್ಲಿ ವಾಪಸ್ ಹೋಗಿದ್ದರೆ, ವಿದ್ಯಾರ್ಥಿನಿಯರು ಬಸ್ ನಲ್ಲಿ ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿನಿಯರ ಪೈಕಿ ಕ್ರಿಶ್ಚಿಯನ್ ಸಮುದಾಯದ ಯುವತಿ ನಗರದ ಚಿಲಿಂಬಿಯಲ್ಲಿ ಬಸ್‌ನಿಂದ ಇಳಿದು ತನ್ನ ಪಿಜಿ ಕಡೆ ತೆರಳುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು, ಯುವತಿಯ ಮೈಮೇಲೆ ಕೈಹಾಕಿ ಬೆದರಿಸಿದ್ದು, ‘ಕೇರಳ ಸ್ಟೋರಿ’ ಸಿನಿಮಾ ನೋಡಿಯೂ ನಿಮಗೆ ಬುದ್ಧಿ ಬರುವುದಿಲ್ವಾ ಎಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ.

ನಗರದ ಬಿಜೈ ಕಾಪಿಕಾಡ್ ನ 7ನೇ ಕ್ರಾಸ್‌ನಲ್ಲಿ ತಡೆದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಲಾಗಿತ್ತು. ಬಳಿಕ ಈ ಘಟನೆಗೆ ಸಂಬಂಧಿಸಿದಂತೆ ಉರ್ವ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯರು ಪ್ರಕರಣ ದಾಖಲಿಸಿದ್ದರು.

ಆರೋಪಿಗಳನ್ನು ದಸ್ತಗಿರಿ ಮಾಡಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್‌ ಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರೆಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆಯ ಬಳಿಕವೂ ಮುಂದುವರಿದ ಅನೈತಿಕ ಪೊಲೀಸ್‌ಗಿರಿ ಮುಂದುವರಿದಿದ್ದು, ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಆರೋಪಿಗಳ ಬಂಧನವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...