ಮಂಗಳೂರು | ಏ.12ರಂದು ನಡೆಯಲಿರುವ ಮೂಳೂರು- ಅಡ್ಡೂರು ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ

Date:

ಮಂಗಳೂರು ತಾಲೂಕಿನ ಗುರುಪುರದ ಮಾಣಿಬೆಟ್ಟುಗುತ್ತಿನ ಎದುರು ಗದ್ದೆಯಲ್ಲಿ ಏಪ್ರಿಲ್ 12ರಂದು ನಡೆಯಲಿರುವ ದ್ವಿತೀಯ ವರ್ಷದ ಮೂಳೂರು- ಅಡ್ಡೂರು ಜೋಡುಕರೆ ಕಂಬಳೋತ್ಸವಕ್ಕೆ ಭರದ ಸಿದ್ಧತೆ ನಡೆದಿದೆ. ದ.ಕ. ಜಿಲ್ಲೆಯ ಕೊನೆಯ ಹೊನಲು ಬೆಳಕಿನ ಕಂಬಳವನ್ನು ವಿಶಿಷ್ಟವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದ್ದಾರೆ.

ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 8.30ಕ್ಕೆ ಕಂಬಳದ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ನೆರವೇರಿಸುವರು. ಸರ್ವಧರ್ಮ ಗುರುಗಳ ಉಪಸ್ಥಿತಿಯಲ್ಲಿ ನಡೆಯಲಿರುವ ಕಂಬಳದಲ್ಲಿ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ, ಗುರುಪುರ ಪೊಂಪೈ ಚರ್ಚ್‌ ಧರ್ಮಗುರು ವಂ. ರೊಡಾಲ್ಫ್ ರವಿ ಡೇಸಾ, ಕೈಕಂಬ ಅಸ್ರಾರುದ್ದೀನ್ ಮಸೀದಿಯ ಧಾರ್ಮಿಕ ಗುರು ಅಬ್ದುಲ್ ಕಬೀರ್ ದಾರಿಮಿ ಭಾಗವಹಿಸಲಿದ್ದಾರೆ ಎಂದರು.

ಜರ್ಮನ್ ತಂತ್ರಜ್ಞಾನದ ಟೆಂಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ವಿಶೇಷತೆಗಳೊಂದಿಗೆ ನಡೆಯಲಿರುವ ಕಂಬಳದಲ್ಲಿ ಜರ್ಮನ್ ತಂತ್ರಜ್ಞಾನದ ಟೆಂಟ್ ಅಳವಡಿಸಿ ಡಿಜಿಟಲ್ ವೇದಿಕೆಯನ್ನು ರಚಿಸಲಾಗುತ್ತಿದೆ. ಕಂಬಳದ ಜತೆ ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ‘ಯಕ್ಷ ವಸುಂಧರ’ ಎಂಬ ಯಥೋತ್ಸವ ಬೆಳಗ್ಗೆ 10ರಿಂದ ಆರಂಭಗೊಳ್ಳಲಿದೆ. ಹಿರಿಯ ಹಿಮ್ಮೇಳ ವಾದಕ ಹಾಗೂ ಯಕ್ಷ ಗುರು ದಿ. ಜಿ.ಟಿ. ಅಣ್ಣು ಭಟ್ ಅವರ ಸ್ಮರಣಾರ್ಥ ಹಿರಿಯರ ನೆನಪು ಕಾರ್ಯಕ್ರಮ, ತೆಂಕುತಿಟ್ಟು ಯಕ್ಷಗಾನ ಸ್ಥಿತ್ಯಂತರಗಳು ವಿಷಯದಲ್ಲಿ ವಿಚಾರಗೋಷ್ಠಿ, ತಾಳಮದ್ದಳೆ ಹಾಗೂ ಅಹೋರಾತ್ರಿ ಯಕ್ಷಗಾನವನ್ನು ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿಯ ಗೌರವಾಧ್ಯಕ್ಷ ಪದ್ಮನಾಭ ಕೋಟ್ಯಾನ್ ವಿವರಿಸಿದರು.

WhatsApp Image 2025 04 10 at 7.45.07 PM

69 ಪದಕ ವೀರ ದೂಜನಿಗೆ ಸನ್ಮಾನ, ಅಂಚೆ ಚೀಟಿ ಬಿಡುಗಡೆ

ದ.ಕ. ಜಿಲ್ಲೆಯಲ್ಲಿ ಈ ಋತುಮಾನದ ಕೊನೆಯ ಕಂಬಳ ಇದಾಗಿದ್ದು, ಸಂಜೆ 6.30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವರು. ವಿಧಾನಸಭಾ ಸ್ಪೀಕ‌ರ್ ಯು.ಟಿ.ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತರಿರುವರು. 200ಕ್ಕೂ ಅಧಿಕ ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಇನಾಯತ್ ಅಲಿ ಮಾಹಿತಿ ನೀಡಿದರು.

ಕಂಬಳ ಕ್ಷೇತ್ರದಲ್ಲಿ ತನ್ನ ಓಟದ ಸಾಮರ್ಥ್ಯದಿಂದ ಛಾಪು ಮೂಡಿಸಿರುವ, 69 ಪದಕ ವಿಜೇತ ದೂಜ ಕೋಣನಿಗೆ ಸನ್ಮಾನ ಹಾಗೂ ಅಂಚೆ ಇಲಾಖೆಯಿಂದ ದೂಜ ಕುರಿತ ಅಂಚೆ ಚೀಟಿ ಬಿಡುಗಡೆ ನಡೆಯಲಿದೆ. ಭಾಗವಹಿಸುವ ಪ್ರತಿ ಕೋಣಗಳಿಗೆ ಬೆಳ್ಳಿಯ ನಾಣ್ಯ ನೀಡಲಾಗುವುದು. ಕಂಬಳವು ಜಾತಿ, ಮತ ಧರ್ಮದ ಬೇಧವಿಲ್ಲದೆ ನಡೆಯುತ್ತಿದ್ದು, ಹಲವು ಸೆಲೆಬ್ರಿಟಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದರು.

ಇದನ್ನು ಓದಿದ್ದೀರಾ? ‘ಮಂಗಳೂರು ಹಜ್‌ ಭವನ’ಕ್ಕಾಗಿ 8 ಕೋಟಿ ಮೌಲ್ಯದ 1.8 ಎಕರೆ ಜಮೀನು ದಾನ ಮಾಡಿದ ಇನಾಯತ್ ಅಲಿ

ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿಯ ಸ್ಥಾಪಕ ಅಧ್ಯಕ್ಷ ರಾಜ್ ಕುಮಾರ್ ಶೆಟ್ಟಿ, ಮುಂಬೈ ಸಮಿತಿಯ ಅಧ್ಯಕ್ಷ ಸತೀಶ್‌ ಶೆಟ್ಟಿ, ಸಮಿತಿಯ ಪದಾಧಿಕಾರಿಗಳಾದ ಸುರೇಂದ್ರ ಕಂಬಳಿ, ಮೆಲ್ವಿನ್, ಯಶವಂತ ಶೆಟ್ಟಿ, ಪುರುಷೋತ್ತಮ ಚಿತ್ರಾಪುರ, ವಿನಯ್ ಶೆಟ್ಟಿ, ಜಯಶೀಲ ಅಡ್ಯಂತಾಯ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...