ಮಂಗಳೂರು | ಮುಮ್ತಾಝ್ ಅಲಿ ಬ್ಲ್ಯಾಕ್‌ಮೇಲ್ ಪ್ರಕರಣ : ಸಮಗ್ರ ತನಿಖೆಗೆ ಹೋರಾಟ ಸಮಿತಿ ಆಗ್ರಹ

Date:

ಮಂಗಳೂರಿನ ಪ್ರಸಿದ್ಧ ಉದ್ಯಮಿ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಮುಮ್ತಾಝ್ ಅಲಿ ಆತ್ಮಹತ್ಯೆ ಪ್ರಕರಣ ಸಮಾಜದಲ್ಲಿ ತಲ್ಲಣ ಮೂಡಿಸಿದೆ. ಹನಿಟ್ರ್ಯಾಪ್, ಬ್ಲ್ಯಾಕ್‌ಮೇಲ್‌ನಿಂದ ಕಂಗೆಟ್ಟು ಈ ಆತ್ಮಹತ್ಯೆ ಸಂಭವಿಸಿದೆ. ಪ್ರಕರಣದಲ್ಲಿ ಇನ್ನಷ್ಟು ನಿಗೂಢ ಅಂಶಗಳು, ಭಾಗೀದಾರಿಕೆಯ ಶಂಕೆ ಇದೆ. ಹಾಗಾಗಿ, ಆಳವಾದ ತನಿಖೆಯ ಅಗತ್ಯವಿದೆ ಎಂದು ಸುರತ್ಕಲ್ ನಾಗರಿಕ ಹೋರಾಟ ಸಮಿತಿ ಆಗ್ರಹಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ನಾಗರಿಕ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಈ ಪ್ರಕರಣ ಮಾತ್ರವಲ್ಲದೆ ಇನ್ನಷ್ಟು ಹನಿಟ್ರ್ಯಾಪ್, ಬ್ಲ್ಯಾಕ್‌ಮೇಲ್ ಪ್ರಕರಣಗಳು ಮಂಗಳೂರಿನ ಪ್ರತಿಷ್ಠಿತರು, ಉದ್ಯಮಿಗಳನ್ನು ಗುರಿಯಾಗಿಸಿ ನಡೆದಿರುವ ಸುದ್ದಿಗಳು ಹರಿದಾಡುತ್ತಿವೆ. ಸದ್ದಿಲ್ಲದೆ ಮುಗಿದು ಹೋಗಿರುವ ಇಂತಹ ಪ್ರಕರಣಗಳಲ್ಲಿ ಹಲವು ಕುಟುಂಬಗಳು ಛಿದ್ರವಾಗಿವೆ ಎಂಬ ಮಾತುಗಳಿವೆ. ಈ ಎಲ್ಲಾ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರತಿಷ್ಟಿತ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ, ಬ್ಲ್ಯಾಕ್‌ಮೇಲ್‌ ಪ್ರಕರಣವನ್ನು ಆಳವಾದ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಹಿಳೆಯನ್ನು ಬಳಸಿಕೊಂಡು ಹಣ ಹಾಗೂ ವೈಯಕ್ತಿಕ ದ್ವೇಷ ಸಾಧನೆ ಸಹಿತ ವಿವಿಧ ಉದ್ದೇಶ ಸಾಧನೆಗಾಗಿ ಮುಮ್ತಾಝ್ ಅಲಿಯವರನ್ನು ಹಾಗೂ ಕುಟುಂಬವನ್ನು ಗುರಿಯಾಗಿಸಿ ಪರಿಚಿತ ತಂಡ ಬ್ಲ್ಯಾಕ್‌ಮೇಲ್‌ ಮಾಡಿದೆ. ಅಸಾಧ್ಯ ಕಿರುಕುಳ ಕೂಡ ನೀಡಿದೆ. ಇದರಿಂದ ಉಂಟಾದ ಒತ್ತಡವನ್ನು ಭರಿಸಲಾಗದೆ ಮುಮ್ತಾಝ್ ಅಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆದರಿಕೆ, ಮಾನಸಿಕ ಕಿರುಕುಳ, ಪ್ರತಿಷ್ಠೆಗೆ ಕಳಂಕ ಹಚ್ಚುವ ಯತ್ನ, ಬ್ಲ್ಯಾಕ್‌ಮೇಲ್‌, ಸತತವಾಗಿ ಹಣ ಸುಲಿಗೆ… ಹೀಗೆ ಹಲವು ತಿಂಗಳುಗಳಷ್ಟು ದೀರ್ಘ ಕಾಲದ ವ್ಯಾಪ್ತಿಯನ್ನು ಈ ಪ್ರಕರಣ ಹೊಂದಿದೆ. ಕುಟುಂಬ ದೂರು ದಾಖಲಿಸಿದ ಆರು ಜನರಲ್ಲದೆ ಇನ್ನೂ ಹಲವರು ಈ ಕೃತ್ಯದಲ್ಲಿ ಕೈಯ್ಯಾಡಿಸಿರುವ ಅನುಮಾನಗಳು ಸಾರ್ವಜನಿಕ ವಲಯದಲ್ಲಿದೆ ಎಂದು ನಾಗರಿಕ ಹೋರಾಟ ಸಮಿತಿ ತಿಳಿಸಿದೆ.

ಮುನೀರ್ ಕಾಟಿಪಳ್ಳ
ನಾಗರಿಕ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ

ಮುಮ್ತಾಝ್ ಅಲಿ ಮುಸ್ಲಿಂ ಸಾಮಾಜಿಕ ರಂಗದಲ್ಲಿ ಮಾತ್ರವಲ್ಲದೆ, ಧಾರ್ಮಿಕ ವಲಯದಲ್ಲಿಯೂ ಪ್ರಭಾವಶಾಲಿ ವ್ಯಕ್ತಿತ್ವವಾಗಿ ಗುರುತಿಸಿಕೊಂಡಿದ್ದರು. ಅಲಿ ಕುಟುಂಬ ರಾಜಕೀಯವಾಗಿಯೂ, ಉದ್ಯಮ ವಲಯದಲ್ಲಿಯೂ ಪ್ರತಿಷ್ಟಿತ ಸ್ಥಾನಮಾನ ಹೊಂದಿದೆ‌. ಈ ಎಲ್ಲಾ ಅಂಶಗಳು, ಆರೋಪಿತರಲ್ಲಿ ಕೆಲವರ ಹಿನ್ನೆಲೆಗಳು ಸಾಮಾನ್ಯ ಒಂದು ಹನಿ ಟ್ರಾಪ್ ಅಲ್ಲ ಎಂಬ ಸಾರ್ವಜನಿಕ ವಲಯದ ಅನುಮಾನಗಳನ್ನು ಪುಷ್ಟಿಗೊಳಿಸುವಂತಿದೆ. ಮಮ್ತಾಜ್ ಅಲಿಯವರನ್ನು ಹಣಕಾಸಿನ ಬ್ಲಾಕ್ ಮೇಲ್ ಗೆ ಒಳಪಡಿಸಿದ ಸಂದರ್ಭ ದೊಡ್ಡ ಮೊತ್ತ ಪಾವತಿಯಾಗಿರುವ ಕುರಿತು ಕುಟಂಬವೇ ದೂರಿನಲ್ಲಿ ಒಪ್ಪಿಕೊಂಡಿದೆ. ಹಣ ಪಾವತಿಯ ತರುವಾಯವೂ ಬ್ಲ್ಯಾಕ್‌ಮೇಲ್ ಮುಂದುವರಿದದ್ದು, ಆಪ್ತ ಮಾತುಕತೆಗಳ ಆಡಿಯೋಗಳು ಆಯ್ದ ಕೆಲವು ಪ್ರತಿಷ್ಠಿತರಿಗೆ ತಲುಪಿರುವುದು ಪ್ರಕರಣ ಮೇಲ್ಕಂಡಷ್ಟು ಸರಳ ಅಲ್ಲ. ಹಣದ ಸುಲಿಗೆ ಮಾತ್ರ ಇವರ ಉದ್ದೇಶ ಆಗಿರಲಿಲ್ಲ ಎಂಬಂತೆ ಗೋಚರಿಸುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಪ್ರಕರಣದ ತನಿಖೆಯನ್ನು ವಿಶೇಷವಾಗಿ ಪರಿಗಣಿಸಬೇಕು. ಒತ್ತಡಗಳಿಗೆ ಮಣಿಯದ ದಕ್ಷ ಅಧಿಕಾರಿಗಳಿಗೆ ತನಿಖೆಯ ಹೊಣೆಗಾರಿಕೆ ನೀಡಬೇಕು ಎಂದು ಹೋರಾಟ ಸಮಿತಿ ಹೇಳಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಹಿಂದೂ ಮಾಲೀಕತ್ವದ ಶಾಲೆಗಳಿಗೆ ಮಾತ್ರ ಮಕ್ಕಳನ್ನು ಕಳುಹಿಸಬೇಕು; ದ್ವೇಷ ಬಿತ್ತಿದ ಪ್ರೊಫೆಸರ್!

ಹನಿಟ್ರ್ಯಾಪ್ ಪ್ರಕರಣಗಳು ಮಂಗಳೂರಿನಲ್ಲಿ ಸಾಮಾನ್ಯವಾಗುತ್ತಿದೆ‌. ಹಲವಾರು ಉದ್ಯಮಿಗಳು, ಪ್ರತಿಷ್ಠಿತರು ಇದರ ಬಲಿಪಶುಗಳಾಗಿದ್ದಾರೆ. ಲಕ್ಷ, ಕೋಟಿಗಳ ಲೆಕ್ಕದಲ್ಲಿ ಹಣ ಪಾವತಿಸಿ “ಸೆಟಲ್ ಮೆಂಟ್” ಮಾಡಿಕೊಂಡಿದ್ದಾರೆ. ಪೊಲೀಸ್ ದೂರುಗಳು ದಾಖಲಾಗದೆ ಪ್ರಕರಣಗಳು ಮುಚ್ಚಿಹೋಗಿವೆ. ಇದರಿಂದ ಹಲವು ಕುಟುಂಬಗಳು ನೆಮ್ಮದಿ ಕಳೆದು ಕೊಂಡು ಛಿದ್ರವಾಗಿವೆ ಎಂಬ ಪಿಸು ಮಾತುಗಳು ವರ್ಷಗಳಿಂದ ಚರ್ಚೆಯಲ್ಲಿವೆ. “ವೈಟ್ ಕಾಲರ್” ಸೋಗಿನ, ರಾಜಕೀಯ ಒಡನಾಟದ ಕೆಲವರು ಇಂತಹ ಪ್ರಕರಣಗಳ ಸೂತ್ರಧಾರರು ಎಂದು ಆರೋಪಗಳಿವೆ. ಮುಮ್ತಾಝ್ ಅಲಿ ಆತ್ಮಹತ್ಯೆ ಪ್ರಕರಣ ಸಮಾಜದಲ್ಲಿ ಉಂಟು ಮಾಡಿರುವ ತಲ್ಲಣಗಳನ್ನು ಗಮನಿಸಿಯಾದರೂ ಇಂತಹ ಜಾಲಗಳನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ದೃಢವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಾಗರಿಕ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...