ಮಂಗಳೂರು | ಮುಸ್ಲಿಂ ಯುವಕನ ದೀಪಾವಳಿ ಸಂಭ್ರಮ; ಗೂಡುದೀಪ ತಯಾರಿಸಿ ಹಂಚಿದ ಅಶ್ಫಾಕ್

Date:

ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಗೂಡುದೀಪಗಳನ್ನು ಮಾಡುವವರೇ ಅತಿ ವಿರಳ. ಆದರೆ, ಅಂತಿಮ ವರ್ಷದ ಎಂಜಿನಿಯರಿಂಗ್ ಓದುತ್ತಿರುವ ಮುಸ್ಲಿಂ ವಿದ್ಯಾರ್ಥಿ ಅಶ್ಫಾಕ್ ಎಂಬವರು ದೀಪಾವಳಿ ಮತ್ತು ಗೂಡುದೀಪದ ಮೇಲೆ ಅತಿಯಾದ ಪ್ರೀತಿ ಇಟ್ಟುಕೊಂಡಿದ್ದಾರೆ. ಈ ಬಾರಿಯ ದೀಪಾವಳಿಗೆ ಒಟ್ಟು 17 ಸಾಂಪ್ರದಾಯಿಕ ಗೂಡುದೀಪಗಳನ್ನು ತಯಾರಿಸಿ, ತನ್ನ ಸ್ನೇಹಿತರಿಗೆ ಹಂಚಿದ್ದಾರೆ. ಸೌಹಾರ್ದತೆಗೆ ಸಾಕ್ಷಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಏಳಿಂಜೆ ಗ್ರಾಮದ ಕೋಂಜಾಲು ಗುತ್ತುವಿನ ನಿವಾಸಿ ಅಶ್ಫಾಕ್ ಮೂಲತಃ ಬಾಗಲಕೋಟೆಯವರು. ಸ್ಥಜೋಂಜಾಲು ಗುತ್ತಿವನ ಮೂಲ ನಿವಾಸಿ ಕೌಶಲ್ಯ ಶೆಟ್ಟಿ ಅವರ ಪೋಷಣೆಯಲ್ಲಿ ಅಶ್ಫಾಕ್‌ ವಾಸಿಸುತ್ತಿದ್ದಾರೆ.

ಅಶ್ವಾಕ್ ಅವರು ದೀಪಾವಳಿ ಸಮಯದಲ್ಲಿ ಬಳಸಲಾಗುವ ದೀಪಗಳನ್ನು ಗಮನಿಸುತ್ತಿದ್ದರು. ಇದೀಗ, ಅವರೇ ಸ್ವತಃ ಗೂಡುದೀಪಗಳನ್ನು ತಯಾರಿಸಿದ್ದಾರೆ. ಅವರ ಕೆಲಸವು ಕೋಮುಸೌಹಾರ್ದತೆಗೆ ಸಾಕ್ಷಿಯಾಗಿರುವ ಜತೆಗೆ, ಅಶ್ವಾಕ್ ಸ್ಥಳೀಯರ ಪ್ರೀತಿಗೆ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮಂಗಳೂರು, ಮುಸ್ಲಿಂ, ದೀಪಾವಳಿ, ಸೌಹಾರ್ದ ದೀಪಾವಳಿ, ಗೂಡುದೀಪ, Mangalore, Muslim, Diwali, Friendly Diwali, GooduDeepa,

“ಅಶ್ವಾಕ್ ಕಳೆದ ಹಲವಾರು ವರ್ಷಗಳಿಂದ ಸಾಂಪ್ರದಾಯಿಕ ಗೂಡುದೀಪ ತಯಾರಿಸುತ್ತಿದ್ದಾರೆ. ಕಳೆದ ತಿಂಗಳು ರಜೆಯ ಸಮಯದಲ್ಲಿ ರಾತ್ರಿ-ಹಗಲು ಕುಳಿತು 17 ಸಾಂಪ್ರದಾಯಿಕ, ದೊಡ್ಡಗಾತ್ರದ ಗೂಡುದೀಪ ಸಿದ್ದಪಡಿಸಿದ್ದಾರೆ. ಆದರೆ, ಯಾವುದೇ ಗೂಡುದೀಪಗಳನ್ನು ಮಾರಾಟ ಮಾಡದೆ ತನ್ನ ಮಿತ್ರರಿಗೆ ಹಂಚಿ ಖುಷಿಪಟ್ಟಿದ್ದಾರೆ. ಕಲಾತ್ಮಕವಾದ ಎಲ್ಲ ಕೃತಿಗಳನ್ನೂ ಇವರು ಮಾಡುತ್ತಾರೆ. ಅಲ್ಲದೆ ಹೈನುಗಾರಿಕೆಯಲ್ಲೂ ತೊಡಗಿಸಿರುವ ಅಶ್ಫಾಕ್ ದನ ಸಾಕಾಣಿಕೆಯಲ್ಲಿ ಆಸಕ್ತಿ ಹೊಂದಿದ್ದಾರೆ” ಎಂದು ಕೌಶಲ್ಯ ಶೆಟ್ಟಿ ಹೇಳಿದ್ದಾರೆ.

“ಹಿಂದಿನಿಂದಲೂ ಅಪಾರ ಆಸಕ್ತಿ ಇತ್ತು. ಮಕ್ಕಳ ಸಹಕಾರದಿಂದ ಸಾಂಪ್ರದಾಯಿಕ ಗೂಡುದೀಪ ತಯಾರಿಕೆಯಲ್ಲಿ ತೊಡಗಿದೆ. ಕೌಶಲ್ಯ ಶೆಟ್ಟಿಯವರ ಪ್ರೋತ್ಸಾಹದಿಂದ ಇದು ಸಾಧ್ಯವಾಯಿತು” ಎಂದು ಎಂಜಿನಿಯರಿಂಗ್ ವಿದ್ಯಾರ್ಥಿ ಅಶ್ಫಾಕ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...