ಬಂಟ್ವಾಳ – ಮೂಡುಬಿದ್ರೆ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಸೌಲಭ್ಯ ಒದಗಿಸಿಕೊಡುವಂತೆ NSUIನ ಮಂಗಳೂರು ಘಟಕದ ವಿದ್ಯಾರ್ಥಿ ನಾಯಕ ಕ್ರಿಸ್ಟನ್ ಮಿನೇಜಸ್ ಎಂಎಲ್ಸಿ ಐವನ್ ಡಿಸೋಜಾ ಅವರಿಗೆ ಮನವಿ ಸಲ್ಲಿಸಿದರು.
“ಸರ್ಕಾರಿ ಬಸ್ ಸೇವೆ ಇಲ್ಲದೇ ಇರುವ ಕಾರಣ ವಿದ್ಯಾರ್ಥಿಗಳು ಖಾಸಗಿ ಬಸ್ ಅವಲಂಬಿಸಬೇಕಾಗಿದೆ. ಪ್ರಯಾಣದ ವೆಚ್ಚವೂ ಹೆಚ್ಚಾಗಿದ್ದು, ಬಸ್ಗಳಲ್ಲಿ ಅತೀ ಜನಸಂದಣಿ ವಿದ್ಯಾರ್ಥಿಗಳ ಸುರಕ್ಷತೆಗೆ ತೊಂದರೆ ಉಂಟುಮಾಡುತ್ತಿದೆ. ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ವಿದ್ಯಾರ್ಥಿ ಪಾಸ್ಗಳ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಪ್ರತಿದಿನ ಪ್ರಯಾಣ ವೆಚ್ಚ ಭರಿಸಲು ಕಷ್ಟವಾಗುತ್ತಿದೆ. ಜೊತೆಗೆ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪ್ರಯೋಜನವು ಈ ಮಾರ್ಗದಲ್ಲಿ ಯಾರಿಗೂ ಪಡೆಯಲು ಸಾಧ್ಯವಾಗುತ್ತಿಲ್ಲ. ಕೂಡಲೇ ಈ ಸಮಸ್ಯೆಗಳನ್ನು ಬಗರೆಹರಿಸಿ, ಈ ಮಾರ್ಗಕ್ಕೆ ಬಸ್ ಸೌಲಭ್ಯ ಒದಗಿಸಬೇಕು” ಎಂದು ಮನವಿ ಮಾಡಿರುವ ಪತ್ರವನ್ನು ಎಂಎಲ್ಸಿ ಐವನ್ ಅವರ ಮೂಲಕ ಸಾರಿಗೆ ಸಚಿವರಿಗೂ ಕಳಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು | ಕೊಂಕಣಿ ಭಾಷಾ ಮಂಡಳ್ನ ರಾಜ್ಯಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ಆಯ್ಕೆ
ಮಂಗಳೂರು (ದಕ್ಷಿಣ ಕನ್ನಡ) ಸಾರಿಗೆ ಉಪ ಆಯುಕ್ತ ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ ಮಲ್ಲಾಡ್ ಹಾಗೂ ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಅವರನ್ನು ಸ್ವತಃ ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ.
ಎಂಎಲ್ಸಿ ಐವನ್ ಡಿಸೋಜಾ ಅವರು ಈ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಸೇವೆ ಪ್ರಾರಂಭಿಸಲು ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.





