ಮಂಗಳೂರು | ಸಂಘಪರಿವಾರದ ದಾಂಧಲೆಗೆ ಪೊಲೀಸ್ ಕಮಿಷನರ್ ಅಗರ್ವಾಲ್ ನೇರ ಹೊಣೆ: ಡಿವೈಎಫ್ಐ

Date:

ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ಕಾರ್ಯಕರ್ತರು ದಾಂಧಲೆ ಮೆರೆಯಲು ಮಂಗಳೂರು ನಗರದ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನೇರ ಹೊಣೆ. ಅನೈತಿಕ ಚಟುವಟಿಕೆಗಳಿಗೆ ಮುಕ್ತ ಅವಕಾಶಕೊಟ್ಟು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಕಾರಣಕ್ಕೆ ಮತ್ತೆ ನೈತಿಕ ಪೊಲೀಸ್ ಗಿರಿ ತಲೆ ಎತ್ತಿ ಮಂಗಳೂರಿನ ಮಾನವನ್ನು ಹರಾಜಿಗಿಟ್ಟಿದೆ ಎಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಆರೋಪಿಸಿದೆ.

ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಸಾಜ್ ಪಾರ್ಲರ್, ಅಕ್ರಮ ಮರಳುಗಾರಿಕೆ, ವೇಶ್ಯಾವಾಟಿಕೆ, ಜುಗಾರಿ ಅಡ್ಡೆ, ಮಡ್ಕ ಸೇರಿದಂತೆ ಹಲವು ಬಗೆಯ ಗ್ಯಾಂಬ್ಲಿಂಗ್‌ಗಳು ರಾಜಾರೋಷವಾಗಿ ನಡೆಯುತ್ತಿರುವ ಬಗ್ಗೆ ಡಿವೈಎಫ್ಐ ಸಂಘಟನೆ ಪ್ರಾರಂಭದಿಂದಲೇ ಆರೋಪಿಸುತ್ತಾ ಬಂದಿದ್ದರೂ, ಈಗಿನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಈ ಬಗ್ಗೆ ಈವರೆಗೂ ಯಾವುದೇ ಕ್ರಮಕೈಗೊಳ್ಳದೆ ಅವುಗಳಿಗೆ ಮುಕ್ತವಾಗಿ ಅವಕಾಶಕೊಟ್ಟು ನಗರದಲ್ಲಿಂದು ಹರಾಜಕತೆಯನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿದೆ.

ಪ್ರಗತಿಪರರು ನಡೆಸುವ ಜನಪರ ಹೋರಾಟಗಳಿಗೆ ಅವಕಾಶ ಕೊಡದೆ ವಿನಾಕಾರಣ ಕೇಸು ದಾಖಲಿಸುವ ಕಮಿಷನರ್, ಅದೇ ಸಂಘಪರಿವಾರದ ಕಾರ್ಯಕ್ರಮಕ್ಕೆ ಎಲ್ಲೆಂದರಲ್ಲಿ (ಕಾನೂನು ನಿಯಮ ಮೀರಿ) ಅವಕಾಶ ಕಲ್ಪಿಸಿ ನೇರ ಬೆಂಬಲಿಸುತ್ತಾ ಬಂದ ಕಾರಣಕ್ಕೆ ಇಂದು ರಾಮ ಸೇನೆ ಕಾರ್ಯಕರ್ತರು ಮತ್ತೆ ನಗರದಲ್ಲಿ ನೈತಿಕ ಗೂಂಡಾಗಿರಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ. ಈಗಾಗಲೇ ಒಂದಷ್ಟು ನಿಯಂತ್ರಿಸಲಾಗಿದ್ದ ಸಂಘಪಾರಿವಾರದ ಅನೈತಿಕ ಪೊಲೀಸ್‌ಗಿರಿ ಮತ್ತೆ ಪುನರಾವರ್ತಿಸುವಲ್ಲಿ ಕಮಿಷನರ್ ಅಗರ್ವಾಲ್ ನೇರ ಹೊಣೆಯಾಗಿದ್ದು, ಮಂಗಳೂರು ನಗರದ ಮಾನವನ್ನು ಮತ್ತೆ ಹರಾಜು ಹಾಕಿ ತಲೆ ತಗ್ಗಿಸುವಂತೆ ಮಾಡಿದೆ ಎಂದು ಡಿವೈಎಫ್‌ಐ ದೂರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಪೊಲೀಸ್ ಇಲಾಖೆಯ ವೈಫಲ್ಯತೆ ಬಗ್ಗೆ ಮತ್ತು ಕಳಂಕಿತ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಅಮಾನತುಗೊಳಿಸಿ ವರ್ಗಾಹಿಸಲು ಮಾನ್ಯ ಮುಖ್ಯಮಂತ್ರಿ, ಗೃಹ ಮಂತ್ರಿಗಳ ಗಮನಕ್ಕೆ ತಂದರೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ಬೇಜವಾಬ್ದಾರಿಯನ್ನು ವಹಿಸಿರುತ್ತಾರೆ. ನಗರದ ಪೊಲೀಸ್ ಅವ್ಯವಸ್ಥೆಯನ್ನು ಸರಿಪಡಿಸದ ಕಾರಣಕ್ಕೆ ಸಂಘಪರಿವಾರದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೂಲಕ ನಗರದಲ್ಲಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ. ಈ ಎಲ್ಲ ಬೆಳವಣಿಗೆಗೆ ಮಂಗಳೂರು ನಗರದಲ್ಲಿ ಮತ್ತೆ ಅಶಾಂತಿ ಸೃಷ್ಟಿಸಿ ಸಾಮರಸ್ಯ ಕದಡಲು ಅವಕಾಶ ಮಾಡಿಕೊಡುವಂತಹ ಬೆಳವಣಿಗೆಗೂ ಕಾಂಗ್ರೆಸ್ ಸರಕಾರವೂ ನೇರ ಹೊಣೆಯನ್ನು ಹೊರಬೇಕಾಗಿದೆ ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಸೆಲೂನ್‌ಗೆ ನುಗ್ಗಿ ದಾಂಧಲೆ ಪ್ರಕರಣ: ರಾಮಸೇನೆಯ ಪ್ರಸಾದ್ ಅತ್ತಾವರ ಬಂಧನ

ರಾಜ್ಯ ಸರಕಾರ ಈ ಕೂಡಲೇ ಎಚ್ಚೆತ್ತು ರಾಮ ಸೇನೆ ನಡೆಸಿದ ದಾಂಧಲೆ ನೈತಿಕಪೊಲೀಸ್ ಗಿರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೊಳಪಡಿಸಬೇಕು. ಮಂಗಳೂರು ನಗರದಲ್ಲಿ ಹದಗೆಟ್ಟಿರುವ ಪೊಲೀಸ್ ವ್ಯವಸ್ಥೆಯನ್ನು ಸರಿಪಡಿಸಬೇಕು. ಅಕ್ರಮ ಚಟುವಟಿಕೆ ನಿಯಂತ್ರಿಸಲಾಗದ ಕಳಂಕಿತ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಕೂಡಲೇ ಅಮಾನತುಗೊಳಿಸಿ ವರ್ಗಾಯಿಸಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸುತ್ತದೆ ಎಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...