ಮಂಗಳೂರು | ಸೀರತ್ ಅಭಿಯಾನ ಪ್ರಯುಕ್ತ ಕುಪ್ಪೆಪದವಿನಲ್ಲಿ ಸಾರ್ವಜನಿಕ ಸಭೆ

Date:

ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ರಾಜ್ಯ ಅಭಿಯಾನ ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ ರಾಜ್ಯ ಸೀರತ್ ಅಭಿಯಾನ ಹಾಗೂ ಮಹಿಳಾ ವಿಭಾಗದ ವತಿಯಿಂದ ನೈತಿಕತೆಯೇ ಸ್ವಾತಂತ್ರ್ಯ ರಾಷ್ಟ್ರ ಅಭಿಯಾನದ ಅಂಗವಾಗಿ ಜಮಾಅತೆ ಇಸ್ಲಾಮೀ ಹಿಂದ್ ಎಡಪದವು ವರ್ತುಲದ ವತಿಯಿಂದ ಕುಪ್ಪೆಪದವು ಜಂಕ್ಷನ್‌ನಲ್ಲಿ ಸಾರ್ವಜನಿಕ ಸಭೆ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಧ್ಯಾಪಕರಾದ ಡಾ. ಸುರೇಶ್ ವೈ. ಮಾತನಾಡಿ, “ಸಮಾಜದಲ್ಲಿ ಸೌಹಾರ್ದತೆಗೆ ಒತ್ತು ನೀಡುವ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಬೇಕು. ದೈಹಿಕ ಆರೋಗವನ್ನು ರಕ್ಷಿಸುವ ವೈದ್ಯರು ಸಮಾಜದ ಆರೋಗ್ಯವನ್ನು ಕೂಡಾ ಕಾಪಾಡುವ ಹೊಣೆ ಉಳ್ಳವರಾಗಿದ್ದಾರೆ” ಎಂದರು.

ನೈತಿಕತೆಯೇ ಸ್ವಾತಂತ್ರ್ಯ ವಿಚಾರವಾಗಿ ಅನುಪಮ ಮಹಿಳಾ ಮಾಸಿಕದ ಉಪ ಸಂಪಾದಕಿ ಸಬೀಹಾ ಫಾತಿಮಾ ಮಾತನಾಡಿ, “ನಮ್ಮ ಹುಟ್ಟು ಹೇಗಿರಬೇಕೆಂಬ ಸ್ವಾತಂತ್ರ್ಯ ನಮಗಿರಲಿಲ್ಲ. ಆದರೆ, ಹುಟ್ಟಿದ ನಂತರ ಹೇಗೆ ಜೀವಿಸಬೇಕೆಂಬ ಸ್ವಾತಂತ್ರ್ಯ ಇದೆ. ಈ ಸ್ವಾತಂತ್ರ್ಯ ಕೆಡುಕನ್ನು ಪಸರಿಸಲಿಕ್ಕಾಗಿ ಅಲ್ಲ, ಅನೈತಿಕತೆಯನ್ನು ಬೆಳೆಸಲಿಕ್ಕಾಗಿಯೂ ಅಲ್ಲ. ಈ ಸ್ವಾತಂತ್ರ್ಯ ನೈತಿಕ ಮೌಲ್ಯಗಳೊಂದಿಗೆ ಬದುಕಲಿಕ್ಕಾಗಿ, ಪರಸ್ಪರ ಗೌರವವನ್ನು ಬೆಳೆಸಲಿಕ್ಕಾಗಿ ಆಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸೀರತ್ ಅಭಿಯಾನ

ಪಾದುವ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಗ್ರೆಗರಿ ರೊಸಾರಿಯೋ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸನ್ಮಾರ್ಗ ವಾರಪತ್ರಿಕೆಯ ಸಂಪಾದಕರೂ, ಲೇಖಕರೂ ಆದ ಎ.ಕೆ ಕುಕ್ಕಿಲ ಮಾತನಾಡಿ, “ಯುವಕರಲ್ಲಿ ಆವೇಶವನ್ನು ತುಂಬುವ ಸಲುವಾಗಿ ವೇದಿಕೆಗಳನ್ನು ಸಜ್ಜುಗೊಳಿಸಲಾಗುತ್ತಿರುವ ಈ ಸನ್ನಿವೇಶದಲ್ಲಿ ನೈತಿಕತೆಯ ವಿಚಾರವನ್ನಿಟ್ಟು ಕಾರ್ಯಕ್ರಮ ರೂಪಿಸಿರುವುದು ಶ್ಲಾಘನೀಯ. ನಂಬಿಕೆ ಕಳೆದುಕೊಂಡಿರುವ, ಸುಳ್ಳು ವ್ಯಾಪಕವಾಗಿರುವ ಸಮಾಜದಲ್ಲಿ ಸತ್ಯವನ್ನು ಪಸರಿಸುವುದು ಮತ್ತು ನೈತಿಕತೆಯನ್ನು ಬೆಳೆಸುವುದು ಅನಿವಾರ್ಯವಾಗಿದೆ. ವ್ಯಕ್ತಿಗಳ ಚಾರಿತ್ರ್ಯ ನಾಶವಾಗುತ್ತಿದೆ. ಮೌಲ್ಯಗಳು ಅಧಪತನವಾಗುತ್ತೆದೆ. ಇದನ್ನಉ ಬದಲಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ” ಎಂದರು.

ಕಾರ್ಯಕ್ರಮದಲ್ಲಿ ಯುವ ಲೇಖಕ ಅಬೂ ಝೀಶಾನ್ ಬರೆದಿರುವ “ಸ್ನೇಹದ ಪ್ರತೀಕ ಪ್ರವಾದಿ ಮುಹಮ್ಮದ್ (ಸ)” ಪುಸ್ತಕ ಬಿಡುಗಡೆ ನಡೆಯಿತು. ವೇದಿಕೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಎಡಪದವು ವರ್ತುಲದ ಸಂಚಾಲಕರಾದ ಝಾಕಿರ್ ಹಸನ್, ಹಮ್ದ್ ಎಜುಕೇಶನಲ್-ಚಾರಿಟೇಬಲ್ ಟ್ರಸ್ಟ್ ಕುಪ್ಪೆಪದವು ಅಧ್ಯಕ್ಷರಾದ ಇಸ್ಮಾಯಿಲ್ ಶರೀಫ್ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಬೆಂಗಳೂರು | ಯುವತಿ ಮಹಾಲಕ್ಷ್ಮೀ ಕೊಲೆ ಪ್ರಕರಣ: ಆರೋಪಿಯ ಮಾಹಿತಿ ಲಭ್ಯ ಎಂದ ಕಮಿಷನರ್

ಕಾರ್ಯಕ್ರಮದಲ್ಲಿ ಮಾ. ಮುಬಾರಿಝ್ ಕಿರಾಅತ್ ಪಠಿಸಿದರು, ಹೈದರ್ ಎಡಪದವು ಸ್ವಾಗತಿಸಿದರು, ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಝೇಶನ್ ಕುಪ್ಪೆಪದವು ಸಂಚಾಲಕ ಅರ್ಫಾಝ್ ಕಲಾಯಿ ಪ್ರಾಸ್ತಾವಿಕ ಭಾಷಣ ಮಾಡಿದರು. ಮುನೀರ್ ಪದ್ರೆಂಗಿ ಕಾರ್ಯಕ್ರಮ ನಿರೂಪಿಸಿದರು, ರಮೀಝ್ ಕಲಾಯಿ ಧನ್ಯವಾದವಿತ್ತರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...