ಮಂಗಳೂರು | ಉಳ್ಳಾಲ ಸಾರ್ವಜನಿಕ ಗ್ರಂಥಾಲಯ ನವೀಕರಣಗೊಳಿಸಿ: ಓದುಗರಿಂದ ಜಿಲ್ಲಾಡಳಿತಕ್ಕೆ ಮನವಿ

Date:

ಮಂಗಳೂರು ನಗರದ ಉಳ್ಳಾಲ ಮತ್ತು ಸುತ್ತಮುತ್ತಲಿನ ಸಾವಿರಾರು ನಾಗರಿಕರ ಜ್ಞಾನದಾಹವನ್ನು ತಣಿಸುತ್ತಿದ್ದ ಉಳ್ಳಾಲ ನಗರ ಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸಾರ್ವಜನಿಕ ಗ್ರಂಥಾಲಯ ಕಟ್ಟಡವನ್ನು ಬೇರೆಡೆಗೆ ಸ್ಥಳಾಂತರಿಸಬಾರದು. ಇರುವಲ್ಲಿಯೇ ಸುಸಜ್ಜಿತವಾಗಿ ನವೀಕರಣಗೊಳಿಸಬೇಕು ಎಂದು ಆಗ್ರಹಿಸಿ ಓದುಗರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ಉಳ್ಳಾಲ ನಗರ ಸಭೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸಾರ್ವಜನಿಕ ಗ್ರಂಥಾಲಯ ಕಟ್ಟಡವು ಸಂಬಂಧಪಟ್ಟ ಅಧಿಕಾರಿಗಲ ನಿರ್ಲಕ್ಷ್ಯದಿಂದಾಗಿ ಶಿಥಿಲಾವಸ್ಥೆಗೆ ತಲುಪಿದೆ. ಈಗಲೋ ಆಗಲೋ ಎಂಬಂಥಾಗಿದ್ದು, ವಾಚಕರ ನಿರಂತರ ಒತ್ತಡದ ಕಾರಣದಿಂದಾಗಿ ನಗರ ಸಭೆಯು ಈಗ ಕಟ್ಟಡದ ದುರಸ್ಥಿ ಕಾರ್ಯ ನಿರ್ವಹಿಸುತ್ತಿದೆ. ಗ್ರಂಥಾಲಯವನ್ನು ತಾತ್ಕಾಲಿಕವಾಗಿ ಹತ್ತಿರದ ಸಮುದಾಯ ಭವನಕ್ಕೆ ಸ್ಥಳಾಂತರಿಸಲಾಗಿದೆ. ಆದರೆ, ಈಗ ಗ್ರಂಥಾಲಯವನ್ನು ಸಮುದಾಯ ಭವನದಿಂದಲೂ ಬೇರೆ ಕಡೆಗೆ ಸ್ಥಳಾಂತರಿಸಲಾಗುತ್ತದೆ ಎಂಬ ಸುದ್ಧಿ ಹರಡಿದ್ದು ಅದನ್ನು ಸ್ಥಳಾಂತರಿಸಬಾರದೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಉಳ್ಳಾಲ

ಹಳೆಯ ಕಟ್ಟಡವನ್ನು ಆದಷ್ಟು ಬೇಗ ದುರಸ್ತಿ ಮಾಡಬೇಕು ಹಾಗೂ ಅದರಲ್ಲಿಯೇ ಗ್ರಂಥಾಲಯ ನಿರ್ಮಿಸಿದರೆ ನಾಗರಿಕರಿಗೆ ಬಹಳ ಅನುಕೂಲವಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯ ಕಾರಣದಿಂದಾಗಿ ಅಪರ ಜಿಲ್ಲಾಧಿಕಾರಿ ಜಿ. ಸಂತೋಷ್ ಕುಮಾರ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಕ್ಫ್‌ ಆಸ್ತಿ ದೇವರ ಹೆಸರಿನಲ್ಲಿ ಮುಸ್ಲಿಮರೇ ನೀಡಿದ ದಾನ; ರಾಜಕೀಯ ಕಾರಣಕ್ಕೆ ಕೆಸರೆರಚಾಟ ಸಲ್ಲದು

ಗ್ರಂಥಾಲಯಕ್ಕೆ ನಿರಂತರವಾಗಿ ಓದಲು ಬರುತ್ತಿರುವ ಸಾರ್ವಜನಿಕರ ಪರವಾಗಿ ಉಳ್ಳಾಲದ ಹಿರಿಯ ನಾಗರಿಕರಾದ ಜನಾಬ್ ಆದಂ ಹಾಜಿ, ಬ್ಯಾರಿಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಪ್ರಾಧ್ಯಾಪಕರಾದ ನಿಝಮ್ ಉಳ್ಳಾಲ್ , ಆಧಾರ್ ಕಾರ್ಯಕರ್ತರಾದ ಅನ್ಸಾರ್ ಉಳ್ಳಾಲ್, ಎಸ್ಸೆಸ್ಸೆಫ್ ಕಾರ್ಯಕರ್ತರಾದ ಮುಹಮ್ಮದ್ ಶರೀಫ್ ಪಟ್ಲ, ಸಾಮಾಜಿಕ ಕಾರ್ಯಕರ್ತರಾದ ಮುಹಮ್ಮದ್ ನೌಶೀರ್ , ಯೂತ್ ಕಾಂಗ್ರೆಸ್ ಕಾರ್ಯಕರ್ತ ಸದ್ದಾಮ್ ಕಲ್ಲಾಪು ಹಾಗೂ ಉಳ್ಳಾಲಬೈಲ್ ಡಿವೈಎಫ್ಐ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮೊದಲಾದವರು ನಿಯೋಗದಲ್ಲಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...