ಮಂಗಳೂರು | ಅಸ್ಪೃಶ್ಯತೆ, ಅಸಮಾನತೆ ಜೀವಂತವಾಗಿರಿಸಿರುವುದೇ ಆರ್‌ಎಸ್‌ಎಸ್‌ ಸಾಧನೆ: ಯೋಗೇಶ್ ಜಪ್ಪಿನಮೊಗರು

Date:

ಅಸ್ಪೃಶ್ಯತೆ, ಅಸಮಾನತೆ ಜೀವಂತವಾಗಿರಿಸಿರುವುದೇ ಆರ್‌ಎಸ್‌ಎಸ್‌ನ 100 ವರ್ಷದ ಸಾಧನೆ ಎಂದು ದಲಿತ ಹಕ್ಕುಗಳ ಸಮಿತಿಯ ಮಾರ್ಗದರ್ಶಕರಾದ ಯೋಗೇಶ್ ಜಪ್ಪಿನಮೊಗರು ಅಭಿಪ್ರಾಯಿಸಿದರು.

ಮಂಗಳೂರು ನಗರದ ತಣ್ಣೀರುಬಾವಿಯಲ್ಲಿ ನಡೆದ ದಲಿತ ಚೈತನ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಇಡೀ ದೇಶದಲ್ಲಿ ದಲಿತ ಸಮುದಾಯದ ವಿರುದ್ಧ ಸವರ್ಣೀಯರನ್ನು ಎತ್ತಿ ಕಟ್ಟಿರುವುದು ಸಂಘ ಪರಿವಾರದ ಹಿಡನ್ ಅಜೆಂಡಾದ ಭಾಗವಾಗಿದೆ. ದಲಿತರನ್ನು ಶೈಕ್ಷಣಿಕವಾಗಿ ಆರ್ಥಿಕವಾಗಿ ಮಾತ್ರವಲ್ಲದೆ ರಾಜಕೀಯವಾಗಿಯೂ ಮುಗಿಸುವ ಎಲ್ಲ ಪ್ರಯತ್ನಗಳನ್ನು ಆರ್ ಎಸ್ ಎಸ್ ಸ್ವಾತಂತ್ರ್ಯ ಪೂರ್ವದಿಂದಲೇ ಮಾಡಿಕೊಂಡು ಬಂದಿದೆ” ಎಂದು ತಿಳಿಸಿದರು.

“ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಹಾಗೂ ಸಂವಿಧಾನದ ದ್ವೇಷಿಯಾಗಿರುವ ಸಂಘಪರಿವಾರ ಇದ್ದಕ್ಕಿದ್ದಂತೆ ಸಂವಿಧಾನವನ್ನು ಅಪ್ಪಿಕೊಳ್ಳುವ ಸಂವಿಧಾನ್ ಸನ್ಮಾನ್ ಕಾರ್ಯಕ್ರಮದ ಮೂಲಕ ನಾಟಕವಾಡುತ್ತಿದ್ದಾರೆ. ಪ್ರಸ್ತುತ ದಲಿತ ಸಮುದಾಯವು ಸುಶಿಕ್ಷಿತರಾಗಿ ಜಾಗ್ರತಗೊಳ್ಳುತ್ತಿದ್ದು ಸಂಘ ಪರಿವಾರದ ದುರುದ್ದೇಶಗಳು ಹಾಗೂ ಮುಖವಾಡಗಳು ಕಳಚಿ ಬೀಳುತ್ತಿದೆ ಎಂದು ದಲಿತ ಹಕ್ಕುಗಳ ಸಮಿತಿಯ ಮಾರ್ಗದರ್ಶಕ ಯೋಗೇಶ್ ಜಪ್ಪಿನಮೊಗರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದು ಮಾತನಾಡಿದ ಅವರು, ಲೋಕಸಭಾ ಚುನಾವಣಾ ಸಂದರ್ಭದಲ್ಲಿ 400 ಸೀಟುಗಳನ್ನು ಗೆಲ್ಲುವುದಾಗಿಯೂ ಸಂವಿಧಾನವನ್ನು ಬದಲಿಸುವುದಾಗಿಯೂ ಹೇಳಿರುವ ಬಿಜೆಪಿ ಈಗ ಸಂವಿಧಾನ ಸನ್ಮಾನ್ ಕಾರ್ಯಕ್ರಮವನ್ನು ನವೆಂಬರ್ 26ರಿಂದ ಜನವರಿ 26ರವರೆಗೆ ರೂಪಿಸಿರುವುದು ಸಂಘ ಪರಿವಾರದ ದುಷ್ಟ ಆಲೋಚನೆಯ ಭಾಗವಾಗಿದೆ. ದಲಿತ ವರ್ಗವನ್ನು ಮನುಷ್ಯರನ್ನಾಗಿ ಕಾಣದ ಸಂಘ ಪರಿವಾರ ಸಂವಿಧಾನದೊಳಗೆ ಮನುಸ್ಮೃತಿಯನ್ನು ತುರುಕಿಸುವ ಕೆಲಸವನ್ನು ಮಾಡುವುದಕ್ಕಾಗಿಯೇ ಸಂವಿಧಾನ ಸನ್ಮಾನ ಕಾರ್ಯಕ್ರಮ ಮಾಡುತ್ತಿದೆ ಎಂದರು.

ಶಿಭಿರಾರ್ಥಿಗಳನ್ನು ಉದ್ದೇಶಿಸಿ ಡಿ ಎಚ್ ಎಸ್ ನ ಜಿಲ್ಲಾ ಸಮಿತಿ ಕಾರ್ಯದರ್ಶಿ ಕೃಷ್ಣತಣ್ಣೀರುಬಾವಿ ಮಾತನಾಡುತ್ತಾ, ಅಂಬೇಡ್ಕರ್ ಅವರ ಚಿಂತನೆಗಳು ಮಾತ್ರವೇ ದಲಿತರನ್ನು ಮತ್ತು ಶೋಷಿತ ವಿಭಾಗವನ್ನು ಬಂಧಮುಕ್ತಗೊಳಿಸಲಿದೆ. ಆದ್ದರಿಂದ ಎಲ್ಲರೂ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ಕೊಡುವ ಅವಶ್ಯಕತೆ ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಿ ಎಚ್ ಎಸ್ ನ ಜಿಲ್ಲಾ ಮುಖಂಡರಾದ ರಾಧಾಕೃಷ್ಣ ಬೊಂಡಂತಿಲ, ಚಂದ್ರಶೇಖರ್ ಕಿನ್ಯಾ, ಮನೋಜ್, ಸುಧಾಕರ್ ರವರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ತಿರುಮಲ ದೇವಾಲಯ ಪ್ರವೇಶಿಸಿದ ದಲಿತರು; ಅಧಿಕಾರಿಗಳ ಸಮ್ಮುಖದಲ್ಲಿ ಮುಕ್ತ ಅವಕಾಶಕ್ಕೆ ಒಪ್ಪಿದ ಗ್ರಾಮಸ್ಥರು

ಬೇಬಿ ತಣ್ಣೀರುಬಾವಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಸುನೀತಾ ಕೃಷ್ಣರವರು ಕಾರ್ಯದರ್ಶಿಯಾಗಿಯೂ ಸುನಿಲ್ ರವರು ಖಜಾಂಚಿಯಾಗಿಯೂ ಆಯ್ಕೆ ಮಾಡಲಾಯಿತು. 9 ಜನರ ಪದಾಧಿಕಾರಿಗಳು ಸೇರಿದಂತೆ ಒಟ್ಟು 17 ಜನರ ಸಮಿತಿಯನ್ನು ಈ ಸಂದರ್ಭದಲ್ಲಿ ರಚಿಸಲಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...