ಮಂಗಳೂರು | ʼಸಿಂಧೂರ ವಿಜಯʼ ಉದ್ಯಾನವನ ಉದ್ಘಾಟನೆ

Date:

ಮಂಗಳೂರಿನ ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್‌ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡಿರುವ ನೂತನ ʼಸಿಂಧೂರ ವಿಜಯʼ ಉದ್ಯಾನವನದ ಉದ್ಘಾಟನೆ ಜರುಗಿತು.

ಶಾಸಕ ಡಾ ಭರತ್ ಶೆಟ್ಟಿ ವೈ ಅಧ್ಯಕ್ಷತೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಅವರು ಉದ್ಯಾನವನವನ್ನು ಉದ್ಘಾಟಿಸಿ ಮಾತನಾಡಿ, “ರೂ.42.35 ಲಕ್ಷ ವೆಚ್ಚದಲ್ಲಿ ಸೈನಿಕರನ್ನು ಸ್ಮರಿಸುವ ಪಾರ್ಕ್ ನಿರ್ಮಾಣಗೊಂಡಿದೆ. ಶಾಸಕ ಡಾ. ಭರತ್ ಶೆಟ್ಟಿ ಅವರು ತಮ್ಮ ಕ್ಷೇತ್ರದಾದ್ಯಂತ ಅತ್ಯುತ್ತಮವಾದ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಾ ಬರುತ್ತಿದ್ದು, ಈ ಯೋಜನೆಯನ್ನು ಕೂಡ ಕಾರ್ಯಗತಗೊಳಿಸುವಲ್ಲಿ ಶ್ರಮಿಸಿದ್ದಾರೆ. ಮೂಡಾದ ಸದಸ್ಯರು ಅಧಿಕಾರಿಗಳು ಪಾಲಿಕೆಯ ಸದಸ್ಯರು ಅಧಿಕಾರಿಗಳ ಸಮನ್ವಯದೊಂದಿಗೆ ಉತ್ತಮವಾಗಿ ನಿರ್ಮಾಣಗೊಂಡಿದೆ” ಎಂದು ಶ್ಲಾಘೀಸಿದರು.

ಇದನ್ನೂ ಓದಿ: ಪುತ್ತೂರು ಪ್ರೇಮ ವಂಚನೆ ಪ್ರಕರಣ; ಮಹಿಳಾ ಸಂಘಟನೆಯಿಂದ ಎಸ್‌ಪಿಗೆ ಮನವಿ ಸಲ್ಲಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, “ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಟ್ಟಾರ ಚೌಕಿಯಲ್ಲಿ ಮೊದಲ ಅವಧಿಯಲ್ಲಿ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದೆವು. ಸ್ಥಳೀಯ ಕಾರ್ಪೊರೇಟರ್, ಸಾರ್ವಜನಿಕರು ಇಲ್ಲಿನ ಜಂಕ್ಷನ್‌ನಲ್ಲಿ ಸೈನಿಕರ ಸ್ಮಾರಕವನ್ನು ನಿರ್ಮಿಸುವ ಬಗ್ಗೆ ಬೇಡಿಕೆಯನ್ನು ಇಟ್ಟಿದ್ದರು. ಸೈನಿಕರ ತ್ಯಾಗ ಬಲಿದಾನವನ್ನು ಸದಾ ಸ್ಫರಿಸಿಕೊಳ್ಳುವ ನಿಟ್ಟಿನಲ್ಲಿ, ಅವರು ದೇಶದ ರಕ್ಷಣೆಗಾಗಿ ತಮ್ಮ ಕುಟುಂಬವನ್ನು ತೊರೆದು ಗಾಡಿ ಭಾಗದಲ್ಲಿ ಇದ್ದುಕೊಂಡು ದೇಶದ ಜನತೆ ಸುರಕ್ಷತೆಯಿಂದ ಜೀವನ ನಡೆಸಲು ತ್ಯಾಗವನ್ನೇ ಮಾಡುತ್ತಿದ್ದಾರೆ. ಹೀಗಾಗಿ ಈ ಉದ್ಯಾನವನ ನಿರ್ಮಾಣದಲ್ಲಿ ನಮಗೂ ಸಂತೃಪ್ತಿಯನ್ನು ಉಂಟುಮಾಡಿದೆ” ಎಂದರು.

“ನಗರ ಪ್ರವೇಶಿಸುವ ಜಂಕ್ಷನ್‌ನಲ್ಲಿ ಈ ಉದ್ಯಾನವನ ನಿರ್ಮಾಣಗೊಂಡಿರುವುದರಿಂದ ಹೆಚ್ಚು ಆಕರ್ಷಣೀಯವಾಗಿದೆ. ಈ ಪಾರ್ಕನ್ನ ಸೈನಿಕರಿಗೆ ಹಾಗೂ ಅವರ ಕುಟುಂಬಗಳಿಗೆ ಅರ್ಪಿಸುವುದರ ಜತೆಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಸದಸ್ಯರು ಅಧಿಕಾರಿಗಳಿಗೆ ಈ ಸಂದರ್ಭ ಶ್ಲಾಘನೆಯನ್ನ ವ್ಯಕ್ತಪಡಿಸುತ್ತೇನೆ” ಎಂದರು.

ಇದನ್ನೂ ಓದಿ: ಮಂಗಳೂರು | ಭಾರೀ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್

ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯ ನೀರಾಜ್ ಚಂದ್ರ ಪಾಲ್ಅಬ್ದುಲ್ ಜಾಲೀಲ್, ಸುಮನ್ ದಾಸ್, ಸಬಿತಾ ಮಿಸ್ಕಿತ್, ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತಾರಾದ ಮೊಹಮ್ಮದ್ ನಜೀರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅಶ್ವಿನಿ, ಸಹಾಯಕ ಅಭಿಯಂತರರಾದ ಅಕ್ಬರ್ ಭಾಷಾ,  ಮಹಾನಗರ ಪಾಲಿಕೆಯ ನಿಕಟಪೂರ್ವ  ಸದಸ್ಯರಾದ  ಮನೋಜ್ ಕುಮಾರ್ ಕಿರಣ್ ಕುಮಾರ್ ಕೊಡಿಕಲ್, ರಂಜಿನಿ ಕೋಟ್ಯಾನ್, ಬಿಜೆಪಿ ಮುಖಂಡರಾದ ಸಿತೇಶ್ ಕೊಂಡೆ, ಆಶಿತ್ ನೋಂಡ, ಹರಿಪ್ರಸಾದ್ ಶೆಟ್ಟಿ, ಉಮೇಶ್ ಮಾಲರಾಯಸಾನ, ಸಂಜಿತ್ ಶೆಟ್ಟಿ, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...