ಮಂಗಳೂರು | ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದು ಹೆಣವಾದ ಅಕ್ಕ

Date:

ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಊರಿಗೆ ಬಂದಿದ್ದ ಅಕ್ಕ ಮಂಗಳೂರು ನಗರದ ಹೊರವಲಯದ ಪಾವಂಜೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲೇ ಅಸುನೀಗಿದ ಘಟನೆ ನಡೆದಿದೆ.

ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತಪಟ್ಟವರು. ಶ್ರುತಿ ಕಂಪ್ಯೂಟರ್ ಇಂಜಿನಿಯರಿಂಗ್ ಮುಗಿಸಿ ತಮಿಳುನಾಡಿನ ಚೆನ್ನೈನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದರು. ಮೆಕ್ಯಾನಿಕ್ ಆಗಿದ್ದ ತನ್ನ ಸಹೋದರ ಸುಜಿತ್ ಜೂ.10ರಂದು ಸಾವನ್ನಪ್ಪಿದ ಹಿನ್ನೆಲೆ ಅವರು ಅಂತ್ಯಸಂಸ್ಕಾರಕ್ಕೆಂದು ಮನೆಗೆ ಆಗಮಿಸಿದ್ದರು.

ಇದನ್ನೂ ಓದಿ: ಉಳ್ಳಾಲ | ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಭೇಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಧ್ಯೆ ಬ್ಯಾಂಕ್ ಕೆಲಸಕ್ಕೆಂದು ತಂದೆಯ ಜತೆ ಸ್ಕೂಟರ್​ನಲ್ಲಿ ಕಿನ್ನಿಗೋಳಿ ಕಡೆಗೆ ಹೋಗಿ ಮತ್ತೆ ಮನೆಯತ್ತ ಹಿಂತಿರುಗುವಾಗ ಈ ಅವಘಡ ನಡೆದಿದೆ. ಮಳೆ ಬಂದ ಹಿನ್ನೆಲೆ ಪಾವಂಜೆ ಬಳಿ‌ ಸ್ಕೂಟರ್ ನಿಲ್ಲಿಸಿ, ರೈನ್ ಕೋಟ್ ಹಾಕುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಅಪಘಾತ ಜರುಗಿದೆ. ಸ್ಕೂಟರ್​ ಹಾಗೂ ಅಲ್ಲೇ ನಿಂತಿದ್ದ ಮತ್ತೊಂದು ಬೈಕ್​ಗೆ ಡಿಕ್ಕಿ ಹೊಡೆದ ಕಾರು, ಶ್ರುತಿಯವರ ಸಹಿತ ಎಳೆದೊಯ್ದು ಹೆದ್ದಾರಿ ಬದಿಯಿದ್ದ ಸಿಮೆಂಟ್ ಸ್ಲ್ಯಾಬ್‌ಗೆ ಅಪ್ಪಳಿಸಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಂಗಳೂರು | ದ.ಕ. ಜಿಲ್ಲೆಯ ಜನರ ಮೇಲೆ ಇಂದಿರಾ ಗಾಂಧಿಯ ಋಣಯಿದೆ: ರಮಾನಾಥ ರೈ

ಪರಿಣಾಮ ಗಂಭೀರವಾಗಿ ಗಾಯಗೊಂಡ ಶ್ರುತಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರ ಜತೆಗಿದ್ದ ತಂದೆ ಗೋಪಾಲ ಆಚಾರ್ಯ (57) ಕೂಡ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಅವರ ಕಾಲಿನ ಮೂಳೆ ಮುರಿತಕ್ಕೊಳಗಾಗಿದೆ. ಘಟನೆಯಲ್ಲಿ ಮತ್ತೋರ್ವ ಮಹಿಳೆಗೂ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗೋಪಾಲ ಆಚಾರ್ಯರಿಗೆ ಇಬ್ಬರೇ ಮಕ್ಕಳಾಗಿದ್ದು, ಪುತ್ರ 15 ದಿನಗಳ ಹಿಂದಷ್ಟೇ ಮೃತಪಟ್ಟಿದ್ದ. ಆ ನೋವು ಮಾಸುವ ಮುನ್ನವೇ ಪುತ್ರಿಯೂ ಅಪಘಾತದಿಂದ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮುಲ್ಕಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...