ಮಂಗಳೂರು | ತುಳು ಭಾಷೆಗಾಗಿ ಹೋರಾಟ, ತ್ಯಾಗಕ್ಕೂ ಸಿದ್ದ : ಸಾಹಿತಿ ಕೆ.ಟಿ. ಆಳ್ವ

Date:

ತುಳು ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ, ನನ್ನ ಈ ಇಳೀ ವಯಸ್ಸಿನಲ್ಲೂ ನಾನು ತುಳು ಭಾಷೆಯ ಸಲುವಾಗಿ ಯಾವುದೇ ಹೋರಾಟ, ತ್ಯಾಗಕ್ಕೂ ಸಿದ್ಧ ಎಂದು ಹಿರಿಯ ಗಾಂಧಿವಾದಿ, ನಿವೃತ್ತ ಉಪನ್ಯಾಸಕ, ತುಳು ಬರಹಗಾರ ಕೆ.ಟಿ. ಆಳ್ವ ಅವರು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ನೀಡಲಾದ ಚಾವಡಿ ತಮ್ಮನ ಗೌರವನ್ನು ಸ್ವೀಕರಿಸಿ ತಿಮ್ಮಣ್ಣ ಆಳ್ವರು ಮಾತನಾಡಿದರು. ತೊಂಬತ್ತೆರಡರ ವಯಸ್ಸಿನ ಕೆ.ಟಿ. ಆಳ್ವರಿಗೆ ಅಕಾಡೆಮಿಯ ಚಾವಡಿ ತಮ್ಮನ ಗೌರವವನ್ನು ಮುಡಿಪು ಪಜೀರ್‌ನ ತಿಮ್ಮಣ್ಣ ಆಳ್ವರ ನಿವಾಸದಲ್ಲಿ ಪ್ರಧಾನ ಮಾಡಲಾಯಿತು. ಮುಡಿಪು ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಬಳಗದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು.

ತುಳು ಭಾಷೆಯ ಬಗ್ಗೆ ಜನ ಸಾಮಾನ್ಯರ ಕೈಗೆಟಕುವಂತಹ ಶಬ್ದಕೋಶವೊಂದನ್ನು ಹೊರ ತರಲು ಅಕಾಡೆಮಿ ಮುಂದಾಗಬೇಕೆಂದು ತಿಮ್ಮಣ್ಣ ಆಳ್ವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ಸನ್ಮಾನ, ಪುರಸ್ಕಾರವನ್ನು ಜೀವನದಲ್ಲಿ ಎಂದೂ ಬಯಸದ ನನ್ನನ್ನು ತುಳು ಅಕಾಡೆಮಿ ಚಾವಡಿ ತಮ್ಮನದ ಮೂಲಕ ಗೌರವಿಸಿರುವುದು ನನ್ನ ಯೋಗ ಭಾಗ್ಯವೆಂಬ ಕೃತಜ್ಞತೆಯ ಭಾವವನ್ನು
ಮೂಡಿಸಿದೆ ಎಂದು ಕೆ.ಟಿ. ಆಳ್ವರು ಅನಿಸಿಕೆ ಹಂಚಿಕೊಂಡರು.

ಪಜೀರ್‌ ಗ್ರಾಮ ಪಂಚಾಯತ್‌ ಅಧ್ಯಕ್ಷ ರಫೀಕ್‌ ಪಜೀರ್‌ ಅವರು ಮಾತನಾಡಿ, ಪಜೀರ್‌ ಪಂಚಾಯತಿನ ಗ್ರಂಥಾಲಯದಲ್ಲಿ ತುಳು ಭಾಷೆಯ ಪುಸ್ತಕ ವಿಭಾಗವನ್ನು ಆಂಭಿಸುವುದಾಗಿ ತಿಳಿಸಿದರು. ಪಂಚಾಯತ್ ವತಿಯಿಂದ ತುಳು ಕಾರ್ಯಕ್ರಮವನ್ನು ಆಯೋಜಿಸುವುದಾಗಿ ತಿಳಿಸಿದರು.

WhatsApp Image 2025 04 27 at 7.29.13 PM

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್‌ ಗಟ್ಟಿ ಕಾಪಿಕಾಡ್‌ ಅವರು ಮಾತನಾಡಿ, ತುಳುವಿಗಾಗಿ ಸೇವೆ ಸಲ್ಲಿಸಿದ ಹಿರಿಯ ಸಾಧಕರ ಮನೆಗೆ ತೆರಳಿ, ಊರವರ ಸಮ್ಮುಖದಲ್ಲಿ ಅಕಾಡೆಮಿಯ ಚಾವಡಿ ತಮ್ಮನದ ಗೌರವವನ್ನು ಅರ್ಪಿಸುವ ಕಾರ್ಯಕ್ರಮವನ್ನು ಅಕಾಡೆಮಿ ಆಯೋಜಿಸುತ್ತಿದೆ, ಆ ಮೂಲಕ ಅಕಾಡೆಮಿಯು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿಲು ಮುಂದಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಡಾ. ಎನ್.‌ ಇಸ್ಮಾಯಿಲ್‌, ಹಿರಿಯ ಲೆಕ್ಕ ಪರಿಶೋಧಕ ಪುಂಡರಿಕಾಕ್ಷ , ಪಜೀರ್‌ ಪಂಚಾಯತ್‌ ಸದಸ್ಯರಾದ ಇಮ್ತಿಯಾಜ್‌ , ಸೀತಾರಾಮ ಶೆಟ್ಟಿ ಮುಗುಳಿ, ಭರತ್‌ ರಾಜ್‌ ಶೆಟ್ಟಿ , ಮಾಜಿ ತಾಲೂಕು ಪಂಚಾಯತ್ ಸದಸ್ಯ ಉಮೇಶ್‌ ಮೊದಲಾದವರು ಮಾತನಾಡಿದರು. ಪತ್ರಕರ್ತ ಶಶಿಧರ ಪೊಯ್ಯತ್ತಬೈಲ್‌ ಅಭಿನಂದನಾ ಭಾಷಣ ಮಾಡಿದರು.

ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ಲೇಖಕರಾದ ಚಂದ್ರಹಾಸ ಕಣಂತೂರು, ಶಶಿಧರ್‌ ಮಂಟಮೆ, ಬಾಬು ಪಿಲಾರ್‌ , ಎಡ್ವರ್ಡ್‌ ತೊಕ್ಕೊಟ್ಟು , ಅಮಿತಾ ಮೊದಲಾದವರು ಪಾಲ್ಗೊಂಡರು. ಡಾ. ರಾಜರಾಮ್‌ ಆಳ್ವ ಉಪಸ್ಥಿತರಿದ್ದರು.

ಕೆ.ಟಿ. ಆಳ್ವರು ಶಿಕ್ಷಣಕ್ಕಾಗಿ ನೀಡುತ್ತಿದ್ದ ಆದ್ಯತೆ ಹಾಗೂ ಪ್ರೋತ್ಸಾವನ್ನು ಎಲ್ಲರೂ ತಮ್ಮ ಮಾತಿನಲ್ಲಿ ಉಲ್ಲೇಖಿಸಿದರು. ಮುಡಿಪು ಸರಕಾರಿ ಪ.ಪೂ ಕಾಲೇಜಿನ ಹಳೆ ವಿದ್ಯಾರ್ಥಿ ಬಳಗದ ಪ್ರವೀಣ್‌ ಅಮ್ಮೆಂಬಳ ಕಾರ್ಯಕ್ರಮ ನಿರ್ವಹಿಸಿದರು, ಇಸ್ಮತ್‌ ಪಜೀರ್‌ ಸ್ವಾಗತಿಸಿದರು. ಅನ್ನಪೂರ್ಣೇಶ್ವರಿ ವಂದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...