ಮಂಗಳೂರು | ನಿಗೂಢವಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆ

Date:

ಮಂಗಳೂರು ಹೊರವಲಯದ ಫರಂಗಿಪೇಟೆಯಿಂದ ಫೆ.25ರಂದು ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

12 ದಿನಗಳ ಹಿಂದೆ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಮಾ.8ರ ಶನಿವಾರ ಕೊನೆಗೂ ಉಡುಪಿಯ ಕಲ್ಸಂಕದ ಬಳಿ ಇರುವ ಡಿ ಮಾರ್ಟ್‌ ಮಾರಾಟ ಮಳಿಗೆಯ ಬಳಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಇದೀಗ ಪೊಲೀಸರು ಆತನನ್ನು ಮಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ.

ಕಳೆದ 12 ದಿನಗಳಿಂದ ದಿಗಂತ್ ನ ಪತ್ತೆಗಾಗಿ ಪೊಲೀಸರ ತಂಡ ವಿವಿಧ ರೀತಿಯ ಕಾರ್ಯಾಚರಣೆಗಳನ್ನು ನಡೆಸಿತ್ತು. ಪೊಲೀಸರಿಗೆ ಈ ಪ್ರಕರಣ ಸವಾಲಾಗಿ ಪರಿಣಮಿಸಿತ್ತು. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಸಿತ್ತು. ದಿಗಂತ್ ನಾಪತ್ತೆಯಾಗಿದ್ದ ಘಟನಾ ಸ್ಥಳದ ಸುತ್ತಮುತ್ತಲಿನ ಸುಮಾರು 5 ಕಿ.ಮೀ.ನ ಭಾಗದಲ್ಲಿ ಹುಡುಕಾಟ ಮಾಡಲು ಯೋಜನೆ ತಯಾರಿಸಿ ಕಾರ್ಯ ಆರಂಭಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

40ಕ್ಕೂ ಅಧಿಕ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಮಾಡ್, ಡೋನ್ ಕ್ಯಾಮೆರಾಗಳನ್ನು ಬಳಸಿ ಹುಡುಕಾಟ ನಡೆಸಿದ್ದರು. ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವು ವಿಧಾನಸಭೆಯ ಅಧಿವೇಶನದಲ್ಲೂ ಕೂಡ ಚರ್ಚೆಯಾಗಿತ್ತು.

ಫೋನ್ ಮೂಲಕ ಕುಟುಂಬಸ್ಥರ ಜೊತೆ ಮಾತುಕತೆ

ಡಿ ಮಾರ್ಟ್‌ ಮಾರಾಟ ಮಳಿಗೆಯ ಬಳಿ ಪತ್ತೆಯಾದ ದಿಗಂತ್ ಅನ್ನು ಅಲ್ಲಿನ ಸಿಬ್ಬಂದಿಗಳು ಗಮನಿಸಿದ್ದಾರೆ. ಆ ಬಳಿಕ ಆತನನ್ನು ವಿಚಾರಿಸಿದಾಗ ನಾಪತ್ತೆಯಾದ ದಿಗಂತ್ ಎಂದು ಖಚಿತಪಡಿಸಿಕೊಂಡಿದ್ದಾರೆ. ಆ ಬಳಿಕ ಉಡುಪಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಸದ್ಯ ಕುಟುಂಬಸ್ಥರಿಗೂ ಮಾಹಿತಿ ನೀಡಿದ್ದು, ಬಳಿಕ ದೂರವಾಣಿಯಲ್ಲಿ ಮಾತನಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಫೋನ್ ಸಂಭಾಷಣೆಯ ವೇಳೆ, ‘ತನ್ನನ್ನು ಬಲವಂತವಾಗಿ ಕರೆದುಕೊಂಡು ಹೋಗಲಾಗಿತ್ತು’ ಎಂದು ತಾಯಿಯ ವೇಳೆ ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ಗಂಗಾವತಿ ಘಟನೆ: ಮೂವರು ಆರೋಪಿಗಳ ಪೈಕಿ ಇಬ್ಬರ ಬಂಧನ

ಏನಿದು ಪ್ರಕರಣ?

ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ದಿಗಂತ್ ನಾಪತ್ತೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದ ದಿಗಂತ್, ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದ. ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...