ಮಂಗಳೂರು | ಸುಹಾಸ್‌ ಹತ್ಯೆ ಪ್ರಕರಣ; ಸ್ಪೀಕರ್ ಖಾದರ್ ರಾಜಿನಾಮೆಗೆ ಬಿಜೆಪಿ ಆಗ್ರಹ

Date:

ಮಂಗಳೂರಿನ ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಸ್ಪೀಕರ್‌ ಯು ಟಿ ಖಾದರ್‌ ಅವರ ರಾಜಿನಾಮೆಗೆ ಬಿಜೆಪಿ ದ.ಕ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, “ಎರಡು ವರ್ಷಗಳ ಹಿಂದೆ ಹತ್ಯೆಯಾದ ಮಹಮ್ಮದ್ ಫಾಸಿಲ್‌ನ ಸಹೋದರ ಆದಿಲ್‌ ಮೆಹರೂಫ್‌ ಎಂಬಾತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ಬಂಧಿತ ಆರೋಪಿಯಾಗಿದ್ದಾನೆ. ಇತ್ತ ಪ್ರಕರಣದಲ್ಲಿ ಫಾಸಿಲ್‌ ಕುಟುಂಬದ ಕೈವಾಡವಿಲ್ಲ ಎಂದು ಖಾದರ್ ಹೇಳಿಕೆ ನೀಡಿದ್ದಾರೆ. ತನಿಖೆಗೆ ಮೊದಲೇ ಕೊಲೆ ಆರೋಪಿಯೊಬ್ಬನ ಕುಟುಂಬದ ಪರ ಹೇಳಿಕೆ ನೀಡಿರುವ ಖಾದರ್‌ ನಡೆಯಲ್ಲಿ ಅನುಮಾನವಿದೆ. ಖಾದರ್ ಅವರು ಸ್ಪೀಕರ್ ಆಗಿರುವ ತನಕ ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ನ್ಯಾಯ ಸಿಗುವ ನಂಬಿಕೆ ಇಲ್ಲ. ರಾಜ್ಯಪಾಲರೇ ಮಧ್ಯಪ್ರವೇಶಿಸಿ ರಾಜಿನಾಮೆ ಪಡೆಯಲಿ” ಎಂದು ಒತ್ತಾಯಿಸಿದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ 8 ಮಂದಿಯ ಪೈಕಿ ರಂಜಿತ್ ಮತ್ತು ನಾಗರಾಜ, ಕಳಸದಲ್ಲಿ ಹೋಟೆಲ್, ಹೋಮ್ ಸ್ಟೇ ಹೊಂದಿರುವ ಮುಹಮ್ಮದ್ ಮುಸ್ತಫಾ ಎಂಬುವರ ಕೆಲಸದವರು. ಮುಸ್ತಫಾ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯೊಂದರಲ್ಲಿ ಖಾದರ್ ಮತ್ತು ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಪಾಲ್ಗೊಂಡಿದ್ದರು ಎಂದು ಆರೋಪಿಸಿರುವ ಅವರು, ಪ್ರಕರಣದ ಇನ್ನೊಬ್ಬ ಆರೋಪಿ ಬಜ್ಪೆ ಶಾಂತಿಗುಡ್ಡೆಯ ನಿಯಾಝ್ ಮೀನು ವ್ಯಾಪಾರ ಮಾಡಿಕೊಂಡಿದ್ದನು. ಮುಸ್ತಫನ ಆಪ್ತರು ಕೊಲೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವಾಗ ಪೊಲೀಸರು ಮುಸ್ತಫಾನನ್ನು ಇನ್ನೂ ಯಾಕೆ ಬಂಧಿಸಿಲ್ಲ? ಕೊಲೆ ಪ್ರಕರಣದಲ್ಲಿ ಇನ್ನೂ ಹಲವು ಮಂದಿ ಶಾಮೀಲಾಗಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಪ್ರಕರಣದ ಹಾದಿ ತಪ್ಪಿಸುತ್ತಿರುವಂತೆ ಕಾಣುತ್ತಿದೆ. ತನಿಖೆಯ ಹೊಣೆಯನ್ನು ಬಜ್ಪೆಯ ಗುಪ್ತಚರ ವಿಭಾಗದ ರಶೀದ್‌ಗೆ ವಹಿಸಕೂಡದು. ಬದಲಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಬೇಕು. ಹತ್ಯೆಗೂ ಮುನ್ನ ನಡೆದಿತ್ತು ಎನ್ನಲಾದ ಡಿನ್ನರ್ ಪಾರ್ಟಿಯ ಆಯೋಜಕರು ಯಾರು? ಹತ್ಯೆಗೆ ಬಳಸಿದ್ದ ಕಾರು, ಬೈಕ್, ಪಿಕ್ಅಪ್ ವಾಹನ ಒದಗಿಸಿದವರು ಯಾರು ಎಂಬುದರ ಕುರಿತು ತನಿಖೆಯಾಗಬೇಕು” ಎಂದರು.

ಇದನ್ನೂ ಓದಿ: ಮಂಗಳೂರು | ಸಂಘಪರಿವಾರದ ನಿರೂಪಣೆಯನ್ನು ಕಾಂಗ್ರೆಸ್‌ ನಾಯಕರು ಪಾಲಿಸುತ್ತಿರುವುದು ದುರದೃಷ್ಟಕರ: ಲಬೀದ್ ಶಾಫಿ

“ಸುಹಾಸ್‌ ಹತ್ಯೆ ಮಾಡುತ್ತೇವೆ ಎಂದು ಬಹಿರಂಗವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಳ್ಳುವವರನ್ನು ಬಂಧಿಸಲಾಗಿಲ್ಲ. ಎಂದೋ ನಡೆದ ಪ್ರಕರಣಗಳ ಆರೋಪಿಗಳ ಮನೆಗೆ ಹೋಗಿ ಅನಗತ್ಯ ವಿಚಾರಣೆ ನಡೆಸಿ ಅವರ ಕುಟುಂಬಸ್ಥರಿಗೆ ಕಿರುಕುಳ ನೀಡಲಾಗುತ್ತಿದೆ. ಕಾರಣವಿಲ್ಲದೆ ಬಿಜೆಪಿ ಪಕ್ಷದವರ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತಿದೆ. ಉದ್ದೇಶಪೂರ್ವಕವಾಗಿಯೇ ಸುಹಾಸ್‌ ಹತ್ಯೆ ಪ್ರಕರಣವನ್ನು ಕಾನೂನುಬಾಹಿರ ಕೃತ್ಯ ತಡೆ ಕಾಯ್ದೆಯಡಿ ದಾಖಲಿಸಲಾಗಿಲ್ಲ. ಇವೆಲ್ಲವೂ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರ” ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಡಿ ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಮೇಯರ್ ಗಳಾದ ಸುಧೀರ್ ಕುಮರ್, ಪ್ರೇಮಾನಂದ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...