ಮಂಗಳೂರು | ಅಂಚೆ ಇಲಾಖೆಯಿಂದ ‘ಸಂಡೇಸ್ ಓನ್ ಸೈಕಲ್’ ಅಭಿಯಾನ

Date:

ಅಂಚೆ ಇಲಾಖೆಯ ಮಂಗಳೂರು ವಿಭಾಗವು ಫಿಟ್ ಇಂಡಿಯಾ ಮಿಷನ್ ಅಡಿಯಲ್ಲಿ ಸಂಡೇಸ್ ಓನ್ ಸೈಕಲ್(Sundays on Cycle) ಅಭಿಯಾನವನ್ನು ಆಯೋಜಿಸಿತ್ತು.

ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಆಗಿರುವ ಎಸ್ ರಾಜೇಂದ್ರ ಕುಮಾರ್ ಅವರು ಸೈಕ್ಲಿಂಗ್ ಅನ್ನು ಉದ್ಘಾಟಿಸಿದರು. ಬಳಿಕ ಸೈಕ್ಲಿಂಗ್‌ನ ಪ್ರಾಮುಖ್ಯತೆಯನ್ನು ತಿಳಿಸಿ, “ಹಸಿರು ಮತ್ತು ಫಿಟ್‌ನೆಸ್ ಇರುವ ಭಾರತಕ್ಕಾಗಿ, ಆರೋಗ್ಯಕರ ಜೀವನಕ್ಕಾಗಿ ಜಾಗೃತಿ ಮೂಡಿಸಲು ಇಲಾಖೆಯ ಸಿಬ್ಬಂದಿಗಳು ಬದ್ಧರಾಗಿರಬೇಕು” ಎಂದರು.

ಈ ಅಭಿಯಾನವು ಸೈಕ್ಲಿಂಗ್ ಅಭ್ಯಾಸವನ್ನು ಉತ್ತೇಜಿಸಲು, ಮೋಟಾರು ವಾಹನಗಳ ಬಳಕೆಯನ್ನು ಕಡಿಮೆ ಮಾಡಲು, ಇಂಧನ ಬಳಕೆಯನ್ನು ಕಡಿಮೆ ಮಾಡಲು ಮತ್ತು ಮಾನವನ ಫಿಟ್‌ನೆಸ್ ಮತ್ತು ದೀರ್ಘಾಯುಷ್ಯವನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ. ಫಿಟ್‌ನೆಸ್ ಅನ್ನುವುದು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗ. ಸೈಕಲ್ ಬಳಸುವುದರಿಂದ ಆರೋಗ್ಯಕರವಾಗಿರಬಹುದು. ಸುಸ್ಥಿರ ಸಾರಿಗೆಯಾಗಿ ಉತ್ತೇಜಿಸಲು ಹಾಗೂ ಇದನ್ನು ಸಾಧಿಸುವ ಉದ್ದೇಶದಿಂದ ಸಂಡೇಸ್ ಓನ್ ಸೈಕಲ್ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 02 09 at 3.20.26 PM

ಈ ರ್‍ಯಾಲಿಯಲ್ಲಿ ಮಂಗಳೂರಿನ 100ಕ್ಕೂ ಹೆಚ್ಚು ಸಿಬ್ಬಂದಿಗಳು ಭಾಗವಹಿಸಿದ್ದರು. ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರಾದ ಎಂ ಸುಧಾಕರ ಮಲ್ಯ, ಉಪ ಅಂಚೆ ಅಧೀಕ್ಷಕರಾದ ದಿನೇಶ್ ಪಿ, ಮಂಗಳೂರಿನ ಪ್ರಧಾನ ಅಂಚೆ ಕಚೇರಿಯ ಹಿರಿಯ ಅಂಚೆ ಪಾಲಕರಾದ ಶ್ರೀನಾಥ್ ಎನ್ ಬಿ, ಆರ್.ಎಮ್.ಎಸ್, ಮಂಗಳೂರು ಅಧೀಕ್ಷಕರಾದ ರವೀಂದ್ರ ನಾಯ್ಕ್, ಮಂಗಳೂರು ಪೂರ್ವ ಉಪವಿಭಾಗದ ಸಹಾಯಕ ಅಧೀಕ್ಷಕ ಸಿ ಪಿ ಹರೀಶ್ ಅವರು ರ್‍ಯಾಲಿಯಲ್ಲಿ ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ? ಬೆಳಗಾವಿ | ಫೈನಾನ್ಸ್‌ ಕಂಪನಿಯಿಂದ ಮನೆಗೆ ಬೀಗ: ವಿಶೇಷ ಚೇತನ ಮಗುವಿನೊಂದಿಗೆ ಬೀದಿಗೆ ಬಿದ್ದ ಕುಟುಂಬ!

ಬೆಳಗ್ಗೆ 8 ಗಂಟೆಗೆ ಮಂಗಳೂರು ಪ್ರಧಾನ ಅಂಚೆ ಕಚೇರಿ, ಪಾಂಡೇಶ್ವರದಿಂದ ರ್‍ಯಾಲಿ ಪ್ರಾರಂಭವಾಗಿ, ಎಬಿ ಶೆಟ್ಟಿ ವೃತ್ತ, ಪೊಲೀಸ್ ಆಯುಕ್ತರ ಕಚೇರಿ, ಸ್ಟೇಟ್ ಬ್ಯಾಂಕ್, ಟೌನ್ ಹಾಲ್, ಕ್ಲಾಕ್ ಟವರ್, ಯುನಿವರ್ಸಿಟಿ ಕಾಲೇಜು, ಆರ್‌ಟಿಒ, ಕಾರ್ಪೊರೇಷನ್ ಬ್ಯಾಂಕ್ ವೃತ್ತದ ಮೂಲಕ ಸಾಗಿ ಬೆಳಗ್ಗೆ 9 ಗಂಟೆಗೆ ಮಂಗಳೂರು ಪ್ರಧಾನ ಅಂಚೆ ಕಚೇರಿಯಲ್ಲಿ ಮುಕ್ತಾಯವಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...