ಮಂಗಳೂರು | ಸುರತ್ಕಲ್‌ನ ಐಎನ್‌ಸಿಯುಬಿ8: ಪ್ರಮುಖ ಉದ್ಯಮಶೀಲತಾ ಉತ್ಸವಕ್ಕೆ ಚಾಲನೆ

Date:

ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ (ಎನ್‌ಐಟಿಕೆ)ದಲ್ಲಿ ವಾಣಿಜ್ಯೋದ್ಯಮ ಕೋಶವು ಎನ್‌ಐಟಿಕೆ ಸ್ಟೆಪ್ ಮತ್ತು ಇನ್‌ಸ್ಟಿಟ್ಯೂಟ್ ಇನ್ನೋವೇಶನ್ ಕೌನ್ಸಿಲ್‌ನ ಸಹಯೋಗದೊಂದಿಗೆ ತನ್ನ ಪ್ರಮುಖ 3 ದಿನಗಳ ಉದ್ಯಮಶೀಲತೆ, ಐಎನ್‌ಸಿಯುಬಿ8‌ (incub8) ಉತ್ಸವವನ್ನು ಜನವರಿ 31, 2025 ರಂದು ಪ್ರಾರಂಭಿಸಿದೆ.

ಈ ಈವೆಂಟ್ ಪ್ರಸಿದ್ಧ ವಾಣಿಜ್ಯೋದ್ಯಮಿಗಳಿಂದ ಇ-ಟಾಕ್‌ಗಳ ಪ್ರಭಾವಶಾಲಿ ಶ್ರೇಣಿಯನ್ನು ಹೊಂದಿದೆ. ನಿನ್ನೆ, ಭಾರತ್‌ಪೇಯ ಸಹ-ಸಂಸ್ಥಾಪಕ ಮತ್ತು ಮಾಜಿ ಎಂ.ಡಿ. ಅಶ್ನೀರ್ ಗ್ರೋವರ್ ಅವರು ಭಾಷಣದ ಮೂಲಕ ಉತ್ಸವದ ಸಂಪೂರ್ಣ ಮಾಹಿತಿ ಹಂಚಿಕೊಂಡರು. ಮುಂದಿನ ಎರಡು ದಿನ ಪಾಲ್ಗೊಳ್ಳುವವರು, ಟೆಕ್ಯುಫಾರ್ವರ್ಡ್‌ನ ಸಂಸ್ಥಾಪಕ ರಾಜ್ ವಿಕ್ರಮಾದಿತ್ಯ, ಅಕಾ ಸ್ಟ್ರೈವರ್ ಮತ್ತು ಶ್ರೀ ದೀಪಾಂಶು ರಾಜ್, ಅಕಾ ಇಕ್ಲಿಪ್ಸ್ ನೋವಾ ಅವರ ಇ-ಟಾಕ್‌ಗಳನ್ನು ಎದುರು ನೋಡಬಹುದಾಗಿದೆ.

WhatsApp Image 2025 02 02 at 4.11.29 PM 1

ಇ-ಟಾಕ್‌ ಜೊತೆಗೆ, ವಿದ್ಯಾರ್ಥಿಗಳು ಮತ್ತು ಸ್ಟಾರ್ಟ್‌ಅಪ್‌ಗಳಿಗೆ incub8 ಹಲವು ಉತ್ತೇಜಕ ಅವಕಾಶಗಳನ್ನು ಒದಗಿಸುತ್ತದೆ. ಕೌಶಲ್ಯ ಮತ್ತು ನಾವೀನ್ಯತೆಯನ್ನು ಪ್ರದರ್ಶಿಸಲು 18+ ಸ್ಪರ್ಧೆಗಳು, ₹25 ಕೋಟಿ ನಿಧಿಯ ಸಂಗ್ರಹದೊಂದಿಗೆ ಡೆಲ್ಲಿ ಏಂಜೆಲ್ಸ್‌ನಂತಹ ಸಂಸ್ಥೆಗಳಿಂದ ಸಾಹಸೋದ್ಯಮ ಬಂಡವಾಳಗಾರರಿಗೆ ಆರಂಭಿಕ ಆಲೋಚನೆಗಳನ್ನು ಪಿಚ್ ಮಾಡಲು ವೇದಿಕೆ ಸೃಷ್ಟಿಸುವುದು ಹಾಗೂ ಸ್ಟಾರ್ಟ್ಅಪ್ ಎಕ್ಸ್ಪೋಗಳ ಪ್ರಯೋಜನ ಕೂಡ ಪಡೆಯಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ: ಮತ್ತೊಬ್ಬ ಆರೋಪಿಯ ಕಾಲಿಗೆ ಗುಂಡೇಟು

ಸಿಲ್ವರ್ ಜ್ಯೂಬಿಲಿ ಆಡಿಟೋರಿಯಂನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಂಆರ್‌ಪಿಎಲ್‌ನ ರಿಫೈನರೀಸ್ ನಿರ್ದೇಶಕರಾದ ನಂದಕುಮಾರ್ ವಿ, ಯುನಿಕೋರ್ಟ್‌ನ ಸಹ ಸಂಸ್ಥಾಪಕ ಮತ್ತು ಸಿಟಿಒ ಶ್ರೀ ಪ್ರಶಾಂತ್ ಶೆಣೈ ಮತ್ತು ಮೈಕ್ರೋಸಾಫ್ಟ್ ಎಂವಿಪಿ ಮತ್ತು ಮುಂಬೈನ ಗಿಥಬ್ ಕಮ್ಯುನಿಟಿ ಲೀಡರ್ ಶ್ರೀ ಆಗಸ್ಟೀನ್ ಕೊರಿಯಾ ಗೌರವ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಡೀನ್ ಪ್ರೊ. ಎ ಸಿ ಹೆಗಡೆ, ಕಾರ್ಯಕ್ರಮ ಸಂಯೋಜಕಿ ಡಾ. ಸುಪ್ರಭಾ, ಪದಾಧಿಕಾರಿಗಳು, ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...