ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಅಬ್ದುಲ್‌ ರಹಿಮಾನ್‌ ಕುತ್ತೆತ್ತೂರು ಆಯ್ಕೆ

Date:

ಜನವರಿ 4ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ, ಕವಿ ಅಬ್ದುಲ್‌ ರಹಿಮಾನ್‌ ಕುತ್ತೆತ್ತೂರು ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಅಕಾಡೆಮಿಯ ಸರ್ವ ಸದಸ್ಯರ ಸಭೆ ಮತ್ತು ಸಮ್ಮೇಳನ ಸ್ವಾಗತ ಸಮಿತಿ ಸಭೆಯಲ್ಲಿ ಸರ್ವಾನುಮತದ ಈ ಆಯ್ಕೆ ನಡೆದಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್‌ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಬ್ದುಲ್‌ ರಹಿಮಾನ್‌ ಕುತ್ತೆತ್ತೂರು ಅವರ, ಮಹಾಕವಿ ಸರ್ವಜ್ಞನ ವಚನಗಳ ಭಾಷಾಂತರವನ್ನೊಳಗೊಂಡ ʼಜೀಯಸೆಲೆʼ ಬ್ಯಾರಿ ಕವನ ಸಂಕಲನ, ʼಬ್ಯಾರಿ ಪಂಚತಂತ್ರʼ (ಕನ್ನಡದಿಂದ ಬ್ಯಾರಿಗೆ ಅನುವಾದಿಸಿದ ಪಂಚತಂತ್ರ ಕತೆಗಳ ಅನುವಾದ ಗೃಂಥ) ಮತ್ತು ʼಸಾಧನೆಡೊ ಸರದಾರ ಅಭಿವೃದ್ಧಿರೊ ಕಿನಾವುಗಾರ ಸರ್. ಎಂ. ವಿಶ್ವೇಶ್ವರಯ್ಯʼ ಕೃತಿಗಳನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 12 29 at 11.05.36 AM

ಕಾದಂಬರಿಗಾರ ನಿಯಾಝ್ ಪಡೀಲ್‌ರವರ ʼಯತೀಮ್ʼ ಕನ್ನಡ ಕಾದಂಬರಿಯನ್ನುಇವರು ಬ್ಯಾರಿಗೆ ಅನುವಾದಿಸಿದ್ದು ಇತ್ತೀಚೆಗೆ ಬಿಡುಗಡೆಗೊಂಡಿದೆ. ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಪೇಕ್ಷೆಯಂತೆ ಸಂತ ಕವಿ ಕನಕದಾಸರ ಮುಂಡಿಗೆ ಮತ್ತು ಕೀರ್ತನೆಗಳನ್ನು ಕನ್ನಡದಿಂದ ಬ್ಯಾರಿಗೆ ಇವರು ಅನುವಾದಿಸಿದ್ದು, ಪ್ರಕಟಣೆಯ ಹಂತದಲ್ಲಿದೆ.

ಸಂಶೋಧಕ, ಸಾಹಿತಿ ಪ್ರೊ.ಬಿ.ಯಂ. ಇಚ್ಚಂಗೋಡು ಅವರ ʼಬ್ಯಾರಿ ದ್ರಾವಿಡ ಭಾಷೆಯೇ?ʼ ಎಂಬ ಸಂಶೋಧನಾ ಗ್ರಂಥವನ್ನು ಕನ್ನಡದಿಂದ ಬ್ಯಾರಿಗೆ ಅನುವಾದಿಸಿರುವ ಇವರ ಬ್ಯಾರಿ ಅಂಕಣಗಳು ʼಬ್ಯಾರಿ ವಾರ್ತೆʼ ಮಾಸಿಕದಲ್ಲಿ ನಿರಂತರ ಪ್ರಕಟವಾಗುತ್ತಿದೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಹೊರತಂದ ʼಬ್ಯಾರಿ-ಕನ್ನಡ-ಇಂಗ್ಲೀಷ್ ನಿಘಂಟಿನ ಸಹಸಂಪಾದಕರಾಗಿ,ʼಬ್ಯಾರಿ-ಇಂಗ್ಲೀಷ್-ಕನ್ನಡ-ಹಿಂದಿ ಪದಕೋಶದ ಬ್ಯಾರಿ ಪದಗಳ ಸಂಗ್ರಾಹಕರಲ್ಲಿ ಓರ್ವರಾಗಿ, ಬ್ಯಾರಿ ವ್ಯಾಕರಣ ಗ್ರಂಥದ ಇಬ್ಬರು ಸಂಪಾದಕರಲ್ಲಿ ಓರ್ವರಾಗಿ, ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಹೊರತಂದ ʼಬ್ಯಾರಿ-ಕನ್ನಡ ಗಾದೆ-ನುಡಿಗಟ್ಟು-ಒಗಟುಗಳ ಕೋಶʼದ ಸಂಪಾದಕರಲ್ಲಿ ಓರ್ವರಾಗಿ ಕೆಲಸ ನಿರ್ವಹಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | SIR – ಬಿಜೆಪಿಗಾಗಿ ಚುನಾವಣಾ ಆಯೋಗ ನಡೆಸುತ್ತಿರುವ ರಕ್ತರಹಿತ ನರಮೇಧ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ʼಬ್ಯಾರಿ ಅಧ್ಯಯನ ಪೀಠʼದ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರ ಬ್ಯಾರಿ ಸಾಹಿತ್ಯ ಕ್ಷೇತ್ರದ ಸೇವೆಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2019ನೇ ಸಾಲಿನ ಗೌರವ ಪ್ರಶಸ್ತಿ ಲಭಿಸಿದೆ.

ʼಲೋಕಾನುಗ್ರಹಿ ಹಜ್ರತ್ ಮುಹಮ್ಮದ್ ಪೈಗಂಬರ್ʼ ಮತ್ತು ‘ಬಕ್ರೀದ್’ ಇವರ ಪ್ರಕಟಿತ ಕನ್ನಡ ಕೃತಿಗಳು. ಇವರ ಕನ್ನಡ, ಬ್ಯಾರಿ ಮತ್ತು ತುಳು ಭಾಷೆಯ ಲೇಖನ, ಕವನ, ವಿಮರ್ಶೆ ಬರಹ, ಮತ್ತು ಕಥೆಗಳು ನಾಡಿನ ಪ್ರಮುಖ ದೈನಿಕ, ಪಾಕ್ಷಿಕ, ಮಾಸಿಕ ಪತ್ರಿಕೆ ಹಾಗೂ ಸಂಸ್ಮರಣ ಸಂಚಿಕೆಗಳಲ್ಲಿ ಪ್ರಕಟವಾಗಿವೆ. ಮಂಗಳೂರು ಆಕಾಶವಾಣಿಯಲ್ಲಿ ಸುಮಾರು ಇನ್ನೂರಕ್ಕೂ ಮಿಕ್ಕಿದ ಇವರ ಚಿಂತನಗಳು ಪ್ರಸಾರವಾಗಿವೆ. ಇವರ ಬ್ಯಾರಿ ಭಾಷೆಯ ಅನೇಕ ಕಾರ್ಯಕ್ರಮಗಳು ಮಂಗಳೂರಿನ ʼರೇಡಿಯೊ ಸಾರಂಗ್’ ಸಮುದಾಯ ಬಾನುಲಿಯಲ್ಲಿ ಪ್ರಸಾರವಾಗಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...