ಮಂಗಳೂರು | ಇಲಾಖಾಧಿಕಾರಿಗಳ ಹರಸಾಹಸ, ದಡ ಸೇರಿದ ಜೋಡಿ ಕಾಡಾನೆಗಳು

Date:

ಕೆಲವು ದಿನಗಳಿಂದ ನೆಕ್ಕಿಲಾಡಿ ಬಿಳಿಯೂರು ಭಾಗದಲ್ಲಿ ಕಾಣಿಸಿಕೊಂಡಿದ್ದ ಜೋಡಿ ಕಾಡಾನೆಗಳು ಭಾನುವಾರ ಬೆಳಿಗ್ಗೆ ಉಪ್ಪಿನಂಗಡಿಯ ನೇತ್ರಾವತಿ ನದಿಯಲ್ಲಿ ವಿಹರಿಸುತ್ತಿದ್ದವು. ಇತ್ತ ನದಿಯ ದಂಡೆಯ ಮೇಲೆ ಸೇರಿದ್ದ ಜನ ಸಮೂಹದಿಂದಾಗಿ ನದಿಯಲ್ಲೇ ದಿಗಂಧನಕ್ಕೀಡಾದ ಘಟನೆ ಜರುಗಿದೆ.

ಶನಿವಾರ ರಾತ್ರಿ ಸುರ್ಯದ ಸುಬ್ರಹ್ಮಣ್ಯ ಭಟ್ ಎಂಬವರ ತೋಟದ ಬಳಿ ಪ್ರತ್ಯಕ್ಷಗೊಂಡ ಕಾಡಾನೆಗಳು ರಾತ್ರಿ ಸರಳೀಕಟ್ಟೆ ಪಿಲಿಗೂಡು, ಅಂಬೊಟ್ಟು ಮಾರ್ಗವಾಗಿ ಇಳಂತಿಲ ಗ್ರಾಮದ ಅಂಡೆತಡ್ಕ ಎಂಬಲ್ಲಿಂದ ನೇತ್ರಾವತಿ ನದಿಗಿಳಿದಿದೆ. ಮುಂಜಾನೆ ಉಪ್ಪಿನಂಗಡಿ ಬಳಿಯ ಕೂಟೇಲುವಿನ ನೇತ್ರಾವತಿ ನದಿಯಲ್ಲಿ ಕಾಡಾನೆಗಳು ಇರುವುದನ್ನು ಕಂಡು ಆನೆಗಳನ್ನು ನೋಡಲು ನದಿ ಕಡೆಗೆ ಜನ ತಂಡೋಪತಂಡವಾಗಿ ಆಗಮಿಸಿದರು. ಜನಸಂದಣಿ ಕಂಡು ಅತ್ತಿತ್ತ ಹೋಗಲಾಗದೇ ನದಿಯ ಮಧ್ಯದ ದಿನ್ನೆಯಲ್ಲಿ ನಿಂತುಕೊಂಡಿತ್ತು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪ್ಪಿನಂಗಡಿಯಲ್ಲಿದ್ದ ಗೃಹರಕ್ಷಕ ದಳದ ಪ್ರವಾಹ ರಕ್ಷಣಾ ತಂಡದ ಬೋಟನ್ನು ಬಳಸಿಕೊಂಡು ನದಿಗಿಳಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಆನೆಗಳು ಜನವಸತಿಯತ್ತ ಬಾರದಂತೆ ಬೆದರಿಸಲು ಯತ್ನಿಸಿದರು. ಒಟ್ಟಿನಲ್ಲಿ ದಿನವಿಡೀ ನದಿಯಲ್ಲಿ ಬೋಟ್‌ ಮೂಲಕ ಗುಂಡು ಹಾರಿಸುತ್ತಾ ದಡದಲ್ಲಿ ಸುಡುಮದ್ದು ಸಿಡಿಸುವ ಮೂಲಕ ಆನೆಗಳನ್ನು ಉಪ್ಪಿನಂಗಡಿ ಪೇಟೆಯತ್ತ ಸಂಚರಿಸದಂತೆ ಅಧಿಕಾರಿಗಳು ನಿರಂತರ ಪ್ರಯತ್ನ ನಡೆಸಿದರು. ಸಂಜೆ ಹೊತ್ತಿಗೆ ಆನೆ ನದಿಯಲ್ಲೇ ಕೂಟೇಲು ಕಡೆಯಿಂದ ಪಂಜಳ ತನಕ ಸಂಚರಿಸುವುದು ಹಿಂದಿರುಗುವುದು ಮಾಡುತ್ತಲೇ ಇದ್ದ ಕಾರಣ ಇಲಾಖಾಧಿಕಾರಿಗಳು ಆನೆ ಓಡಿಸುವ ಪ್ರಯತ್ನ ಮಾಡುತ್ತಿದ್ದರು. ಈ ಹರಸಾಹಸದಿಂದ ಕಾಡಾನೆಗಳು ಪಂಜಳ ತಲುಪಿವೆ.

ಸ್ಥಳದಲ್ಲಿ ಮಂಗಳೂರು ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ವಿಭೂತೆ, ಎಸಿಎಫ್‌ ಸುಬ್ಬಯ್ಯ ನಾಯ್ಕ ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಪೆಲೀಸ್ ಅಧಿಕಾರಿಗಳು, ಸುಖಿತಾ ಶೆಟ್ಟಿ, ದಿನೇಶ್ ಬಿ. ನೇತೃತ್ವದ ಗೃಹರಕ್ಷಕ ದಳದ ತಂಡ ಘಟನಾ ಸ್ಥಳದಲ್ಲಿದ್ದು, ಆನೆಗಳ ಸಂಚಾರ ನಿಗಾವಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...