ಮಂಗಳೂರು | ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಯ ಎರಡನೇ ಭಾಗ ಬಿಡುಗಡೆ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ ಪತ್ರಕರ್ತ ಹಂಝ ಮಲಾರ್ ಸಂಪಾದಿಸಿದ ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಯ ಎರಡನೇ ಭಾಗ ಮತ್ತು ಮರುಮುದ್ರಣಗೊಂಡ ಮೊದಲ ಭಾಗದ ಬಿಡುಗಡೆ ಕಾರ್ಯಕ್ರಮವು ಮಂಗಳೂರು ನಗರದ ಸಹೋದಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿದ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಮಾತನಾಡಿ, “ಮುಂದಿನ ಪೀಳಿಗೆಗೆ ಬ್ಯಾರಿ ಸಮುದಾಯವನ್ನು ಪರಿಚಯಿಸುವ ಕಾರ್ಯ ಮತ್ತಷ್ಟು ಆಗಬೇಕಾಗಿದೆ. ಹಾಗಾಗಿ ಗತಿಸಿದವರ ಬಗ್ಗೆ ಮಾತ್ರವಲ್ಲ, ಜೀವಂತ ಇರುವ ಸಾಧಕರ ಕುರಿತ ಪುಸ್ತಕವೂ ಪ್ರಕಟಗೊಳ್ಳಬೇಕು. ಶಾಸಕರ ನಿಧಿಯಲ್ಲಿ 2 ಲಕ್ಷ ರೂ. ಮೊತ್ತದ ಪುಸ್ತಕಗಳನ್ನು ಖರೀದಿಸಲು ಅವಕಾಶವಿದೆ. ನನ್ನ ನಿಧಿಯಿಂದ 1 ಲಕ್ಷ ರೂ. ಮೊತ್ತದಲ್ಲಿ ಮರೆಯಲಾಗದ ಬ್ಯಾರಿ ಮಹನೀಯರು ಕೃತಿಯ ಪ್ರತಿಗಳನ್ನು ಖರೀದಿಸಿ ವಿತರಿಸಲಾಗುವುದು” ಎಂದು ಹೇಳಿದರು.

ಬ್ಯಾರಿ ಸಮುದಾಯದ ಬಹುದಿನಗಳ ಬೇಡಿಕೆಯಾದ ಬ್ಯಾರಿ ಭವನದ ಯೋಜನೆ ಸಿದ್ಧವಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕ್ರತಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ತಿಂಗಳು ಶಿಲಾನ್ಯಾಸ ಮಾಡಲಾಗುವುದು. ಬ್ಯಾರಿ ಭವನದ ಅಂದಾಜು ಯೋಜನಾ ವೆಚ್ಚ 3 ಕೋ. ರೂ.ನಿಂದ 9 ಕೋ.ರೂ.ಗೆ ಹೆಚ್ಚಿದೆ. ಅನುದಾನದ ಬಗ್ಗೆ ಲೆಕ್ಕಿಸದೆ ಸಮುದಾಯಕ್ಕೆ ಮಾದರಿ ಭವನ ನಿರ್ಮಿಸಲು ಪ್ರಯತ್ನಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಶಯ ಭಾಷಣ ಮಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, “ಇತಿಹಾಸ ಮತ್ತು ಅದಕ್ಕೆ ಸಂಬಂಧಿಸಿದ ವ್ಯಕ್ತಿಗಳನ್ನು ವರ್ತಮಾನದ ಮಾರ್ಗದರ್ಶನವಾಗಿಸಿಕೊಳ್ಳಬೇಕೇ ಹೊರತು ಇತಿಹಾಸ ಭಾರ ಆಗಬಾರದು. ಭಾರವಾದರೆ ವರ್ತಮಾನ ಕಣ್ಣು ಮುಚ್ಚುವ ಪರಿಸ್ಥಿತಿ ನಿರ್ಮಾಣ ಆಗಬಹುದು. ಭಾರತದಲ್ಲಿ ಹಿಂದುತ್ವ, ಜಾಗತೀಕರಣ ಮುಂತಾದವುಗಳ ಪ್ರಭಾವದಿಂದ ಇತಿಹಾಸವನ್ನು ತಿರುಚುವ ಪ್ರಯತ್ನ ನಡೆದಿವೆ. ವಿವಿಧ ಕಾರಣಗಳಿಂದ ಪೂರ್ವದ ಕಡೆಗೆ ವಿಸ್ತರಿಸುತ್ತ ಸಾಗಿದ ಇಸ್ಲಾಮ್ ಮತ್ತು ಅರೆಬಿಕ್ ಸಂಸ್ಕೃತಿ ಸೌಹಾರ್ದದಿಂದ ಬೆರೆತು ಸ್ಥಳೀಯವಾಗಿದೆ. ಅಂಥ ಇಸ್ಲಾಮನ್ನು ಬಲಪಂಥೀಯರು ಮತ್ತು ಮತೀಯವಾದಿಗಳು ಈಗಲೂ ಕಾಸ್ಮೊ ಪೊಲಿಸ್ ಸಂಸ್ಕೃತಿಗೆ ಸೀಮಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅಭಿಪ್ರಾಯಿಸಿದರು.

510949234 18357024607197731 2579762539478669583 n

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ಭಾಗವಹಿಸಿದ ಬ್ಯಾರಿ ಇನ್ಫೋ ಡಾಟ್ ಕಾಂ ಮುಖ್ಯಸ್ಥ ಬಿ.ಎ. ಮುಹಮ್ಮದಲಿ ಕಮ್ಮರಡಿ ಮಾತನಾಡಿದರು. ಕೃತಿಗಳ ಸಂಪಾದಕ ಹಂಝ ಮಲಾರ್ ಕೃತಿ ಪರಿಚಯ ಮಾಡಿದರು.

ವೇದಿಕೆಯಲ್ಲಿ ರಿಜಿಸ್ಟ್ರಾರ್ ರಾಜೇಶ್ ಜಿ., ತುಳು ಅಕಾಡಮಿಯ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ಉಪಸ್ಥಿತರಿದ್ದರು. ಅಕಾಡಮಿಯ ಸದಸ್ಯರಾದ ಬಿ.ಎಸ್.ಮುಹಮ್ಮದ್ ಚಿಕ್ಕಮಗಳೂರು, ಸಾರಾ ಅಲಿ ಪರ್ಲಡ್ಕ, ಹಮೀದ್ ಹಸನ್ ಮಾಡೂರು, ಅಬೂಬಕರ್ ಅನಿಲಕಟ್ಟೆ ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನು ಓದಿದ್ದೀರಾ? ಕುಂದಾಪುರ | ಪತ್ನಿಯ ರೀಲ್ಸ್ ನೋಡುವ ಹವ್ಯಾಸಕ್ಕೆ ಕೋಪಗೊಂಡ ಪತಿ: ಹಲ್ಲೆಗೈದು ಕೊಲೆ!

ಅಕಾಡಮಿಯ ಮಾಜಿ ಸದಸ್ಯ ಹುಸೈನ್ ಕಾಟಿಪಳ್ಳ ಧ್ಯೇಯಗೀತೆ ಹಾಡಿದರು. ಅಕಾಡಮಿಯ ಸದಸ್ಯರಾದ ಶಮೀರಾ ಜಹಾನ್ ಸ್ವಾಗತಿಸಿದರು. ಶರೀಫ್ ಭಾರತ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು. ತಾಜುದ್ದೀನ್ ಅಮ್ಮುಂಜೆ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...