‌ಮಂಗಳೂರು | ಕೂಳೂರು ಬಳಿ ಮತ್ತೆ ಟ್ರಾಫಿಕ್‌ ಜಾಮ್; ಹೈರಾಣಾದ ಸವಾರರು

Date:

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕೂಳೂರಿನ ಹಳೆ ಸೇತುವೆಯ ಪಕ್ಕದ ರಸ್ತೆಯಲ್ಲಿರುವ ಹೊಂಡ ಗುಂಡಿಗಳನ್ನು ಮುಚ್ಚಲು ಸಂಚಾರ ಬಂದ್‌ ಮಾಡಿದ್ದ ಹೆದ್ದಾರಿ ಇಲಾಖೆ ಇದೀಗ ಸೇತುವೆ ಮೇಲಿನ ಹೊಂಡ ಮುಚ್ಚುಲು ಮಂಗಳವಾರ ಮಧ್ಯಾಹ್ನ ಕೆಲವು ಗಂಟೆಗಳ ಕಾಲ ಸೇತುವೆ ಬಂದ್ ಮಾಡಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಹೆದ್ದಾರಿ ಇಲಾಖೆಯು ರಸ್ತೆ ಪಕ್ಕದ ಹೊಂಡಗಳನ್ನು ಮುಚ್ಚುವ ಸಂದರ್ಭದಲ್ಲಿ ಸೇತುವೆಯ ಮೇಲಿನ ಹೊಂಡವನ್ನು ಆ ವೇಳೆಯಲ್ಲಿ ಸರಿಪಡಿಸಬಹು ದಗಿತ್ತು. ಆದರೆ, ಸಮಯದಲ್ಲಿ ಸುಮ್ಮನಿದ್ದ ಇಲಾಖೆ ಈಗ ಮಾತ್ರ ಹೊಂಡಗಳ ಗಾತ್ರ ಹೆಚ್ಚಾಗಿ ವಾಹನಗಳು ಸಂಚರಿಸುವುದು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿರುವುದಿಂದ ವಿಪರೀತ ಮಳೆಯ ಮಧ್ಯೆ ಹೊಂಡ ಗುಂಡಿಗಳನ್ನು ಮುಚ್ಚಲು ಮುಂದಾದ ಅಧಿಕಾರಿಗಳಿಗೆ ವಾಹನ ಸವಾರರು ಹಿಡಿಶಾಪ ಹಾಕುತ್ತಾರೆ.

ಇದನ್ನೂ ಓದಿ: ಧರ್ಮಸ್ಥಳ | ಗ್ರಾಮ ಪಂಚಾಯತ್‌ನಿಂದ ಮಹತ್ವದ ದಾಖಲೆ ಪಡೆದುಕೊಂಡ ಎಸ್‌ಐಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳವಾರ ಮಧ್ಯಾಹ್ನ ಹಳೆ ಸೇತುವೆಯನ್ನು ಕೆಲವು ಗಂಟೆಗಳ ಕಾಲ ಬಂದ್ ಮಾಡಿ ಸೇತುವೆಯ ಮೇಲಿನ ಹೊಂಡಗಳನ್ನು ಮುಚ್ಚಲಾಯಿತು. ಈ ವೇಳೆ ವಾಹನಗಳನ್ನು ಹೊಸ ಸೇತುವೆಯಲ್ಲೇ ಸಂಚರಿಸಲು ಸೂಚಿಸಲಾಯಿತು. ಇದರಿಂದಾಗಿ ಒಂದೇ ಕಡೆ ಸಂಚಾರದಿಂದಾಗಿ ಕೂಳೂರು ಬಳಿಯಲ್ಲಿ ಭಾರಿ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಯಿತು. ಇತ್ತ ಪೊಲೀಸರು ಮಾತ್ರ ಸುಗಮ ಸಂಚಾರಗೊಳಿಸಲು ಹರಸಾಹಸ ಪಟ್ಟರು.

ಇದನ್ನೂ ಓದಿ: ಧರ್ಮಸ್ಥಳ | ಗುಂಪುಗಳ ನಡುವೆ ವಾಗ್ವಾದ: ವಾಹನಗಳ ಮೇಲೆ ಕಲ್ಲು ತೂರಾಟ; ಸ್ಟೇಷನ್ ಮುಂದೆ ಧರಣಿ

ಹೊಸ ಸೇತುವೆ ಬಂದ್ ಮಾಡಿ ಹಳೆ ಸೇತುವೆಯೊಂದರಲ್ಲೇ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಭಾರಿ ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು. ಬಸ್, ಟ್ರಕ್‌ಗಳ ನಿಧಾನಗತಿಯ ಸಂಚಾರದಿಂದಾಗಿ ಎಂಸಿಎಸ್‌ನಿಂದ ಆರಂಭವಾಗಿ ಎ.ಜೆ. ಆಸ್ಪತ್ರೆವರೆಗೂ ವಾಹನಗಳ ಸಾಲು ಕಂಡುಬಂತು. ಕೆಲವೊಮ್ಮೆ ಬಸ್‌ ಚಾಲಕರು, ಕಾರು ಚಾಲಕರು ಮಧ್ಯೆ ಜಗಳ ನಡೆಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...