ಮಂಗಳೂರು | ವೃದ್ಧರಿದ್ಧ ಮನೆಗೆ ನುಗ್ಗಿ ದರೋಡೆಗೈದ ಗ್ಯಾಂಗ್; ಕಾರು ಸಹಿತ ಪರಾರಿ

Date:

ಮಂಗಳೂರು ನಗರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಮಳೆಯ ನಡುವೆಯೇ ಕಳ್ಳತನ ಪ್ರಕರಣಗಳು ಕೂಡ ಹೆಚ್ಚಾಗುತ್ತಿದ್ದು, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಎರಡು ದರೋಡೆ ಪ್ರಕರಣಗಳು ವರದಿಯಾಗಿದೆ.

ಈ ಎರಡು ಪ್ರಕರಣಗಳ ಪೈಕಿ ಒಂದು ಮನೆ ದರೋಡೆಯಾದರೆ, ಇನ್ನೊಂದು ಸಗಟು ಜಿನಸು ಮಾರಾಟ ಮಳಿಗೆಗೆ ನುಗ್ಗಿ ಹಣ ದರೋಡೆಗೈದಿರುವ ಬಗ್ಗೆ ವರದಿಯಾಗಿದೆ. ಈ ಎರಡೂ ಪ್ರಕರಣಗಳಲ್ಲಿ ಉತ್ತರ ಭಾರತ ಮೂಲದ ಚಡ್ಡಿ ಗ್ಯಾಂಗ್‌ನ ಕೃತ್ಯ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ದರೋಡೆ 1 1

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಜುಲೈ 7ರಂದು ಈ ಚಡ್ಡಿ ಗ್ಯಾಂಗ್ ಮನೆಯೊಂದಕ್ಕೆ ನುಗ್ಗಿ, ಕಿಟಿಕಿಯ ಕಬ್ಬಿಣದ ಸಲಾಕೆ ತುಂಡರಿಸಿ, ಕಳ್ಳತನಗೈದಿತ್ತು. ಈ ಘಟನೆ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ದರೋಡೆಗೈದ ಬಳಿಕ ಕಾರು ಸಹಿತ ಪರಾರಿ

ಮಂಗಳವಾರ ಮುಂಜಾನೆ 3.30ರ ಅವಧಿಯಲ್ಲಿ 4 ಮಂದಿ ದರೋಡೆಕೋರರ ತಂಡ ಉರ್ವ ಕೊಟ್ಟಾರದ ಬಳಿ ವೃದ್ಧ ದಂಪತಿ ವಾಸವಿರುವ ಮನೆಯೊಂದಕ್ಕೆ ಪ್ರವೇಶಿಸಿ, ಮಾರಕಾಯುಧ ತೋರಿಸಿ ಬೆದರಿಸಿ ದರೋಡೆ ಕೃತ್ಯ ನಡೆಸಿದ್ದಾರೆ.

robbery 3

ದರೋಡೆಯ ಬಳಿಕ ಮನೆಯ ಕಾರಿನ ಕೀ ಪಡೆದು ಆ ಕಾರಿನಲ್ಲಿ ಉಡುಪಿಯತ್ತ ತೆರಳಿದ್ದಾರೆ. ಆರೋಪಿಗಳು ಪರಾರಿಯಾದ ಕಾರು ಮುಲ್ಕಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಮನೆಯಲ್ಲಿದ್ದ ವೃದ್ಧ ದಂಪತಿಯ ಮಕ್ಕಳು ವಿದೇಶದಲ್ಲಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಅಲ್ಲದೇ, ದರೋಡೆಯ ವೇಳೆ ವೃದ್ಧ ದಂಪತಿಗೆ ಹಲ್ಲೆಗೈದಿದ್ದು, ಅವರಿಗೆ ಗಾಯವುಂಟಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಮೂಲ್ಕಿಯಲ್ಲಿ ಪತ್ತೆಯಾದ ಕಾರು

ಉಡುಪಿ ಜಿಲ್ಲೆ ಪ್ರವೇಶಿಸುವ ಮುನ್ನ ಸಿಗುವ ಹೆಜಮಾಡಿ ಟೋಲ್ ಗೇಟ್‌ಗೂ ಮುನ್ನವೇ ಕಾರನ್ನು ಮೂಲ್ಕಿ ಪ್ರದೇಶದಲ್ಲಿ ನಿಲ್ಲಿಸಿ, ಅವರ ಕಾರಿನಲ್ಲಿ ಪರಾರಿಯಾಗಿರುವ ಶಂಕೆಯಿದೆ. ಮೂಲ್ಕಿಯ ಆಧಿದನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ವೃದ್ಧ ದಂಪತಿಯ ದರೋಡೆಗೈದ ಸೊತ್ತುಗಳ ಮೌಲ್ಯ ಇನ್ನೂ ತಿಳಿದು ಬಂದಿಲ್ಲ.

ದರೋಡೆ 1

ಕಾರಿನೊಳಗೆ ಮೊಬೈಲ್ ಒಂದು ಪತ್ತೆಯಾಗಿದ್ದು, ಇದು ಯಾರ ಮೊಬೈಲ್ ಎಂದು ಪೊಲೀಸರ ತನಿಖೆಯ ಬಳಿಕವಷ್ಟೇ ತಿಳಿದುಬರಲಿದೆ. ಸದ್ಯಕ್ಕೆ ದೊರೆತಿರುವ ಮಾಹಿತಿಯ ಪ್ರಕಾರ, ಇದು ದರೋಡೆಕೋರರ ಮೊಬೈಲ್ ಆಗಿರುವ ಸಾಧ್ಯತೆ ಇದ್ದು, ಪರಾರಿಯಾಗುವ ಅವಸರದಲ್ಲಿ ಕಾರಿನಲ್ಲೇ ಬಾಕಿಯಾಗಿರಬಹುದೆಂದು ಅಂದಾಜಿಸಲಾಗಿದೆ.

mulki

ದರೋಡೆಗೊಳಗಾದ ಕೊಟ್ಟಾರದ ಮನೆಗೆ ಉರ್ವ ಪೊಲೀಸರು, ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಮುಲ್ಕಿ ಪೊಲೀಸರು ಕಾರನ್ನು ಪತ್ತೆಹಚ್ಚಿ, ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಸಿ ಕ್ಯಾಮೆರಾ ಪರಿಶೀಲನೆ:

ಘಟನೆ ನಡೆದ ಬೆನ್ನಲ್ಲೇ ಪೊಲೀಸರು ದರೋಡೆಗೈದ ಮನೆಯ ಸುತ್ತಮುತ್ತ, ರಸ್ತೆ, ಹೆದ್ದಾರಿಯ ಸಿಸಿ ಕ್ಯಾಮೆರಾಗಳನ್ನು ಶೋಧ ನಡೆಸುತ್ತಿದ್ದಾರೆ.

ಪಂಪ್‌ವೆಲ್: ಬಿ ಎಚ್ ಸ್ಟೋರ್‌ಗೆ ನುಗ್ಗಿದ ಕಳ್ಳರು

ಉರ್ವಸ್ಟೋರ್ ಮಾತ್ರವಲ್ಲದೇ, ನಗರದ ಪಂಪ್‌ವೆಲ್ ಕಪಿತಾನಿಯೋ ಶಾಲೆಯ ಬಳಿ ಇರುವ ಹಮ್ಮಬ್ಬ ಎಂಬುವವರ ಬಿಎಚ್ ಸ್ಟೋರ್‌ಗೆ ನಿನ್ನೆ ರಾತ್ರಿ ನುಗ್ಗಿದ ಇಬ್ಬರು ಕಳ್ಳರು ನಗದು ಕಳವುಗೈದಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ಅರಿತ ಬಳಿಕ ಕಂಕನಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮಹಜರು ನಡೆಸಿದ್ದಾರೆ.

robbery 1

Robbery 2

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...