ಮಂಗಳೂರು ವಿಶ್ವವಿದ್ಯಾನಿಲಯ: ‘ಮಾಮ್ ಇನ್‌ಸ್ಪೈರ್’ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

ಮಂಗಳೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘಟನೆ ಮೀಡಿಯಾ ಅಲೂಮ್ನಿ ಅಸೋಸಿಯೇಷನ್‌ ಆಫ್‌ ಮಂಗಳಗಂಗೋತ್ರಿ (ಮಾಮ್) ವತಿಯಿಂದ ನೀಡಲಾಗುವ 2023-24ನೇ ಸಾಲಿನ ‘ಮಾಮ್ ಇನ್‌ಸ್ಪೈರ್’ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳ ಯಾವುದೇ ಪದವಿ ವಿಭಾಗ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯ ಸಾಧಕ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪ್ರಶಸ್ತಿ ನೀಡಲಾಗುತ್ತದೆ. ವಿಜೇತರಿಗೆ 5 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ನೀಡಲಾಗುವುದು.

2023-24ರಲ್ಲಿ ಯಾವುದೇ ಪದವಿಯ ಅಧ್ಯಯನ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಅಧ್ಯಯನ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದವಿ ವಿದ್ಯಾರ್ಥಿಗಳಿಗೆ:

2023ರ ಜೂನ್‌ನಿಂದ 2024ರ ಮೇ ಅಂತ್ಯದ ಒಳಗೆ ಕನಿಷ್ಠ 8 ಲೇಖನಗಳು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿರಬೇಕು.
ರೇಡಿಯೋ, ಟಿವಿ ಕಾರ್ಯಕ್ರಮಗಳು ಪ್ರಸಾರವಾಗಿರಬೇಕು. ಮಾಧ್ಯಮ ಕ್ಷೇತ್ರದ ಬಗ್ಗೆ ಆಸಕ್ತರಾಗಿರಬೇಕು.
ಶೈಕ್ಷ ಣಿಕ ವಿಷಯಗಳಲ್ಲಿ ಶೇ.60ರಷ್ಟು ಅಂಕ ಗಳಿಸಿರಬೇಕು. ಬ್ಲಾಗ್‌ಬರಹ, ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸಿರಬೇಕು. ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯರಾಗಿರಬೇಕು.

ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗ:

ಸ್ನಾತಕೋತ್ತರ ವಿಭಾಗದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪದವಿ ವಿದ್ಯಾರ್ಥಿಗಳಿಗಿರುವ ಮಾನದಂಡಗಳು ಇಲ್ಲಿಯೂ ಅನ್ವಯಿಸುತ್ತವೆ. ಕನಿಷ್ಠ 12 ಲೇಖನ/ ನುಡಿಚಿತ್ರಗಳು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿರಬೇಕು. ಶೇ.55ರಷ್ಟು ಅಂಕ ಗಳಿಸಿರಬೇಕು. ಛಾಯಾಗ್ರಹಣ, ಸಾಕ್ಷ್ಯಚಿತ್ರ ನಿರ್ಮಾಣ, ಡಿಜಿಟಲ್/ ನವ ಮಾಧ್ಯಮ/ ಸಿನಿಮಾ/ ಒಟಿಟಿ ಕಂಟೆಂಟ್, ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಸಕ್ರಿಯರಾಗಿರುವುದು. ಸಾರ್ವಜನಿಕ ಸಂಪರ್ಕ ಮತ್ತು ಪರಿಣಾಮಕಾರಿ ಕಾರ್ಯತಂತ್ರ, ಅತ್ಯುತ್ತಮ ಜಾಹೀರಾತು ವಿನ್ಯಾಸ, ಹೊಸ ಪರಿಕಲ್ಪನೆಗಳು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು, ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವುದು, ಅಧ್ಯಯನ ವರದಿಗಳು (ಶೈಕ್ಷಣಿಕ ವರ್ಷದ ಪ್ರೌಢ ಪ್ರಬಂಧ ಹೊರತುಪಡಿಸಿ) ಪ್ರಕಟವಾಗಿರಬೇಕು.

ಇದನ್ನು ಓದಿದ್ದೀರಾ? ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ | ಸಿಬಿಐ, ಯತ್ನಾಳ್ ಅರ್ಜಿ ವಜಾ; ಡಿಕೆಶಿಗೆ ರಿಲೀಫ್

ಎಲ್ಲ ಸಾಧನೆಗಳ ದಾಖಲೆಗಳನ್ನು ತಮ್ಮ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಿಸಿ, ಸ್ವವಿರವುಳ್ಳ ಪತ್ರದ ಸಹಿತ 2024ರ ಅಕ್ಟೋಬರ್ 12ರ ಒಳಗೆ ಕಳುಹಿಸಬೇಕು. ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಡಿಜಿಟಲ್‌ ರೂಪದಲ್ಲಿ ಒಂದೇ ಪಿಡಿಎಫ್ ಫೈಲ್‌ನಲ್ಲಿ ಹಾಕಿ ಇ-ಮೇಲ್‌ವಿಳಾಸ :reachtomaam@gmail.comಗೆ ಮೂಲಕ ಕಳುಹಿಸಬೇಕು.

ಮಾಹಿತಿಗೆ ಸಂಘಟನೆಯ ಅಧ್ಯಕ್ಷ ನವೀನ್ ಅಮ್ಮೆಂಬಳ-9449588440, ಸಂಚಾಲಕ ಕೃಷ್ಣಮೋಹನ ತಲೆಂಗಳ- 9481976969, ಅಥವಾ ಶರತ್ ಹೆಗ್ಡೆ ಕಡ್ತಲ- 9964677010 ಇವರನ್ನು ಸಂಪರ್ಕಿಸಬಹುದು ಎಂದು ಮಾಮ್ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...