ಪಕ್ಷ ಮರೆತು ನಾರಾಯಣ‌ಗುರು ವಿಚಾರ ವೇದಿಕೆಯಿಂದ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ: ಸತ್ಯಜಿತ್ ಸುರತ್ಕಲ್

Date:

ಈ ಸಲದ ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ, ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.

ಮಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಟೀಮ್ ಸತ್ಯಜಿತ್ ಸುರತ್ಕಲ್‌ನಲ್ಲಿ ವಿವಿಧ ಸಮಾಜದ ಬಾಂಧವರು ಇರುವುದರಿಂದ ಅದು ಹಾಗೇ ಮುಂದುವರಿಯಲಿದೆ. ಚುನಾವಣೆಯ ನನ್ನ ಕಾರ್ಯಕ್ಕೂ ಆ ತಂಡಕ್ಕೂ ಯಾವುದೇ ಸಂಬಂಧ ಇರುವುದಿಲ್ಲ. ನನ್ನ ಯಾವುದೇ ಕಾರ್ಯಕ್ಕೂ ಬೆಂಬಲ ನೀಡವುದಾಗಿ ಹೇಳಿದ್ದು, ಮುಂದಿನ ದಿನಗಳಲ್ಲಿ ಆ ತಂಡ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿದೆ ಎಂದು ಹೇಳಿದರು.

“ಕಳೆದ ಶುಕ್ರವಾರ ಎಸ್‌ಎನ್‌ಜಿವಿಯ ಸಭೆ ನಡೆದು ಅಂತಿಮ ನಿರ್ಧಾರಕ್ಕೆ ಬರಲಾಗಿದೆ. ರಾಜ್ಯದಲ್ಲಿ ನಾರಾಯಣಗುರು ಸಮಾಜ ಎಂದು ಹೇಳುವ ಬಿಲ್ಲವ, ಈಡಿಗ, ನಾಮಧಾರಿ ಎಂಬ 26 ಪಂಗಡಗಳ ಸಮಾಜ ಅನೇಕ ವರ್ಷಗಳ ನಂತರ ಸಮಾಜಕ್ಕೆ ಮೂರು ಕ್ಷೇತ್ರಗಳಲ್ಲಿ ಅವಕಾಶ ದೊರಕಿದೆ. ದ.ಕ., ಉಡುಪಿ, ಚಿಕ್ಕಮಗಳೂರು, ಕಾರವಾರ, ಶಿವಮೊಗ್ಗದಲ್ಲಿ ಸಮಾಜದ 12 ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ನಮ್ಮ ಸಮಾಜ ಬಹುಸಂಖ್ಯಾತ ಸಮಾಜವಾಗಿದೆ. ಆದರೆ ಬಿಜೆಪಿಯಿಂದ 33 ವರ್ಷಗಳಿಂದ ಈ ನಾಲ್ಕೂ ಕ್ಷೇತ್ರಗಳಲ್ಲಿಯೂ ಸಮಾಜದ ಅಭ್ಯರ್ಥಿಗೆ ಅವಕಾಶ ನೀಡಲಾಗಿಲ್ಲ. ಕಾಂಗ್ರೆಸ್‌ನಲ್ಲಿ ನಾಲ್ಕನೆ ಬಾರಿ ಜನಾರ್ದನ ಪೂಜಾರಿ ಸೋತ ಬಳಿಕ ಕಳೆದ ಬಾರಿ ದ.ಕ.ದಲ್ಲಿ ಬಂಟ ಸಮುದಾಯದ ಅಭ್ಯರ್ಥಿಯಾಗಿದ್ದ ಮಿಥುನ್ ರೈ ಅವರಿಗೆ ಅವಕಾಶ ನೀಡಲಾಗಿತ್ತು. ಆದರೆ ಅವರು ಸೋತಿದ್ದರು” ಎಂದು ಸಂಘಪರಿವಾರದ ಮಾಜಿ ಮುಖಂಡ ಸತ್ಯಜಿತ್ ಸುರತ್ಕಲ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್‌ಎನ್‌ಜಿವಿ ಸಂಘಟನೆ ಆರಂಭವಾದ ಶಿವಮೊಗ್ಗದ ಸಿಗಂದೂರಿನಲ್ಲಿ ಆರಂಭಗೊಂಡ ಹೋರಾಟ ಬ್ರಹ್ಮಶ್ರೀ ನಾರಾಯಣಗುರುಗಳ ಟ್ಯಾಬ್ಲೋ ವಿಚಾರ, ಪಠ್ಯಪುಸ್ತಕ, ಅಭಿವೃದ್ಧಿ ನಿಗಮ, ಕಾಂತರಾಜು ವರದಿ ಹೋರಾಟ, ವಿಮಾನ ನಿಲ್ದಾಣಕ್ಕೆ ಕೋಟಿಚೆನ್ನಯ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂಗಾರಪ್ಪರ ಹೆಸರಿಡುವ ಹೋರಾಟ ಸೇರಿದಂತೆ ಹಲವು ಹೋರಾಟಗಳು ನಡೆದಿವೆ. ಇದರ ಪರಿಣಾಮವಾಗಿ ಸಮಾಜಕ್ಕೆ ಬಿಜೆಪಿಯಿಂದ ಉಡುಪಿ- ಚಿಕ್ಕಮಗಳೂರು, ಕಾಂಗ್ರೆಸ್‌ನಿಂದ ಶಿವಮೊಗ್ಗ ಹಾಗೂ ದ.ಕ.ದಲ್ಲಿ ಅವಕಾಶ ನೀಡಲಾಗಿದೆ. ಸಮಾಜದ ಸಂಘಟನೆಯಾಗಿ, ಸಮಾಜವನ್ನು ಗೆಲ್ಲಿಸಲು, ಪಕ್ಷವನ್ನು ಪಕ್ಕಕ್ಕಿಟ್ಟು ಸಮಾಜದ ಅಭ್ಯರ್ಥಿಗಳಾದ ಪದ್ಮರಾಜ್ ಆರ್., ಕೋಟ ಶ್ರೀನಿವಾಸ ಪೂಜಾರಿ ಹಾಗೂ ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲ್ಲಿಸುವ ಪ್ರಯತ್ನ ನಾರಾಯಣ ಗುರು ವಿಚಾರವೇದಿಕೆಯಿಂದ ಆಗಲಿದೆ” ಎಂದು ಸತ್ಯಜಿತ್ ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?

ಇವರು ಮೂವರು ಗೆದ್ದರೆ ಸಮಾಜಕ್ಕೆ ದೊಡ್ಡ ಶಕ್ತಿ ಸಿಗಲಿದೆ. ಉಳಿದ ಸಮಾಜಗಳಂತೆ ನಮ್ಮ ಸಮಾಜವನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮೇಲೆತ್ತಲು ಸಾಧ್ಯ ಆಗಲಿದೆ. ಆ ನಿಟ್ಟಿನಲ್ಲಿ ಮೂರು ಕ್ಷೇತ್ರಗಳಲ್ಲಿಯೂ ತಾನೂ ಪ್ರಚಾರ ಕಾರ್ಯ ನಡೆಸುವುದಾಗಿ ಸತ್ಯಜಿತ್ ಸುರತ್ಕಲ್ ಘೋಷಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...