ಮಂಗಳೂರು | ಮಹಾ ಮಳೆಗೆ ನೆಲೆ ಕಳೆದುಕೊಂಡ 916 ಕುಟುಂಬಗಳು

Date:

ದ.ಕ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ 5 ಮಂದಿ ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ವರುಣನ ಆರ್ಭಟಕ್ಕೆ 35 ಜಾನುವಾರುಗಳು ಬಲಿಯಾಗಿವೆ. ಜಿಲ್ಲೆಯಾದ್ಯಂತ ಒಟ್ಟು 916 ಮನೆಗಳು ಮಳೆಯಿಂದಾಗಿ ಹಾನಿಗೊಂಡಿವೆ. ಈ ಪೈಕಿ 84 ಮನೆಗಳು ಸಂಪೂರ್ಣ ಕುಸಿದು, ಮನೆ ಮಂದಿ ಅತಂತ್ರಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಹಿಂದುತ್ವಕ್ಕೂ ಹಿಂದು ಧರ್ಮಕ್ಕೂ ಸಂಬಂಧವೇ ಇಲ್ಲ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಪ್ರಕಾಶ್

729.4 ಮಿ.ಮೀ ಮಳೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರಾವಳಿಯಲ್ಲಿ ಜನವರಿಯಿಂದ ಜೂನ್ 21 ರವರೆಗೆ 1729.4 ಮಿಮೀ ಮಳೆಯಾಗಿದೆ. ಅಂದರೆ ಸರಾಸರಿ ಮಳೆಗಿಂತ ಈ ಬಾರಿ ದುಪ್ಪಟ್ಟು ಮಳೆಯಾಗಿದೆ. 818.5 ಮಿಮೀ ವಾಡಿಕೆ ಮಳೆಯಾಗಿದೆ. ಆದರೆ ಈ ಬಾರಿಯ ಮಳೆ ಸಾಕಷ್ಟು ಹಾನಿಯನ್ನು ಕೂಡ ಮಾಡಿದೆ. ಮೂಡುಬಿದಿರೆಯಲ್ಲಿ 1987.7 ಮಿಮೀ ಮಳೆಯಾಗಿದೆ.

ಇದನ್ನೂ ಓದಿ: ಮಂಗಳೂರು | ಮಹಾನಗರ ಪಾಲಿಕೆಗೆ ಡಿಸಿ ದಿಢೀರ್ ಭೇಟಿ

ಮಳೆಯಿಂದಾಗಿ 7.224 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕಾ ಬೆಳೆಗಳು ಸಂಪೂರ್ಣವಾಗಿ ಹಾನಿಯಾಗಿವೆ. 4,447 ವಿದ್ಯುತ್ ಕಂಬಗಳು ಹಾನಿಗೊಂಡಿದ್ದು, 124 ಟ್ರಾನ್ಸ್‌ಫಾರ್ಮ‌್ರಗಳಿಗೆ ಹಾನಿಯಾಗಿದೆ. ವಿವಿಧ ಭಾಗಗಳಲ್ಲಿ 25 ಸೇತುವೆಗಳು ಕುಸಿದಿದ್ದು, 253.24 ಕಿಲೋಮೀಟರ್ ಉದ್ದದ ರಸ್ತೆಗಳು ಹಾಳಾಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ:₹1 ಲಕ್ಷ ಕ್ರೀಡಾ ಪ್ರೋತ್ಸಾಹಧನ; ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನ

92 ವಿಪತ್ತು ಪೀಡಿತ ಪ್ರದೇಶಗಳು

ಜಿಲ್ಲೆಯಲ್ಲಿ ಒಟ್ಟು 92 ಕಡೆ ಪ್ರವಾಹ ಪೀಡಿತ ಸ್ಥಳಗಳನ್ನು ಗುರುತಿಸಲಾಗಿದೆ. ಬಂಟ್ವಾಳ 11, ಮಂಗಳೂರು, 15, ಮುಲ್ಕಿ 16, ಸುಳ್ಯ 3, ಕಡಬ 7, ಪುತ್ತೂರು, 5, ಬೆಳ್ತಂಗಡಿ 32, ಉಳ್ಳಾಲ 2 ಹೀಗೆ ಹಲವು ಕಡೆಗಳಲ್ಲಿ ಪ್ರವಾಹ ಪೀಡಿತ ಸ್ಥಳಗಳಿದ್ದು, 88 ಸಂಭವೀನಿಯ ಭೂ ಕುಸಿತ ಉಂಟಾಗುವ ಸ್ಥಳಗಳನ್ನು ಜಿಲ್ಲಾಡಳಿತ ಗುರುತಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 135 ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದೆ.

ಆದರೂ, ಕರಾವಳಿ ಭಾಗದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಈ ಬಾರಿ ಮುಂಗಾರು ವಾಡಿಕೆಗಿಂತ ಮೊದಲೇ ಆರಂಭವಾದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ನದಿಗುಳು ತುಂಬಿ ಹರಿಯುತ್ತಿವೆ. ಇತ್ತ ಸಕಾಲದಲ್ಲಿ ಮಳೆಯಾಗಿರುವುದರಿಂದ ರೈತರು ಕೃಷಿ ಚಟುವಟಿಕೆಗಳನ್ನು ಪ್ರಾರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...