ಮಂಗಳೂರು | ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಮನವಿ

Date:

ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನಲ್ಲಿ ನೀರಿನ ಅಭಾವದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಬೇಸಿಗೆ ದಿನಗಳಾಗಿರುವುದರಿಂದ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ ಅವರ ನೇತೃತ್ವದಲ್ಲಿ ಸ್ಥಳೀಯರು ಆಯುಕ್ತರಿಗೆ ಮನವಿ ಸಲ್ಲಿಸಿದರು.

“ಗೌರಿಮಠ, ಟಿ ಟಿ ರಸ್ತೆ, ಮಾರ್ಕೆಟ್ ರಸ್ತೆ, ಶರವು ದೇವಸ್ಥಾನ ರಸ್ತೆ, ಮಹಾಮಾಯ ಟೆಂಪಲ್ ರಸ್ತೆ ಹಾಗೂ ಬಂದರು ಪ್ರದೇಶದಲ್ಲಿ ಕಳೆದ 2-3 ತಿಂಗಳಿಂದ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸ್ಥಳೀಯರು ಸಮಸ್ಯೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಪಾಲಿಕೆಯು ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದೆ. ಪಾಲಿಕೆ ಸದಸ್ಯೆಯಾಗಿ ನನ್ನ ಅವಧಿ ಮುಗಿದಿರಬಹುದು, ಆದರೂ ನನ್ನ ವಾರ್ಡಿನ ಜನತೆಯ ಸಮಸ್ಯೆಗೆ ಸ್ಪಂದಿಸುವುದು ನನ್ನ ಕರ್ತವ್ಯ ಮತ್ತು ಜವಾಬ್ದಾರಿ. ಉಸ್ತುವಾರಿ ಸಚಿವರು ಮಂಗಳೂರಿನಲ್ಲಿ ಇನ್ನೂ ಎರಡು ತಿಂಗಳಿಗೆ ಆಗುವಷ್ಟು ನೀರು ಇದೆ ಎಂದಿದ್ದಾರೆ. ಹಾಗಾದರೆ ನೀರು ಯಾಕೆ ಬಿಡುತ್ತಿಲ್ಲ? ಸಚಿವರು ಒಮ್ಮೆ ಈ ವಾರ್ಡಿಗೆ ಬಂದು ಜನತೆಯ ಸಮಸ್ಯೆಯನ್ನು ಕಣ್ಣಾರೆ ಕಂಡು ಆಮೇಲೆ ಮಾತಾಡಬೇಕು. ಇನ್ನು ಎರಡರಿಂದ ಮೂರು ದಿನ ಕಾದು ನೋಡುತ್ತೇವೆ, ಸಮಸ್ಯೆ ಬಗೆಹರಿಯದಿದ್ದರೆ ವಾರ್ಡಿನ ಜನತೆಯೊಂದಿಗೆ ಪ್ರತಿಭಟನೆ ನಡೆಸಲಾಗುವುದು” ಎಂದು ಪೂರ್ಣಿಮಾ ಅವರು ಎಚ್ಚರಿಕೆ ನೀಡಿದರು.

ವಾರ್ಡ್ ನಿವಾಸಿ ರಮೇಶ್ ಮಾತನಾಡಿ, “ಸಚಿವರೇ ಇನ್ನು ಎರಡು ತಿಂಗಳು ನೀರಿನ ಸಮಸ್ಯೆ ಇಲ್ಲ, ಎಂದು ಹೇಳಿದ ಮೇಲೆ ಅಧಿಕಾರಿಗಳು ಯಾಕೆ ನೀರು ಬಿಡುತ್ತಿಲ್ಲ? ನಮಗೆ ಸಾಕಾಗಿ ಹೋಗಿದೆ. ಒಂದೋ ನೀರು ಕೊಡಿ, ಇಲ್ಲವೇ ವಿಷ ಕೊಡಿ. ನಿಕಟ ಪೂರ್ವ ಪಾಲಿಕೆ ಸದಸ್ಯೆ ನಮ್ಮ ಪರವಾಗಿ ಪ್ರತಿಭಟನೆ ಮಾಡುವುದಾದರೆ ನಾವು ಸಹ ಅವರ ಜೊತೆ ಕೈಜೋಡಿಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಏ.7: BSWT ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಶಿಬಿರ

ಸ್ಥಳೀಯರಾದ ಗಣಪತಿ ಕಾಮತ್, ಮುರಳಿಧರ್ ನಾಯಕ್, ಪೂರ್ಣಿಮಾ ರಾವ್, ರವೀಂದ್ರ ಮಲ್ಯ, ಶ್ರೀಮತಿ, ಸತೀಶ್ ಮಲ್ಯ, ವಿಜಯಲಕ್ಷ್ಮಿ, ಸ್ಮಿತಾ ಶೆಣೈ, ವಿದ್ಯಾ, ತ್ರಿಷಾ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...