ಮಂಗಳೂರು | ಹೆದ್ದಾರಿ ಬದಿ ಕಸ ಎಸೆಯುವುದಕ್ಕೂ ಮುನ್ನ ಇರಲಿ ಎಚ್ಚರ: ನಿಗಾ ವಹಿಸಲು ಬರಲಿದೆ ತಂಡ

Date:

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹೆದ್ದಾರಿ ಬದಿಯಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದನ್ನು ಮಟ್ಟಹಾಕಲು ಅಧಿಕಾರಿಗಳು ಯೋಜನೆ ಹಾಕಿಕೊಂಡಿದ್ದಾರೆ. ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ ಮಾಡುವುದಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ತ್ಯಾಜ್ಯ ಬಿಸಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.

ದ.ಕ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 73 ರ ಇಕ್ಕೆಲಗಳಲ್ಲಿ ತ್ಯಾಜ್ಯ ಬೀಳುವುದನ್ನು ನಿಯಂತ್ರಿಸುವ ಸಲುವಾಗಿ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೊಡ, “ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು; ನಮ್ಮೊಂದಿಗೆ ನೀವು” ಅಭಿಯಾನ ಯಶಸ್ವಿಯಾಗಿ ಕೈಗೊಳ್ಳುವಂತೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಷ್ಟ್ರೀಯ ಹೆದ್ದಾರಿ 73 ರ ಇಕ್ಕೆಲಗಳಲ್ಲಿ ತ್ಯಾಜ್ಯ ಬೀಳುವುದನ್ನು ತಡೆಗಟ್ಟಲು ಮೊದಲನೆಯದಾಗಿ ಮಂಗಳೂರು ತಾಲೂಕಿನ ಅಡ್ಯಾರ್, ಬಂಟ್ವಾಳ ತಾಲೂಕಿನ ತುಂಬೆ, ಪುದು ಹಾಗೂ ಕಳ್ಳಿಗೆ ಗ್ರಾಮ ಪಂಚಾಯತ್‍ಗಳನ್ನು ಆಯ್ಕೆ ಮಾಡಲಾಗಿದ್ದು, ಈ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ಬೀಳುವ ತ್ಯಾಜ್ಯಗಳನ್ನು ತಡೆಗಟ್ಟಲು ಗಸ್ತು ಪಡೆ ಹಾಗೂ ಬ್ಲಾಕ್ ಸ್ಪಾಟ್‍ಗಳಲ್ಲಿ ನಿಲ್ಲಲು 5 ಜನರ ತಂಡವನ್ನು ರಚಿಸಲು ಸಿದ್ಧತೆ ನಡೆಸಲಾಗಿದೆ. ಬ್ಲಾಕ್ ಸ್ಪಾಟ್‍ನಲ್ಲಿ ನಿಲ್ಲಲು ಪರಿಸರ ಮತ್ತು ಸ್ವಚ್ಛತೆ ವಿಷಯದಲ್ಲಿ ಕಾಳಜಿ ಇರುವವರು ಭಾಗವಹಿಸಬಹುದು. ಈ ಅಭಿಯಾನವು 3 ತಿಂಗಳಿನವರೆಗೆ ನಡೆಯಲಿದ್ದು, ಈ ವೇಳೆ ಜನರನ್ನು ಮಾಹಿತಿ, ಶಿಕ್ಷಣ ಹಾಗೂ ಸಂವಹನ ನೀಡಿ ತ್ಯಾಜ್ಯ ಬಿಸಾಡುವವರ ಮೇಲೆ ನಿಗಾ ವಹಿಸಿ ಕ್ರಮ ಕೈಗೊಳ್ಳಬೇಕು” ಎಂದು ಅವರು ಸೂಚನೆ ನೀಡಿದರು.

WhatsApp Image 2025 05 13 at 5.15.44 PM

ಸಭೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಸಚಿನ್ ಮಾತನಾಡಿ, “ರಾಷ್ಟ್ರೀಯ ಹೆದ್ದಾರಿಗಳ ಕಸ ನಿರ್ವಹಣೆಗೆ ತೊಡಗುವ ಮೊದಲು ವಾಣಿಜ್ಯ ಮಳಿಗೆಗಳಲ್ಲಿ ಹಾಗೂ ಪ್ರತೀ ಮನೆಗಳಲ್ಲಿ ಕಸ ವಿಂಗಡಿಸಿ ಕೊಡುವಂತೆ ಕ್ರಮವಹಿಸಬೇಕಿದೆ. 100% ಮನೆಗಳಿಂದ ಸರಿಯಾದ ಕ್ರಮದಲ್ಲಿ ತ್ಯಾಜ್ಯ ಸಂಗ್ರಹ ಆದರೆ ಮಾತ್ರ ರಸ್ತೆ ಬದಿಗಳಲ್ಲಿ ಕಸ ಬೀಳುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದಾಗಿದೆ” ಎಂದರು.

ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಮಾತನಾಡಿ, “ರಸ್ತೆ ಬದಿಯಲ್ಲಿ ಕಸ ಬೀಳುವ ಪ್ರದೇಶವನ್ನು ಗುರುತಿಸಿ ಅದರ ಮೇಲೆ ನಿಗಾವಹಿಸಬೇಕಿದೆ. ಅವರ ಮೇಲೆ ಕ್ರಮ ಜರುಗಿಸಬೇಕು” ಎಂದರು.

ಇದನ್ನು ಓದಿದ್ದೀರಾ? ನಮಗೆ ಬೇಕಿರುವುದು ʼಕುರಿʼ ಅಲ್ಲ, ಕ್ರಿಮಿನಲ್‌ಗಳಿಗೆ ಸರಿಯಾದ ಶಿಕ್ಷೆ; ವಾಟ್ಸ್ಯಾಪ್‌ ಗ್ರೂಪಿನಲ್ಲಿ ಬ್ಯಾರಿಗಳ ಭಾರೀ ಚರ್ಚೆ

ಸಭೆಯಲ್ಲಿ ಕಳ್ಳಿಗೆ ಪಂಚಾಯತ್ ಅಧ್ಯಕ್ಷ ಪುರುಷೋತ್ತಮ, ಅಡ್ಯಾರ್ ಪಂಚಾಯತ್ ಅಧ್ಯಕ್ಷ ಅಬ್ದುಲ್ ಜಲೀಲ್, ತುಂಬೆ ಪಂಚಾಯತ್ ಉಪಾಧ್ಯಕ್ಷ ಗಣೇಶ್, ಹಸಿರು ದಳದ ನಾಗರಾಜ್ ಆರ್ ಅಂಚನ್, ಜಿಲ್ಲಾ ಸ್ವಚ್ಛ ಭಾರತ್ ಮಿಷನ್ (ಗ್ರಾ) ಸಮಾಲೋಚಕರು ಉಪಸ್ಥಿತರಿದ್ದರು.

ಕಸ ಬೀಳುವ ಪ್ರದೇಶ ಗುರುತಿಸಿ ಆ ಪ್ರದೇಶದಲ್ಲಿ ಬೆಳಗ್ಗೆ 5 ರಿಂದ 8 ಗಂಟೆಯವರಗೆ ಹಾಗೂ ಸಂಜೆ 6 ರಿಂದ 9 ಗಂಟೆಯವರೆಗೆ ಪರಿಸರ ಮತ್ತು ಸ್ವಚ್ಛತೆಯಲ್ಲಿ ಆಸಕ್ತಿ ಇರುವ 5 ಜನ ಸ್ವಯಂ ಸೇವಕರನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ. ಈ ವೇಳೆ ತ್ಯಾಜ್ಯ ಬಿಸಾಡುವರನ್ನು ಗುರುತಿಸಿ ಅವರಿಗೆ ಮನವರಿಕೆ ಮಾಡಲು ಉದ್ದೇಶಿಸಿದೆ. ಅಲ್ಲದೆ, ಸ್ವಚ್ಛತೆ ಜಾಗೃತಿ ಮೂಡಿಸುವ ಸಲುವಾಗಿ ವಾಹನದಲ್ಲಿ ಮೈಕ್ ಮೂಲಕ ವ್ಯಾಪಕ ಪ್ರಚಾರ, ತ್ಯಾಜ್ಯ ಬೀಳುವುದನ್ನು ತಡೆಹಿಡಿಯಲು ಗಸ್ತು ಪಡೆ ರಚಿಸಲು ದ.ಕ. ಜಿಲ್ಲಾ ಸ್ವಚ್ಛ ಭಾರತ್ ಮಿಷನ್ (ಗ್ರಾ) ಸಿದ್ಧತೆ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...