ಮಂಗಳೂರು | ಬೀಫ್ ಸಾಗಾಟ ಆರೋಪ: ತಂದೆ, ಮಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ; ಎಫ್‌ಐಆರ್

Date:

ದನದ‌ ಮಾಂಸ ಕೊಂಡು ಹೋಗುತ್ತಿದ್ದ ಆರೋಪದ ಮೇಲೆ ಅಪ್ರಾಪ್ತ ಮಗಳು ಹಾಗೂ ತಂದೆಗೆ ಸಂಘಪರಿವಾರದ ಕಾರ್ಯಕರ್ತರು ಗಂಭೀರ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠ ಸಮೀಪದ ನಾರ್ಲ ಪದವು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ ನಾರ್ಲಪದವು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬೀಫ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ 11 ವರ್ಷದ ಬಾಲಕಿಯೊಬ್ಬಳು ಗಾಯಗೊಂಡಿದ್ದಾಳೆ.

ಶನಿವಾರ ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಅಬ್ದುಲ್ ಸತ್ತಾರ್ ಮುಲ್ಲರಪಟ್ನ ಎಂಬುವವರು ತಮ್ಮ 11 ವರ್ಷದ ಮಗಳೊಂದಿಗೆ ಬೈಕ್‌ನಲ್ಲಿ ಸುಮಾರು 19 ಕೆಜಿ ದನದ ಮಾಂಸವನ್ನು ಸಾಗಿಸುತ್ತಿದ್ದರು. ಮಳಲಿ ನಾರ್ಲಪದವು ರಸ್ತೆಯಲ್ಲಿ ಹೋಗುತ್ತಿದ್ದಾಗ, ಟಾಟಾ ಸುಮೋ ವಾಹನದಲ್ಲಿ ಬಂದ ಎಡಪದವು ನಿವಾಸಿಗಳಾದ ಸುಮಿತ್ ಭಂಡಾರಿ (21) ಮತ್ತು ರಜತ್ ನಾಯ್ಕ್ (30) ಎಂಬುವವರು ಬೈಕನ್ನು ಅಡ್ಡಗಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದ್ದು, ಸೈಲೆನ್ಸರ್ ತಗುಲಿ ಬಾಲಕಿಯ ಕಾಲಿಗೆ ಸುಟ್ಟ ಗಾಯಗಳಾಗಿವೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸತ್ತಾರ್ ಅವರು ಬೈಕ್ ಬಿಟ್ಟು ಸ್ಥಳದಿಂದ ಓಡಿಹೋಗಿದ್ದಾರೆ. ತಕ್ಷಣ ಸ್ಥಳೀಯರು ಧಾವಿಸಿ ಗಾಯಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

magalu

ಘಟನೆಗೆ ಸಂಬಂಧಿಸಿದಂತೆ ಸುಮಿತ್ ಮತ್ತು ರಜತ್ ಅವರನ್ನು ಪೊಲೀಸರು ಠಾಣೆಗೆ ಕರೆಸಿ ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಇಬ್ಬರೂ ಗೊಂದಲಕಾರಿ ಹೇಳಿಕೆ ನೀಡಿದ್ದಾರೆ. ಮೆಡಿಕಲ್ ರೆಪ್ ಆಗಿರುವ ರಜತ್ ನಾಯ್ಕ್, ನಾವು ಮಹರ್ಷಿ ಕ್ಲಿನಿಕ್‌ಗೆ ಔಷಧಿ ನೀಡಲು ಹೋಗಿದ್ದೆವು ಎಂದು ತಿಳಿಸಿದ್ದಾನೆ. ಆದರೆ ಪೊಲೀಸರು ವೈದ್ಯರನ್ನು ಸಂಪರ್ಕಿಸಿದಾಗ ಅವರು ಯಾವುದೇ ಔಷಧಿ ವಿತರಣೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಳಿಕ ದೇವಸ್ಥಾನವೊಂದಕ್ಕೆ ಹೋಗಲು ದಾರಿ ಕೇಳುತ್ತಿದ್ದೆವು ಎಂದು ಹೇಳಿದರೂ, ಯಾವ ದೇವಸ್ಥಾನ ಎಂಬ ಪ್ರಶ್ನೆಗೆ ಆರೋಪಿಗಳು ಉತ್ತರಿಸಲು ತಡಬಡಾಯಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. “ನಮ್ಮನ್ನು ಅಡ್ಡಗಟ್ಟಿದವರು ತಂದೆಯ ಮೇಲೆ ಕೈಯಿಂದ ಹಲ್ಲೆ ನಡೆಸಿದ್ದಾರೆ” ಎಂದು ಬಾಲಕಿ ಪೊಲೀಸರ ವಿಚಾರಣೆಯ ವೇಳೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮೆಕ್ಕಾ | ಕಾಬಾದ ಮಸೀದಿಯಲ್ಲಿ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ: ಜೀವದ ಹಂಗು ತೊರೆದು ರಕ್ಷಿಸಿದ ಭದ್ರತಾ ಸಿಬ್ಬಂದಿ

ಹಲ್ಲೆ ಮತ್ತು ದಾರಿ ತಡೆದ ಆರೋಪದ ಮೇಲೆ ಸುಮಿತ್ ಮತ್ತು ರಜತ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬಿಲ್ ಇಲ್ಲದೆ ಬೀಫ್ ಸಾಗಿಸುತ್ತಿದ್ದ ಆರೋಪದ ಮೇಲೆ ಅಬ್ದುಲ್ ಸತ್ತಾರ್ ವಿರುದ್ಧವೂ ಪೊಲೀಸರು ಸುವೊ ಮೋಟೋ ಪ್ರಕರಣ ದಾಖಲಿಸಿಕೊಂಡಿದ್ದು, ಬಜಪೆ ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...