ಮಂಗಳೂರು | BSWT ವರ್ಷದ ವ್ಯಕ್ತಿ-25 ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಆಯ್ಕೆ

Date:

ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (BSWT) ಇದರ 2025ನೇ ಸಾಲಿನ BSWT ವರ್ಷದ ವ್ಯಕ್ತಿ ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಅವರನ್ನು ಆಯ್ಕೆ ಮಾಡಲಾಗಿದೆ.

ನಿಸ್ವಾರ್ಥ ಸಮಾಜ ಸೇವಕರಾದ ದಿನೇಶ್ ಪೈಯವರು ಸರಕಾರದ ಸಹಾಯಧನ ಮತ್ತು ದಾನಿಗಳ ನೆರವಿನಿಂದ ಗ್ರಾಮಾಂತರ ಪ್ರದೇಶದಲ್ಲಿ ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ಬಡವರಿಗೆ ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ.18 ವರ್ಷಗಳಿಂದ ಸುಮಾರು 700 ಕ್ಕೂ ಹೆಚ್ಚು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸುತ್ತಿದ್ದಾರೆ. ಕಡುಬಡವರಿಗೆ, ವಿಶಿಷ್ಟ ಚೇತನರಿಗೆ, ವೃದ್ಧರಿಗೆ ಸಹಾಯ ಮಾಡುವುದು ಅಪಘಾತಗೊಂಡ ಬಡ / ನಿರುದ್ಯೋಗಿಗಳಿಗೆ 15 ದಿನಗಳವರೆಗೆ ಆಹಾರ ಸಾಮಗ್ರಿಗಳನ್ನು ವಿತರಿಸುತ್ತಾರೆ ಮತ್ತು ಬೇಸಿಗೆಯ ಸಮಯದಲ್ಲಿ ನೀರಿನ ಸೌಲಭ್ಯವನ್ನು ಒದಗಿಸುವ ಕಾರ್ಯವನ್ನು ಮಾಡಿದ್ದಾರೆ. ಕೊರೋನಾ ಸಂದರ್ಭ ಅರ್ಹ ಕುಟುಂಬಗಳಿಗೆ ದಾನಿಗಳಿಂದ ಹಣ ಸಂಗ್ರಹಿಸಿ ಆಹಾರ ಕಿಟ್ ವಿತರಿಸಿದ್ದಾರೆ. ತನ್ನ ವ್ಯಾಪ್ತಿಯಲ್ಲಿ ಈವರೆಗೆ 400 ಕ್ಕೂ ಅಧಿಕ ಅರ್ಹರಿಗೆ BPL Card ವಿತರಿಸುವ ಕೆಲಸ ಮಾಡಿದ್ದಾರೆ.

2008 ರಲ್ಲಿ ಆರಂಭವಾದ ಇವರ ಸಮಾಜ ಸೇವೆಯಲ್ಲಿ ಮುಖ್ಯವಾಗಿ ಪ್ರತಿ ದಿನ ಬೆಳಿಗ್ಗೆ 10 ರಿಂದ 1 ರವರೆಗೆ ಮೂರು ತಾಸು ನಗರಸಭೆಯಲ್ಲಿ ಲಭ್ಯರಿರುತ್ತಾರೆ. ಅಲ್ಲಿಗೆ ಬರುವ ಎಲ್ಲರಿಗೂ ತನ್ನಿಂದಾಗುವ ಸೇವೆಯನ್ನು ಉಚಿತವಾಗಿ ನೀಡುತ್ತಾರೆ. 75 ವರ್ಷ ವಯಸ್ಸಿನ ಇವರು ಪ್ರತಿದಿನ ಪ್ರತಿ ಮನೆಗೆ ಭೇಟಿ ನೀಡಿ ಅವರ ಸಮಸ್ಯೆಗನ್ನು ಆಲಿಸಿ ಪರಿಹಾರ ಸೂಚಿಸುತ್ತಾರೆ.
ಊರಿನ ಅರ್ಹರಿಗೆ ಸರ್ಕಾರದ ಸೌಲಭ್ಯವನ್ನು ತಲುಪಿಸುವ ಪ್ರಯತ್ನ ಮಾಡುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲೆಮರೆಯ ಕಾಯಿಯಂತೆ ಇಷ್ಟು ವರ್ಷಗಳ ಕಾಲ ಇವರು ಮಾಡಿದ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ 2025 ನೇ ಸಾಲಿನ “BSWT ವರ್ಷದ ವ್ಯಕ್ತಿ”ಯಾಗಿ ಆಯ್ಕೆ ಮಾಡಿದೆ. ಈ ಪ್ರಶಸ್ತಿಯೂ 25 ಸಾವಿರ ರೂ ನಗದು ಮತ್ತು ಸನ್ಮಾನ ಪತ್ರ, ಫಲಕ, ಫಲ ಹಾಗೂ ಉಡುಗೊರೆಯನ್ನು ಒಳಗೊಂಡಿರುತ್ತದೆ. ದಿನಾಂಕ 24 ಜನವರಿ 2026 ರಂದು ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜು ಹಂಪನಕಟ್ಟೆ ಇಲ್ಲಿನ ರವೀಂದ್ರ ಕಲಾ ಭವನದಲ್ಲಿ 200 ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಹಾಗೂ BSWT ದಶಮಾನೋತ್ಸವದ ‌ಸಮಾರೋಪ ಸಮಾರಂಭದ ಶುಭ ಸಂದರ್ಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕಾರ್ಯದರ್ಶಿ ಆಕಿಫ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...