ಮಂಗಳೂರು | ಕಟ್ಟಡ ನಿರ್ಮಾಣಕ್ಕೆ ಪೂರಕವಾಗಿ ಕರಾವಳಿ ಮರಳು ನೀತಿ ಜಾರಿಗೆ ಬರಲಿ: ವಸಂತ ಆಚಾರಿ

Date:

ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಕಳೆದ ಒಂದು ತಿಂಗಳಿಂದ ಕೆಂಪು ಕಲ್ಲು ಮತ್ತು ಮರಳು ಪೂರೈಕೆಯಾಗದೆ ನಿರ್ಮಾಣ ವಲಯ ಸ್ಥಬ್ಧವಾಗಿದೆ. ಕಾರ್ಮಿಕರು ಕೆಲಸವಿಲ್ಲದೆ ಜೀವನ ನಿರ್ವಹಿಸಲಾಗದೆ ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.

ಇಂದು ಉಳ್ಳಾಲ ತಾಲೂಕಿನ ದೇರಳಕಟ್ಟ ಸಮೀಪದಿಂದ ನೂರಾರು ಕಾರ್ಮಿಕರು, ಜಿಲ್ಲಾಡಳಿತದ ಈ ದಿಡೀರ್ ಕ್ರಮವನ್ನ ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು. ಬಳಿಕ ನಾಟೆಕಲ್ ನಲ್ಲಿರುವ ತಾಲೂಕು ಕಚೇರಿ ಎದುರು ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್‌ನ ಜಿಲ್ಲಾಧ್ಯಕ್ಷರಾದ ವಸಂತ ಆಚಾರಿ, ಕಳೆದ ಒಂದು ತಿಂಗಳಿಂದ ಮರಳು ಮತ್ತು ಕೆಂಪು ಕಲ್ಲು ನಿಷೇಧದಿಂದ ಜಿಲ್ಲೆಯ ಯಾವುದೇ ನಿರ್ಮಾಣ ಯೋಜನೆಗಳು ನಡೆಯದೆ ಅಭಿವೃದ್ಧಿಯಲ್ಲಿ ಕುಂಠಿತವಾಗಿದೆ. ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಇಂತಹ ಅಕ್ರಮ ಮರಳುಗಾರಿಕೆಗೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಆರಂಭ ದೊರೆಯಿತು. ಅಕ್ರಮ ದಂಧೆಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸಿಗರ ಸಮಾನ ಪಾಲು ಇದೆ. ಜಿಲ್ಲೆಯಲ್ಲಿ ಕೆಂಪುಕಲ್ಲು ಮತ್ತು ಮರಳು ಅಭಾವದ ಈ ಪರಿಸ್ಥಿತಿಗೆ ಇಲ್ಲಿನ ಬಿಜೆಪಿಯ ಸಂಸದರು ಮತ್ತು ಶಾಸಕರು ನೇರ ಹೊಣೆಯಾಗಿದ್ದಾರೆ. ಕಳೆದ ಹಲವು ಮೂರು ದಶಕಗಳಿಂದ ಜಿಲ್ಲೆಯಿಂದ ಗೆದ್ದು ಹೋದಂತಹ ಸಂಸದರು ಎಂಎಲ್ಎಗಳು ಇದರ ಬಗ್ಗೆ ಇಷ್ಟರವರೆಗೆ ಚಕಾರವೆತ್ತುತ್ತಿಲ್ಲ. ಆದ್ದರಿಂದ ಅವರಿಗೆ ಇದನ್ನು ಪ್ರತಿಭಟಿಸುವ ಯಾವುದೇ ನೈತಿಕತೆ ಇಲ್ಲ ಎಂದರು. ಇಂತಹ ಬೆಳವಣಿಗೆಗಳಿಂದ ಜಿಲ್ಲೆಯ ಲಕ್ಷಕ್ಕೂ ಮಿಕ್ಕಿದ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ. ಅಂತಹ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ರೂಪಾಯಿ 10,000 ಪರಿಹಾರ ಧನ ನೀಡಬೇಕೆಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾರ್ ಮಾತನಾಡಿ, ಜಿಲ್ಲೆಯಲ್ಲಿ ಅವ್ಯಾವತವಾಗಿ ಅಡೆತಡೆ ಇಲ್ಲದೆ ನಡೆಯುತ್ತಿದ್ದ ಅಕ್ರಮ ದಂಧೆಗಳಿಗೆ ಈಗ ಅಧಿಕಾರ ವಹಿಸಿಕೊಂಡಿರುವ ದಕ್ಷ ಮತ್ತು ನಿಷ್ಠಾವಂತ ಪೊಲೀಸ್ ಅಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಿರುವ ಕಾರಣ ಮರಳು ಮತ್ತು ಕೆಂಪು ಕಲ್ಲು ಅಭಾವ ಉಂಟಾಗಿದೆ. ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯೂ ಅಕ್ರಮವಾಗಿ ಅನೇಕ ವರ್ಷಗಳಿಂದ ನಡೆಯುತ್ತಲೇ ಇದೆ. ಇದೊಂದು ಪ್ರಬಲ ಮಾಫಿಯವಾಗಿದೆ . ಇದರ ನಿಯಂತ್ರಣ ಅಗತ್ಯವಾಗಿ ಆಗಬೇಕಿದೆ. ಆದರೆ ಇಂತಹ ದಿಡೀರ್ ಕ್ರಮಗಳನ್ನು ಕೈಗೊಳ್ಳುವಾಗ ದೂರ ದೃಷ್ಟಿಯ ಯೋಜನೆಯನ್ನು ಹಮ್ಮಿಕೊಂಡಿದ್ದರೆ ಒಳ್ಳೆಯದು. ಕೆಂಪು ಕಲ್ಲು ಮತ್ತು ಮರಳು ಕಾಲ ಸಂತೆಯಲ್ಲಿ ದುಬಾರಿ ಬೆಲೆಗಳಿಗೆ ಬಿಕರಿಯಾಗುತ್ತಿವೆ. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡು ಕಾಮಗಾರಿಗಳು ಸರಾಗವಾಗಿ ನಡೆಯುವಂತೆ ಕಾರ್ಮಿಕರ ಉದ್ಯೋಗ ನಷ್ಟವಾಗದಂತೆ ಸರಳವಾಗಿ ಕಚ್ಚಾ ವಸ್ತುಗಳು ಪೂರೈಕೆ ಮಾಡಲು ಸಾಧ್ಯವಾಗಬೇಕು ಎಂದರು.

ಸಿಡಬ್ಲ್ಯೂಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ಇಲ್ಲಿನ ಅಕ್ರಮ ದಂದೆಗಳ ವಿರುದ್ಧ ಹೋರಾಟ ನಡೆಸಿ ಮನವಿಗಳನ್ನು ಅರ್ಪಿಸುತ್ತಾ ಬಂದರು ಈ ಮೊದಲಿನ ಕಮಿಷನರ್ ಅನುಪಮ ಅಗರ್ವಾಲ್ ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಎಲ್ಲಾ ರೀತಿಯ ಅಕ್ರಮಗಳನ್ನು ಬೆಳೆಸಲು ಪ್ರತ್ಯಕ್ಷವಾಗಿ ದಂಧೆ ಕೋರರ ಬೆನ್ನಿಗೆ ನಿಂತರು. ಗಣಿ ಇಲಾಖೆಯು ಭ್ರಷ್ಟಾಚಾರದ ಕೂಪವಾಗಿದೆ. ಆದ್ದರಿಂದ ಇಂತಹ ಅಧಿಕಾರಿಗಳ ವಿರುದ್ಧ ಕಠಿಣವಾದ ಕ್ರಮಗಳನ್ನು ಜರುಗಿಸಿದರೆ ಮಾತ್ರ ಅಕ್ರಮಗಳಿಗೆ ಕಡಿವಾಣ ಹಾಕಬಹುದು. ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳದ ಹೊರತು ಏಕಾಏಕಿಯಾಗಿ ಮರಳು ಮತ್ತು ಕೆಂಪು ಕಲ್ಲು ತೆಗೆಯುವುದನ್ನು ನಿಷೇಧಿಸುವುದು ಸರಿಯಾದ ಕ್ರಮ ಅಲ್ಲ. ಆದ್ದರಿಂದ ಜಿಲ್ಲಾಡಳಿತ ಈ ಕೂಡಲೇ ಮಧ್ಯ ಪ್ರವೇಶಿಸಿ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಮರಳು ಮತ್ತು ಕಲ್ಲು ಪೂರೈಕೆ ಆಗುವಂತೆ ಅಗತ್ಯ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಸಿದ್ದರಾಮಯ್ಯನವರೇ, ಸಾಮಾಜಿಕ ನ್ಯಾಯ ನಿಮ್ಮ ನುಡಿಯಲ್ಲಿದೆ, ಅದು ನಡೆಯಲ್ಲೂ ಇರಲಿ- ಪ್ರಕಾಶ್‌ ರಾಜ್‌

ಸಭೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಸುಕುಮಾರ್ ತೊಕ್ಕೊಟ್ಟು ಕಟ್ಟಡ ಕಾರ್ಮಿಕರ ಸಂಘಟನೆಯ ಉಳ್ಳಾಲ ತಾಲೂಕು ಅಧ್ಯಕ್ಷರಾದ ಜನಾರ್ಧನ ಕುತ್ತಾರು ಮಾತನಾಡಿದರು. ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಕೃಷ್ಣಪ್ಪ ಸಾಲಿಯಾನ್ , ಶೇಕರ್ ಕುಂದರ್, ತಾಲೂಕು ಕಾರ್ಯದರ್ಶಿ ರಿಜ್ವಾನ್ ಹರೇಕಳ, ಇದ್ದರು.

ಸಭೆ ನೇತೃತ್ವವನ್ನು ಇಬ್ರಾಹಿಂ ಮದಕ, ಜಯಂತ ನಾಯಕ್, ನವೀನ್ ಗಿರಿಯ ಮೂಲೆ, ಪೆನ್ಸನ್ ದಾರರ ಅಧ್ಯಕ್ಷರಾದ ಸುಧಾಕರ್ ಆಳ್ವಾ. ಮುಂತಾದವರು ವಹಿಸಿದ್ದರು. ರೋಹಿದಾಸ್ ಭಟ್ನಗರ ಸ್ವಾಗತಿಸಿ, ನಿರೂಪಿಸಿದರು , ರಾಮಚಂದ್ರ ಪಜೀರ್ ವಂದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...