ಮಂಗಳೂರು | ದ.ಕ. ಜಿಲ್ಲೆಯ ಜನರ ಮೇಲೆ ಇಂದಿರಾ ಗಾಂಧಿಯ ಋಣಯಿದೆ: ರಮಾನಾಥ ರೈ

Date:

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿ ಹೆಸರಿನಲ್ಲಿ ಬಿಜೆಪಿ ನಾಯಕರು ಕರಾಳ ದಿನ ಆಚರಿಸುವ ಮೂಲಕ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಬಿಜೆಪಿಯ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ದ.ಕ. ಜಿಲ್ಲೆಯ ಜನರ ಮೇಲೆ ಇಂದಿರಾ ಗಾಂಧಿಯ ಋಣವಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ತುರ್ತು ಪರಿಸ್ಥಿತಿಯಿಂದ ವಿಪಕ್ಷದವರಿಗೆ ತೊಂದರೆ ಆಗಿರಬಹುದು. ಆದರೆ ದುರ್ಬಲ ವರ್ಗದವರಿಗೆ ಯಾರಿಗೂ ಯಾವತ್ತಿಗೂ ಯಾವ ತೊಂದರೆ ಆಗಿಲ್ಲ. ಜೀತ ಪದ್ಧತಿ, ಋಣಭಾರ ಮುಕ್ತಿ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳ ಫಲಾನುಭವಿಗಳು ದ.ಕ. ಜಿಲ್ಲೆಯವರು ಎಂಬುದು ವಾಸ್ತವ” ಎಂದರು.

“ಇಂದಿರಾ ಗಾಂಧಿಯವರ ಭೂ ಮಸೂದೆ ಕಾನೂನು ದ.ಕ. ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವಾಗಿದೆ. ಬ್ಯಾಂಕ್‌ಗಳ ರಾಷ್ಟ್ರೀಕರಣದಿಂದಲೂ ಲಾಭವಾಗಿದೆ. ಇಂದಿರಾ ಗಾಂಧಿ ಕಾಲದಲ್ಲಿ ಜಿಲ್ಲೆಯ ಜನರಿಗೆ 20 ಅಂಶಗಳ ಕಾರ್ಯಕ್ರಮ, ನಿವೇಶನ, ದಖಾಸ್ತು ಭೂಮಿ ಹೀಗೆ ಹಲವು ಕಾರ್ಯಕ್ರಮ ಬಡವರ ಸಬಲೀಕರಣಕ್ಕೆ ಸಹಾಯವಾಗಿದೆ ಎಂಬುದು ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುವವರಿಗೆ ನೆನಪಿಸಬೇಕಾಗಿದೆ. ತುರ್ತು ಪರಿಸ್ಥಿತಿಯ ಬಳಿಕವೂ ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಭಾರೀ ಮತಗಳಿಂದ ಜಯಗಳಿಸಿದೆ. ಇದು ಇಂದಿರಾ ಗಾಂಧಿಯವರು ಮಾಡಿದ ಜನಪರ ಕಾರ್ಯಗಳನ್ನು ಜಿಲ್ಲೆಯ ಜನತೆ ಒಪ್ಪಿಕೊಂಡಿದ್ದಾರೆ ಎಂದು ಸಾಬೀತು ಮಾಡುತ್ತದೆ. ಇಂದಿರಾ ಗಾಂಧಿರವರು ದೇಶದ ಸಮಗ್ರತೆಗಾಗಿ ಪ್ರಾಣ ಕೊಟ್ಟ ಮಹಾನ್‌ ವ್ಯಕ್ತಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಒಬ್ಬ ಕಾರ್ಯಕರ್ತನಾಗಿ ಇಂದಿರಾ ಗಾಂಧಿಯವರ ಪ್ರಗತಿಪರ ಕಾರ್ಯಕ್ರಮಗಳನ್ನು ನೆನಪಿಸಿಕೊಳ್ಳುವುದು ನನ್ನ ಜವಾಬ್ದಾರಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಕ್ಷಣಿಕ ಸುಖಕ್ಕೆ ಜೀವನ ಹಾಳು ಮಾಡಿಕೊಳ್ಳಬೇಡಿ: ಡಿಸಿ ದರ್ಶನ್

“ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುಜರಾತ್ ನರಮೇಧ, ಗೋಧ್ರಾ ಹತ್ಯಾಕಾಂಡ, ಭೀಮಾ ಕೊರೆಗಾಂವ್ ಪ್ರಕರಣ, ಈ.ಡಿ.ಯನ್ನು ಬಳಸಿಕೊಂಡು ವಿಪಕ್ಷ ನಾಯಕರನ್ನು ಜೈಲಿಗೆ ಹಾಕುವುದು, ಪತ್ರಕರ್ತರ ಮೇಲಿನ ದಬ್ಬಾಳಿಕೆ ಮಾಡಿರುವ ಬಿಜೆಪಿ ನಾಯಕರಿಗೆ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ” ಎಂದು ತಿರುಗೇಟು ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಶಶಿಧರ ಹೆಗ್ಡೆ, ನವೀನ್‌ ಡಿಸೋಜ, ಅಪ್ಪಿಲತಾ, ಪೃಥ್ವಿರಾಜ್, ಅಶೋಕ್ ಡಿ.ಕೆ., ಅಬ್ಬಾಸ್ ಅಲಿ, ಜಯಶೀಲ ಅಡ್ಯಂತಾಯ, ಜೆ. ಸಲೀಂ, ಇಬ್ರಾಹೀಂ ನವಾಝ್, ಸುಹಾನ್ ಆಳ್ವ ದಿನೇಶ್ಯುಮಾ‌ರ್, ನಿತ್ಯಾನಂದ ಶೆಟ್ಟಿ, ಶಬೀರ್, ಸುನೀಲ್ ಬಜಿಲಕೇರಿ, ಪ್ರಕಾಶ್ ಸಾಲ್ಯಾನ್ ಸೇರಿದಂತೆ ಮತ್ತಿತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...