ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

Date:

ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ ವಿಡಿಯೋ ಮಾಡಿದ್ದಲ್ಲದೇ, ಸೋಷಿಯಲ್ ಮೀಡಿಯಾಗಳಲ್ಲಿ ತೇಜೋವಧೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಸಮೀಪದ ಕೊಂಡೆಮೂಲ ಎಂಬಲ್ಲಿ ನಡೆದಿದೆ.

ಘಟನೆ ನಿನ್ನೆ (ಆ.21)ರಂದು ನಡೆದಿದ್ದು, ಗೋಣಿಚೀಲ ನೀಡದಂತೆ ಸರ್ಕಾರದಿಂದ ಅಧಿಕೃತ ನಿಯಮವಿದ್ದರೂ ಕೂಡ, ಗ್ರಾಹಕ ಗೋಣಿಚೀಲ ನೀಡುವಂತೆ ಒತ್ತಾಯಿಸಿದ್ದಾನೆ. ಗೋಣಿಚೀಲ ನೀಡದ ಹಿನ್ನೆಲೆಯಲ್ಲಿ ಅಂಗಡಿಯವರ ವಿಡಿಯೋ ಮಾಡಿದ್ದು, ಅದನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಾಕುವ ಮೂಲಕ ತೇಜೋವಧೆಗೆ ಯತ್ನಿಸಿದ್ದಾನೆ.

ಕಟೀಲು ಸಮೀಪದ ಕೊಂಡೆಮೂಲ ಎಂಬಲ್ಲಿ ನ್ಯಾಯಬೆಲೆ ಅಂಗಡಿ ನಡೆಸುತ್ತಿರುವ ಮಂಜುನಾಥ ನಾಯಕ್ ಎಂಬುವವರ ಅಂಗಡಿಗೆ ಬಂದಿದ್ದ ಗ್ರಾಹಕ ಸತೀಶ್ ಎಂಬಾತ, “ನನ್ನ ಕುಟುಂಬದ ರೇಷನ್‌ ಕಾರ್ಡ್‌ಗೆ 100 ಕೆ ಜಿ ಅಕ್ಕಿ ಇದೆ. ಹಾಗಾಗಿ, ನನಗೆ ಗೋಣಿಚೀಲ ಕೊಡಿ” ಎಂದು ಪಟ್ಟು ಹಿಡಿದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 2 6
ಗೋಣಿ ಚೀಲ ನೀಡುವಂತೆ ಜಗಳ ಮಾಡಿದ್ದ ಗ್ರಾಹಕ ಸತೀಶ್. ಈತನ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ದೀಪಾ ನಾಯಕ್ ದೂರು ನೀಡಿದ್ದಾರೆ.

ಈ ವೇಳೆ ಅಂಗಡಿಯಲ್ಲಿದ್ದ ಮಂಜುನಾಥ ನಾಯಕ್ ಅವರ ಸೊಸೆ ದೀಪಾ ನಾಯಕ್ ಅವರು, “ಗೋಣಿ ಚೀಲ ಗ್ರಾಹಕರಿಗೆ ನೀಡುವ ನಿಯಮವಿಲ್ಲ. ಅದು ಸರ್ಕಾರದಿಂದ ಬರುವುದಾದರೂ ನ್ಯಾಯಬೆಲೆ ಅಂಗಡಿಯವರಿಗೆ ಸೇರಿದ್ದು. ಈ ಬಗ್ಗೆ ಸರ್ಕಾರದ ಆಹಾರ ಇಲಾಖೆಯಿಂದಲೇ ಸ್ಪಷ್ಟವಾದ ನಿಯಮವಿದೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ದೀಪಾ ನಾಯಕ್ ಅವರು ಮತ್ತಷ್ಟು ಸ್ಪಷ್ಟೀಕರಣ ನೀಡಿದರೂ ಮೆತ್ತಗಾಗದ ಗ್ರಾಹಕ ಸತೀಶ್, ತನ್ನ ಬಳಿಯಲ್ಲಿದ್ದ ಮೊಬೈಲ್ ತೆಗೆದು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಅಲ್ಲದೇ, “ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಾಕುತ್ತೇನೆ. ಸಂಬಂಧಪಟ್ಟ ಅಧಿಕಾರಿಗಳು ಬಂದು ಕ್ರಮ ಕೈಗೊಳ್ಳಬೇಕು” ಎಂದು ತುಳು ಭಾಷೆಯಲ್ಲಿ ಹೇಳಿದ್ದಾನೆ.

ಈ ಎಲ್ಲ ಬೆಳವಣಿಗೆಯ ವೇಳೆ ಗ್ರಾಹಕನಾಗಿ ಬಂದಿದ್ದ ಸತೀಶ್ ಅವರ ತಾಯಿ ಕೂಡ ಅಂಗಡಿಯಲ್ಲಿದ್ದು, ಮಗ ವಿಡಿಯೋ ಮಾಡದಂತೆ ಅವರೂ ಕೂಡ ತಡೆದಿದ್ದಾರೆ. ಅಲ್ಲದೇ, ತಾವು ಮನೆಯಿಂದ ತಂದಿದ್ದ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ಅಕ್ಕಿ ತುಂಬಿಸಲು ಒಪ್ಪಿಕೊಂಡರೂ, ಅದನ್ನು ಮಗ ವಿಜಯ್ ತಡೆದಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಗ್ರಾಹಕ ಸತೀಶ್ ರಂಪಾಟ ಮಾಡಿದ್ದರಿಂದ ತಮ್ಮ ‘ಸೇಫ್ಟಿ’ಗಾಗಿ ಮಂಜುನಾಥ ನಾಯಕ್ ಅವರ ಸೊಸೆ ದೀಪಾ ನಾಯಕ್ ಅವರು ಕೂಡ ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಗ್ರಾಹಕನ ನಡವಳಿಕೆ ಕೂಡ ಸೆರೆಯಾಗಿದೆ.

https://twitter.com/eedinanews/status/1958904458189963691

ಈ ಘಟನೆಯ ಬಗ್ಗೆ ಈದಿನ ಡಾಟ್‌ ಕಾಮ್ ಜೊತೆಗೆ ಮಾತನಾಡಿರುವ ದೀಪಾ ನಾಯಕ್, “ಕೆಲವರಿಗೆ ಸರ್ಕಾರದ ನಿಯಮಗಳೇ ಗೊತ್ತಿಲ್ಲ. ಅಂಗಡಿ ನಡೆಸುವವರೇ ಗೋಣಿ ಚೀಲವನ್ನು ಇಟ್ಟುಕೊಳ್ಳಬಹುದು ಎಂಬ ಸ್ಪಷ್ಟವಾದ ನಿಯಮವೇ ಇದೆ. ಏನೂ ಮಾಹಿತಿ ಇಲ್ಲದವರು ಗೋಣಿಚೀಲ ನೀಡುವಂತೆ ಹೀಗೇ ಕಿರುಕುಳ ನೀಡುತ್ತಲೇ ಇದ್ದಾರೆ. ಎಷ್ಟೇ ಸಮಜಾಯಿಷಿ ನೀಡಿದರೂ ಒಪ್ಪುವುದಕ್ಕೆ ಅವರು ತಯಾರಿಲ್ಲ. ನಿನ್ನೆ ಅಂಗಡಿಗೆ ಬಂದು ನಮ್ಮನ್ನು ಬೆದರಿಸಿದ್ದಲ್ಲದೇ, ವಿಡಿಯೋ ಚಿತ್ರೀಕರಿಸಿಕೊಂಡು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಮಾಡಿದ್ದಾನೆ. ಹೀಗಾಗಿ, ನಾವು ಬಜಪೆ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ದೂರು ನೀಡಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

“ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ವೈರಲ್ ಆದ ಬಳಿಕ ಆಹಾರ ಇಲಾಖೆಯ ಅಧಿಕಾರಿಗಳು ನಮ್ಮ ಅಂಗಡಿಗೆ ಬಂದು ಪರಿಶೀಲನೆ ನಡೆಸಿ, ಧೈರ್ಯ ತುಂಬಿದ್ದಾರೆ. ವಿಡಿಯೋ ಮಾಡಿ, ತೇಜೋವಧೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದೇನೆ. ಅಂಗಡಿಯಲ್ಲಿ ಮಹಿಳೆಯರು ಇರುವಾಗ ದಬ್ಬಾಳಿಕೆ ಮಾಡಿ ಪ್ರತಿ ತಿಂಗಳು ಬಂದು ಗೋಣಿ ವಿಷಯದಲ್ಲಿ ಜಗಳ ಮಾಡುತ್ತಾನೆ.. ಈ ವಿಷಯದ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೂ ತಿಳಿಸಲಾಗಿದೆ. ಆತನ ಕುಟುಂಬದಲ್ಲಿರುವವರು ಸ್ವಂತ ಕಾರು ಹೊಂದಿರುವುದಾಗಿ ಮಾಹಿತಿ ಇದೆ. ಹಾಗಾಗಿ, ಬಿಪಿಎಲ್ ರೇಷನ್‌ ಕಾರ್ಡ್‌ಗೆ ಅರ್ಹತೆ ಇರುವನೋ ಇಲ್ಲವೇ ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳೂ ತಿಳಿಸಿದ್ದಾರೆ. ಈ ಹಿಂದೆಯೂ ಎರಡು ಮೂರಿ ಬಾರಿ ಬಂದು ಜಗಳ ಮಾಡಿದ್ದಾನೆ. ಹೀಗಾಗಿ, ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇವೆ” ಎಂದು ದೀಪಾ ನಾಯಕ್ ಈದಿನ ಡಾಟ್‌ ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಸದ್ಯ ಈ ಬಗ್ಗೆ ಗ್ರಾಹಕನ ವಿರುದ್ಧ ದೂರು ದಾಖಲಿಸಿಕೊಂಡಿರುವ ಬಜಪೆ ಠಾಣಾ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸರ್ಕಾರದ ನಿಯಮ ಏನು?

ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಉಪ ಕಾರ್ಯದರ್ಶಿಯವರು ದಿನಾಂಕ 13/04/2016 ರಂದು ಕರ್ನಾಟಕ ರಾಜ್ಯಪಾಲರ ಅದೇಶಾನುಸಾರ ನೀಡಿದ ಸರ್ಕಾರದ ಆದೇಶ ಸಂಖ್ಯೆಯಲ್ಲಿ

ಆನಾಸ 13 ಡಿಆರ್‌ 2016ರ ಪ್ರಕಾರ ನ್ಯಾಯ ಬೆಲೆ ಅಂಗಡಿ ಮಾಲೀಕರುಗಳಿಗೆ ನೀಡಲಾಗುತ್ತಿರುವ ಲಾಭಾಂಶಕ್ಕೆ ಸಂಬಂಧಿಸಿದಂತೆ, ನಗದು ಹಾಗೂ ವಸ್ತು ರೂಪದಲ್ಲಿ ಲಾಭಾಂಶದ ಪ್ರಸ್ತಾವನೆ ನೀಡಲಾಗಿದೆ. ಅಲ್ಲದೆ ಈ ಬಗ್ಗೆ ವಿವರವಾಗಿ ನ್ಯಾಯ ಬೆಲೆ ಅಂಗಡಿದಾರರಿಗೆ ಪ್ರತಿ ಕ್ವಿಂಟಾಲ್ ಗೆ ಲಾಭಾಂಶವನ್ನು ರೂ. 56/ಎಂದು ನಿಗದಿಪಡಿಸಿದ್ದು, ಈ ಪೈಕಿ ರೂ. 36 ನಗದು ರೂಪದಲ್ಲಿ ಹಾಗೂ ರೂ. 20 ಪ್ರತಿ ಕ್ವಿಂಟಾಲ್ ನ ಎರಡು ಗೋಣಿ ಚೀಲಗಳ ರೂಪದಲ್ಲಿ ಸೂಚಿಸಲಾಗಿದೆ. ಈ ಆದೇಶವು 06/11/2013ರಿಂದ ಜಾರಿಗೆ ಬಂದಿದೆ.

WhatsApp Image 2025 08 22 at 7.56.41 PM

“ಸರ್ಕಾರದ ಹಾಗೂ ಆಹಾರ ಇಲಾಖೆಯ ನಿಯಮಗಳ ಬಗ್ಗೆ ತಿಳುವಳಿಕೆ ಇಲ್ಲದ ಗ್ರಾಹಕರು ನ್ಯಾಯ ಬೆಲೆ ಅಂಗಡಿದಾರರ ಮೇಲೆ ವೃಥಾ ಆರೋಪ ಮಾಡಿ ಬೆದರಿಸುವುದು ಅಕ್ರಮವಾಗಿದೆ. ಸದ್ರಿ ಗ್ರಾಹಕರು ಈ ಕೂಡಲೇ ಅಂಗಡಿದಾರರ ಕ್ಷಮೆ ಯಾಚಿಸಬೇಕು. ಇಲ್ಲದಿದ್ದಲ್ಲಿ ಸೂಕ್ತ ಕಾನೂನು ಕ್ರಮ ಎದುರಿಸಬೇಕು. ಕಾನೂನು ಕ್ರಮ ಕೈಗೊಳ್ಳುವ ವಿಚಾರ ನ್ಯಾಯಬೆಲೆ ಅಂಗಡಿದಾರರಿಗೆ ಬಿಟ್ಟಿದ್ದು. ಗ್ರಾಹಕರು ಸರ್ಕಾರದ ನಿಯಮಗಳ ಬಗ್ಗೆ ಮಾಹಿತಿ ಇಲ್ಲದೇ ಇದ್ದಾಗ ಸಂಬಂಧಪಟ್ಟವರಿಂದ ಮೊದಲು ಪಡೆದುಕೊಳ್ಳಬೇಕು. ಅದು ಬಿಟ್ಟು ಸೋಷಿಯಲ್ ಮೀಡಿಯಾ ಇದೆ ಎಂದ ಮಾತ್ರಕ್ಕೆ ವಿಡಿಯೋ ಮಾಡಿ ಹರಿಯಬಿಡುವುದು ಸರಿಯಲ್ಲ” ಎಂದು ಹೆಸರು ಹೇಳಲಿಚ್ಛಿಸದ ದಕ್ಷಿಣ ಕನ್ನಡ ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಯೋರ್ವರು ಈದಿನ ಡಾಟ್‌ ಕಾಮ್‌ಗೆ ಮಾಹಿತಿ ನೀಡಿದ್ದಾರೆ.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...