ಮಂಗಳೂರು | ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಆರ್ಥಿಕ ಶಕ್ತಿ ದೊರಕಿದೆ: ಹೆಚ್ ಎಂ ರೇವಣ್ಣ

Date:

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಗಳ ಸದುಪಯೋಗದಿಂದ ರಾಜ್ಯದ ಜನರ ಜೀವನ ಮಟ್ಟ ಸುಧಾರಿಸಲು ಸಹಾಯವಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್ ಎಂ ರೇವಣ್ಣ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಮಂಗಳವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಆಯೋಜಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಗಾಂಧೀಜಿಯವರ ಪಾತ್ರ ಎಷ್ಟು ಮುಖ್ಯವೋ ಅದೇ ರೀತಿ ಆರ್ಥಿಕ ಸ್ವಾತಂತ್ರ್ಯದಲ್ಲಿ ಇಂದಿರಾ ಗಾಂಧಿಯವರ ಕೊಡುಗೆ ಸ್ಮರಣೀಯ. ರಾಜ್ಯದ ಜನತೆಗೆ ಕನಿಷ್ಠ ಆರ್ಥಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ಮೂದಲಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 12 23 at 6.15.11 PM

ರಾಜ್ಯ ಸರಕಾರ ಜನಸಾಮಾನ್ಯರ ಆರ್ಥಿಕ ಬದುಕಿಗೆ ಒತ್ತುಕೊಟ್ಟು, ಅವರನ್ನು ಆರ್ಥಿಕ ಸಬಲರನ್ನಾಗಿಸಿದೆ. ಈ ಗ್ಯಾರಂಟಿ ಯೋಜನೆಗಳಿಂದಾಗಿ ಜನತೆಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚಳವಾಗಿದೆ ಎಂದು ಹೇಳಿದರು.

ಜಾಗೃತ ಕರ್ನಾಟಕದ ಸಂಚಾಲಕ ಡಾ. ವಾಸು ಹೆಚ್.ವಿ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಯಾಗುತ್ತದೆಯೇ ವಿನಃ ರಾಜ್ಯದ ಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ. ಜನಸಮುದಾಯಕ್ಕೆ ಕೊಳ್ಳುವ ಶಕ್ತಿ ಜಾಸ್ತಿ ಬಂದರೆ ಮಾತ್ರ ರಾಜ್ಯ ಅಭಿವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಜನರ ಜೀವನದ ಅವಶ್ಯಕತೆಗಳಿಗೆ ನೆರವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಪ್ಪಾ ಅಮರನಾಥ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಕಹ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ, ಮಂಜುನಾಥ ಭಂಡಾರಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ ಡಿ.ಎಸ್. ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹೀದ್ ತೆಕ್ಕಿಲ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿವಿಧ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಜಯಂತಿ ಬಿ.ಎ, ಉಮಾನಾಥ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಆಲ್ವಿನ್ ಕ್ಲೆಮೆಂಟ್ ಕುಟಿನ, ಶಾಹುಲ್ ಹಮೀದ್, ಸುಧೀರ್ ಕುಮಾರ್ ಶೆಟ್ಟಿ, ಸುರೇಂದ್ರ ಬಿ. ಕಂಬಳಿ, ಅರುಣ್ ಕುಮಾರ್ ಶೆಟ್ಟಿ, ಎಸ್.ರಫೀಕ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ದ.ಕ. | ಪಾಸ್‌ಪೋರ್ಟ್‌ ವೆರಿಫಿಕೇಶನ್‌ ವೇಳೆ ಸುಳ್ಳು ದಾಖಲೆ ಸೃಷ್ಟಿ: ಪೊಲೀಸ್ ಸಿಬ್ಬಂದಿಯನ್ನೇ ಬಂಧಿಸಿದ ಪೊಲೀಸರು!

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸ್ವಾಗತಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...