ಮಂಗಳೂರು | ಹನಿಟ್ರ್ಯಾಪ್ ಕೇಸ್ ಬಯಲು: ಉದ್ಯಮಿಯನ್ನು ಬೆದರಿಸಿ 44.80 ಲಕ್ಷ ರೂ. ದೋಖಾ

Date:

ಮಂಗಳೂರು ನಗರದಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಕೇರಳ ಮೂಲದ ಗಲ್ಫ್‌ ಉದ್ಯಮಿಯೊಬ್ಬರಿಗೆ ಬಂಟ್ವಾಳದ ಹನಿಟ್ರ್ಯಾಪ್ ತಂಡವೊಂದು ಮೋಸ ಮಾಡಿ 44.80 ಲಕ್ಷ ರೂ.ಗಳನ್ನು ವಂಚಿಸಿದೆ ಎಂದು
ಬೆಂಗಳೂರಿನ ನ್ಯಾಯವಾದಿ ಸೌದಾ ಆರೋಪಿಸಿದ್ದಾರೆ.

ಮಂಗಳೂರಿನ ವುಡ್‌ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೇರಳದ 53 ವರ್ಷದ ಮುಹಮ್ಮದ್ ಅಶ್ರಫ್ ತಾವರಕಡನ್ ಎಂಬುವವರು ಸೌದಿಯಲ್ಲಿ ಉದ್ಯೋಗದಲ್ಲಿದ್ದಾರೆ. ಅವರಿಗೆ ಬಶೀರ್ ಕಡಂಬು, ಸಫಿಯಾ ಮಾಣಿ ಮತ್ತು ಇತರ ಆರೋಪಿಗಳು ಸೆ.24ರಂದು ಮಂಗಳೂರಿಗೆ ಕರೆಸಿ ಹೆಣ್ಣು ತೋರಿಸುವ ನೆಪದಲ್ಲಿ ಫೋಟೋ ವಿಡಿಯೋ ಮಾಡಿಸಿ ಬಳಿಕ ಹಣಕ್ಕಾಗಿ ಬೆದರಿಕೆ ಹಾಕಿದ್ದಾರೆ. ವಿವಾಹಿತರಾಗಿರುವ ಅಶ್ರಫ್ ವೀಡಿಯೋ ಬಹಿರಂಗವಾಗುತ್ತದೆ ಎಂಬ ಭಯದಿಂದ 44.80 ಲಕ್ಷ ಹಣವನ್ನು ಆರೋಪಿಗಳ ವಿವಿಧ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದ್ದಾರೆ. ಈ ಮಧ್ಯೆ ಅಶ್ರಫ್ ಅವರ ಪತ್ನಿಗೂ ಬೇರೆಯವರ ಅಶ್ಲೀಲ ವಿಡಿಯೋವೊಂದನ್ನು ಕಳುಹಿಸಿ ಹಣ ನೀಡದಿದ್ದರೆ ನಿಮ್ಮ ಪತಿಯ ಇಂತಹ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಕಳೆದ ವಾರ ವಿಟ್ಲ ಪೊಲೀಸ್ ಠಾಣೆಗೆ ಆಗಮಿಸಿ ಅಶ್ರಫ್ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಒಂದು ವಾರ ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಕೇಸ್ ದಾಖಲಿಸಲು ಪೊಲೀಸ್ ಠಾಣೆಯಲ್ಲಿ ಸಾಕಷ್ಟು ತೊಂದರೆಯಾಗಿತ್ತು. ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಕೇಸ್ ದಾಖಲಾಗಿದೆ. ಇದೀಗ ಸಂತ್ರಸ್ತ ಅಶ್ರಫ್ ಅವರಿಗೆ ನ್ಯಾಯ ದೊರೆಯಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಸಫಿಯಾ ಎಂಬುವವರು 2010ರಿಂದಲೂ ಹನಿಟ್ರ್ಯಾಪ್‌ನಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಇಂತಹ ಹಲವು ತಂಡಗಳು‌ ಮಂಗಳೂರು ಸೇರಿದಂತೆ ವಿವಿಧೆಡೆ ಸಕ್ರಿಯವಾಗಿದೆ. ಇವರು ಉದ್ಯಮಿಗಳನ್ನು ತಮ್ಮ ಬಲೆಗೆ ಹಾಕಿಕೊಂಡು ಹಣ ದೋಚುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು” ಎಂದು ಸೌದಾ ಒತ್ತಾಯಿಸಿದ್ದಾರೆ.‌

ಸಂತ್ರಸ್ತ ಮುಹಮ್ಮದ್ ಅಶ್ರಫ್, ಅಬ್ದುಲ್ ರಝಾಕ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...