ಮಂಗಳೂರು | ಕುಡುಪು ಗುಂಪು ಹತ್ಯೆ ಪ್ರಕರಣ; ಆರೋಪಿ ರವೀಂದ್ರ ನಾಯ್ಕಗೆ ನಿರೀಕ್ಷಣಾ ಜಾಮೀನು

Date:

ಮಂಗಳೂರು ನಗರದ ಹೊರವಲಯದ ಕುಡುಪು ಬಳಿ ಏ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಆಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರವೀಂದ್ರ ನಾಯ್ಕಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈಗಾಗಲೇ ಹತ್ಯೆಗೆ ಸಂಬಂಧಿಸಿದಂತೆ ಕುಡುಪು ಮತ್ತು ಸುತ್ತಮುತ್ತಲಿನ ಪರಿಸರದ ಸಚಿನ್ ಟಿ., ದೇವದಾಸ್ ಅಂಚನ್, ಮಂಜುನಾಥ್, ನಟೇಶ್ ಕುಮಾರ್, ಯಾನೆ ಸಂತೋಷ್, ದೀಕ್ಷಿತ್ ಕುಮಾರ್, ವಿವಿಯನ್ ಆಲ್ವಾರಿಸ್, ಶ್ರೀದತ್ತ, ಧನುಷ್, ಕಿಶೋರ್ ಕುಮಾರ್, ರಾಹುಲ್, ಪ್ರದೀಪ್ ಕುಮಾರ್, ಮನೀಷ್ ಶೆಟ್ಟಿ, ಸಾಯಿದೀಪ್, ಸಂದೀಪ್ ಬಸವರಾಜ್, ದೀಕ್ಷಿತ್ ಯಾನೆ ಮುನ್ನ, ಅನಿಲ್, ಯತಿರಾಜ್ ಯಾನೆ ಯತಿನ್, ಆದರ್ಶ್ ಪಂಡಿತ್, ಸಚಿನ್, ಕೆ. ಸುಶಾಂತ್, ಅನಿಲ್ ಕುಮಾರ್ ಸಹಿತ 21 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಪೈಕಿ 6 ಮಂದಿಗೆ ಜಾಮೀನು ಲಭಿಸಿದೆ. 15 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...