ಮಂಗಳೂರು ಗುಂಪು ಹತ್ಯೆ | ಸಂತ್ರಸ್ತ ಅಶ್ರಫ್ ಕುಟುಂಬಕ್ಕೆ ಯುಟಿ ಖಾದರ್, ಸಚಿವ ಜಮೀರ್‌ರಿಂದ ಪರಿಹಾರ ವಿತರಣೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪುವಿನಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಗುಂಪು ಹತ್ಯೆಯಲ್ಲಿ ಕೊಲೆಗೀಡಾಗಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಅವರ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಸ್ಪೀಕರ್ ಯು.ಟಿ.ಖಾದರ್ ಅವರು ಪರಿಹಾರದ ಮೊತ್ತವನ್ನು ಕುಟುಂಬಸ್ಥರಿಗೆ ವಿತರಿಸಿದರು.

ಗುಂಪು ಹತ್ಯೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೇರಳ ಸಂಸದ ಕೆ.ಸಿ.ವೇಣುಗೋಪಾಲ್ ರವರ ಕೋರಿಕೆ ಹಾಗೂ ಸೂಚನೆಯ ಮೇರೆಗೆ ಸಭಾಧ್ಯಕ್ಷ ಯು.ಟಿ.ಖಾದರ್,ಸಚಿವ ಜಮೀರ್ ಅಹ್ಮದ್ ಖಾನ್, ಎಐಸಿಸಿ ಕಾರ್ಯದರ್ಶಿಗಳಾದ ಬಿ.ಕೆ.ಹರಿಪ್ರಸಾದ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾಂಗ್ರೆಸ್ ಮುಖಂಡರಾದ ಜಿ ಎ ಬಾವ ಹಾಗೂ ಮಂಜೇಶ್ವರ ಶಾಸಕರಾದ ಎ ಕೆ ಎಂ ಅಶ್ರಫ್ ಅವರು ಗುಂಪು ಹಲ್ಲೆಯಲ್ಲಿ ಹತ್ಯೆಗೀಡಾದ ಅಶ್ರಫ್ ರವರ ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಿತು.

WhatsApp Image 2025 07 07 at 5.03.13 PM

ಚರ್ಚೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಸಲು ಸರಕಾರದ ವತಿಯಿಂದ ವಿಶೇಷ ಅಭಿಯೋಜಕರನ್ನು ನೇಮಿಸಲು ತೀರ್ಮಾನಿಸಲಾಯಿತು. ಅದೇ ರೀತಿ ಗುಂಪು ಹತ್ಯಾ ಕಾಯ್ದೆ ಪ್ರಕಾರ ಹತ್ಯೆಯಾದ ಅಶ್ರಫ್ ರವರ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಒದಗಿಸುವ ಕುರಿತಾಗಿ ಕೂಡಾ ಚರ್ಚೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಬಳಿಕ ಮಾನವೀಯತೆಯ ನೆಲೆಯಲ್ಲಿ ತಮ್ಮ ವೈಯುಕ್ತಿಕ ಖಾತೆಗಳಿಂದ ಸಚಿವ ಜಮೀರ್ ಅಹ್ಮದ್ ಖಾನ್ ಹತ್ತು ಲಕ್ಷ ಹಾಗೂ ಯು.ಟಿ.ಖಾದರ್ ಐದು ಲಕ್ಷ ರೂಪಾಯಿಯ ಪರಿಹಾರದ ಮೊತ್ತವನ್ನು ಅಶ್ರಫ್ ಕುಟುಂಬಸ್ಥರಿಗೆ ವಿತರಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು ಗುಂಪು ಹತ್ಯೆ | ಸತ್ಯಶೋಧನಾ ವರದಿ ಬಿಡುಗಡೆ; 2 ತಿಂಗಳಾದರೂ ಸರ್ಕಾರಿ ವಕೀಲರನ್ನೇ ನೇಮಿಸದ ರಾಜ್ಯ ಸರ್ಕಾರ!

ಈ ಸಂದರ್ಭದಲ್ಲಿ ಅಶ್ರಫ್ ಕುಟುಂಬಸ್ಥರೊಂದಿಗೆ ಮಲಪ್ಪುರಂ ಕಾಂಗ್ರೆಸ್ ಮುಖಂಡರಾದ ನಾಸಿರ್ ವೆಂಗರ, ಮಂಗಳೂರಿನ ಮುಸ್ಲಿಂ ಸಮುದಾಯದ ಮುಖಂಡರಾದ ಮಾಜಿ ಮೇಯರ್ ಅಶ್ರಫ್, ಜಿ ಎ ಬಾವಾ, ಜಲೀಲ್ ಕೃಷ್ಣಾಪುರ ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...