ಮಂಗಳೂರು | ಪೊಲೀಸರ ಕೊಲೆಗೆ ಯತ್ನಿಸಿದ್ದ ಕುಖ್ಯಾತ ರೌಡಿಶೀಟರ್ ಮೇಲೆ ಫೈರಿಂಗ್

Date:

ಸಿಸಿಬಿ ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದ ನಟೋರಿಯಸ್ ರೌಡಿಶೀಟರ್ ಆಕಾಶ್ ಭವನ ಶರಣ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಆರೋಪಿಯು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲಿಗೆ ಗುಂಡು ಹೊಡೆದು ಬಂಧಿಸಿರುವುದಾಗಿ ತಿಳಿದುಬಂದಿದೆ. ಸದ್ಯ ಆರೋಪಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಪೊಲೀಸರ ಕೊಲೆಗೆ ಯತ್ನಿಸಿದ್ದ ಘಟನೆಗೆ ಸಂಬಂಧಿಸಿ ಕಾವೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಆಕಾಶಭವನ್ ಶರಣ್ ಹಲವು ಪ್ರಕರಣಗಳಲ್ಲಿ ಬಂಧನ ವಾರೆಂಟ್ ಎದುರಿಸುತ್ತಿದ್ದು ಜನವರಿ 2ರಂದು ರಾತ್ರಿ ಮೇರಿಹಿಲ್ ನಲ್ಲಿ ಕಾರಿನಲ್ಲಿ ಬರುತ್ತಿದ್ದಾಗ ಪೊಲೀಸರು ಅಡ್ಡಗಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳೂರು ಸಿಸಿಬಿ ವಿಭಾಗದ ಪೊಲೀಸ್ ತಂಡ ಕಾರನ್ನು ಅಡ್ಡಗಟ್ಟುತ್ತಲೇ ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲ್ಲಲು ಯತ್ನಿಸಿದ್ದಾನೆ. ಘಟನೆಯಲ್ಲಿ ಪೊಲೀಸರು ಯಾವುದೇ ಅಪಾಯ ಇಲ್ಲದೆ ತಪ್ಪಿಸಿಕೊಂಡಿದ್ದರು.

ಕಳೆದ ಅಕ್ಟೋಬ‌ರ್ ತಿಂಗಳಲ್ಲಿ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ರೇಣುಕಾಪ್ರಸಾದ್ ಸೇರಿ ಐದು ಮಂದಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಸುಪಾರಿ ಪಡೆದು ಕೊಲೆ ಕೃತ್ಯ ನಡೆಸಿದ್ದ ಆಕಾಶ್ ಭವನ್ ಶರಣ್ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದರಿಂದ ಶಿಕ್ಷೆ ಪ್ರಕಟವಾಗಿರಲಿಲ್ಲ. ಉಳಿದ ಐದು ಮಂದಿ ಜೈಲು ಸೇರಿದ್ದರೆ, ಶರಣ್ ಮಾತ್ರ ತಲೆಮರೆಸಿಕೊಂಡಿದ್ದ.

ಆಕಾಶಭವನ್ ಶರಣ್ ಮೇಲೆ ಮಂಗಳೂರು ಮತ್ತು ಉಡುಪಿಯಲ್ಲಿ ಕೊಲೆ, ಕೊಲೆಯತ್ನ ರೇಪ್, ಹಫ್ತಾ ಸೇರಿದಂತೆ 21 ಕೇಸುಗಳು ದಾಖಲಾಗಿದ್ದು, ಮಂಗಳೂರಿನ ನಟೋರಿಯಸ್ ರೌಡಿಯೆಂದು ಗುರುತಿಸಲ್ಪಟ್ಟಿದ್ದಾನೆ.

ಇದನ್ನು ಓದಿದ್ದೀರಾ? ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವುದು ತಪ್ಪಲ್ಲ: ಹೇಳಿಕೆ ಸಮರ್ಥಿಸಿಕೊಂಡ ಸ್ಪೀಕರ್ ಯು ಟಿ ಖಾದರ್

ಕಳೆದ ಬಾರಿ 2020 ಅಕ್ಟೋಬರ್ 20ರಂದು ಸುರೇಂದ್ರ ಬಂಟ್ವಾಳ್ ಎನ್ನುವ ಫೈನಾನ್ಸರ್ ಅನ್ನು ಜೈಲಿನಲ್ಲಿದ್ದುಕೊಂಡೇ ತನ್ನ ಸಹಚರರಿಂದ ಕೊಲ್ಲಿಸಿದ್ದ ಆರೋಪ ಕೂಡ ಈತನ ಮೇಲಿದೆ. ಆನಂತರ, 2022ರ ಕೊನೆಯಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿದ್ದ ಶರಣ್, 2023ರ ಜನವರಿ 14ರಂದು ಸುರತ್ಕಲ್ ಬಳಿ ಹಣಕ್ಕಾಗಿ ಸ್ಕೂಟರ್ ಅಡ್ಡಗಟ್ಟಿ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ನಾಲ್ಕು ತಿಂಗಳಲ್ಲಿ ಮತ್ತೆ ಜೈಲಿನಿಂದ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದನು. ಸುಳ್ಯ ಕೊಲೆ ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಗದೆ ತಿರುಗಾಡುತ್ತಿದ್ದ ಶರಣ್, ಮಂಗಳೂರು ಪೊಲೀಸರ ಪಾಲಿಗೆ ‘ಮೋಸ್ಟ್ ವಾಂಟೆಡ್’ ಆಗಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...