ಮಂಗಳೂರು | ಬ್ಯಾಂಕ್ ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿಗೆ ಪೊಲೀಸರಿಂದ ಗುಂಡೇಟು

Date:

ರಾಜ್ಯದಲ್ಲಿ ಸದ್ದು ಮಾಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮಂಗಳವಾರ (ಜ.21) ನಡೆದಿರುವ ಬಗ್ಗೆ ವರದಿಯಾಗಿದೆ.

ಮಂಗಳೂರು-ಕೇರಳ ಗಡಿಭಾಗವಾದ ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್‌ ನಗರ ನಿವಾಸಿ ಕಣ್ಣನ್‌ ಮಣಿ ಎಂಬಾತನ ಮೇಲೆ ಮಂಗಳೂರು ಸಿಟಿ ಕ್ರೈಂ ಬ್ರ್ಯಾಂಚ್‌ ಪೊಲೀಸ್ ಇನ್ಸ್‌ಪೆಕ್ಟರ್ ರಫೀಕ್ ಅವರು ಗುಂಡಿನ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕರ್ನಾಟಕ – ಕೇರಳ ಗಡಿಯ ತಲಪಾಡಿ ಗ್ರಾಮದ ಕಾಟುಂಗರ ಗುಡ್ಡೆ ಬಳಿ ಈ ಘಟನೆ ನಡೆದಿದೆ. ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಕಣ್ಣನ್‌ ಮಣಿ ಯತ್ನ ನಡೆಸಿದ್ದ ಎಂದು ವರದಿಯಾಗಿದೆ.

WhatsApp Image 2025 01 21 at 6.16.33 PM

ನಿನ್ನೆ ತಮಿಳುನಾಡಿನ ತಿರುವನ್ವೇಲಿ ಪದ್ಮನೇರಿ ಗ್ರಾಮವೊಂದರಲ್ಲಿ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಆರೋಪಿಗಳನ್ನ ಮಂಗಳೂರಿಗೆ ಕರೆ ತರಲಾಗುತ್ತಾ ಇತ್ತು. ಕರ್ನಾಟಕ- ಕೇರಳ ಗಡಿ ಭಾಗದ ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಈ ಘಟನೆ ನಡೆದಿದೆ. ದರೋಡೆಯ ಪ್ರಮುಖ ಆರೋಪಿ ಕಣ್ಣನ್ ಮಣಿ ಅವರನ್ನ ದೇರಳಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನು ಓದಿದ್ದೀರಾ? ಡಾಲಿ ಚಾಯ್‌ವಾಲ ಮಂಗಳೂರಿನವನಾಗಿದ್ದಿದ್ದರೆ ಆತನ ಸ್ಟಾಲ್ ಕೂಡ ಬುಲ್ಡೋಜ್ ಆಗುತ್ತಿತ್ತು : ನಟ ರಾಜ್ ಬಿ ಶೆಟ್ಟಿ

ಈ ಪ್ರಕರಣಕ್ಕೆ ಸಂಬಂಧಿಸಿ ಕಣ್ಣನ್‌ ಮಣಿ, ಡಿ ಮುರುಗನ್ ದೇವರ್ ಹಾಗೂ ಯೋಶುವಾ ರಾಜೇಂದ್ರನ್ ಎಂಬ ಮೂವರು ಅರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು. ಆರೋಪಿಗಳು ನೀಡಿದ ಮಾಹಿತಿಯ ಪ್ರಕಾರ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ.ರಸ್ತೆಯ ಆಲಂಕಾರು ಗುಡ್ಡೆ ಬಳಿ ಇಂದು ಸಂಜೆ 4:20 ರ ಸುಮಾರಿಗೆ ಸ್ಥಳ ಪರಿಶೀಲನೆ ನಡೆಸಲಾಯಿತು. ಆರೋಪಿಯನ್ನು ಉಳ್ಳಾಲ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ತನಿಖಾ ತಂಡದ ಸದಸ್ಯರ ಉಪಸ್ಥಿತಿಯಲ್ಲಿ ತಪಾಸಣೆ ನಡೆಸಲಾಯಿತು.

WhatsApp Image 2025 01 21 at 6.16.32 PM

ತಪಾಸಣೆಯ ವೇಳೆ ಆರೋಪಿ ಕಣ್ಣನ್ ಮಣಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಸ್ಥಳದಲ್ಲಿ ಸಿಕ್ಕ ಮುರಿದ ಬಿಯರ್ ಬಾಟಲಿಯನ್ನು ಬಳಸಿ ಬೆಂಗಾವಲು ಸಿಬ್ಬಂದಿಗಳಾದ ಅಂಜನಪ್ಪ ಮತ್ತು ನಿತಿನ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಆರೋಪಿಯು ತನಿಖಾಧಿಕಾರಿ, ಉಳ್ಳಾಲ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ತಳ್ಳಿ ಚಾಕುವಿನಿಂದ ಇರಿದು ಕೊಲ್ಲಲು ಪ್ರಯತ್ನಿಸಿದ್ದಾರೆ. ಹೀಗಾಗಿ ಗಾಳಿಯಲ್ಲಿ ಎಚ್ಚರಿಕೆಯ ಗುಂಡು ಹಾರಿಸಿದ ಸಿಸಿಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ ರಫೀಕ್ ಎಚ್ಚರಿಕೆ ನೀಡಿದರೂ, ಆರೋಪಿ ತನ್ನ ದಾಳಿಯನ್ನು ಮುಂದುವರಿಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.

police 14
ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಪೊಲೀಸ್ ಸಿಬ್ಬಂದಿ

ಇದಕ್ಕೆ ಪ್ರತಿಯಾಗಿ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಆರೋಪಿಯ ಕಾಲಿಗೆ ಗುಂಡು ಹಾರಿಸಿ, ಆತನನ್ನು ವಶಕ್ಕೆ ಪಡೆದಿದ್ದಾರೆ‌. ಈ ಘಟನೆಯಲ್ಲಿ ಉಳ್ಳಾಲ ಪಿಎಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ, ಸಿಸಿಬಿ ಘಟಕದ ಪಿಸಿ ಅಂಜನಪ್ಪ, ಉಳ್ಳಾಲ ಪಿಎಸ್‌ಪಿಸಿ ನಿತಿನ್ ಗಾಯಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಡಾಲಿ ಚಾಯ್‌ವಾಲ ಮಂಗಳೂರಿನವನಾಗಿದ್ದಿದ್ದರೆ ಆತನ ಸ್ಟಾಲ್ ಕೂಡ ಬುಲ್ಡೋಜ್ ಆಗುತ್ತಿತ್ತು : ನಟ ರಾಜ್ ಬಿ ಶೆಟ್ಟಿ

ಗಾಯಗೊಂಡ ಸಿಬ್ಬಂದಿ ಮತ್ತು ಆರೋಪಿಗಳನ್ನು ತಕ್ಷಣ ಚಿಕಿತ್ಸೆಗಾಗಿ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

kotekar1
ಆರೋಪಿಗಳಾದ ಡಿ ಮುರುಗನ್ ದೇವರ್ ಹಾಗೂ ಯೋಶುವಾ ರಾಜೇಂದ್ರನ್
kotekar fire
ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಮತ್ತು ಆಸ್ಪತ್ತೆಯಲ್ಲಿ ಚಿಕಿತ್ಗೆ ಪಡೆಯುತ್ತಿರುವ ಪ್ರಮುಖ ಆರೋಪಿ ಕಣ್ಣನ್ ಮಣಿ(ಒಳಚಿತ್ರದಲ್ಲಿ)
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...