ಮಂಗಳೂರು | ರಸ್ತೆಯಲ್ಲಿ ನಮಾಝ್: ಸ್ವಯಂಪ್ರೇರಿತ ಪ್ರಕರಣ ರದ್ದುಗೊಳಿಸಿದ ಪೊಲೀಸರು; ಶರಣ್ ಪಂಪ್‌ವೆಲ್ ವಿರುದ್ಧ FIR

Date:

ಮಂಗಳೂರಿನ ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಕಳೆದ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ಪೊಲೀಸರು ದಾಖಲಿಸಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ವಾಪಸ್ ಪಡೆದಿದ್ದಾರೆ. ಜೊತೆಗೆ ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, “ರಸ್ತೆಯಲ್ಲಿ ನಮಾಝ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಕ್ಕೆ ಅಡೆತಡೆ ಮಾಡುವ ಯಾವುದೇ ಉದ್ದೇಶ ಇಲ್ಲದಿರುವುದರಿಂದ ಸದ್ರಿ ಪ್ರಕರಣದಲ್ಲಿ ‘ಬಿ’ ಅಂತಿಮ ವರದಿ ಸಲ್ಲಿಸಲಾಗಿದೆ ಮತ್ತು ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿಯನ್ನು ನೀಡದೆ ಸುಮೋಟೊ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್ ನಿರೀಕ್ಷಕರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ ಎ.ಸಿ.ಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಶುಕ್ರವಾರ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ನಮಾಝ್ ನಿರ್ವಹಿಸಿರುವ ವಿಡಿಯೋ ವೈರಲ್ ಆಗಿತ್ತು. ನಮಾಝ್ ನಿರ್ವಹಿಸಿದ್ದಕ್ಕೆ ಸಂಘಪರಿವಾರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೆ ಪೊಲೀಸರು ಸುಮೋಟೊ ಪ್ರಕರಣ (ಐಪಿಸಿ ಸೆಕ್ಷನ್ 341, 283, 143 ಜೊತೆಗೆ 149 ಸೆಕ್ಷನ್) ದಾಖಲಿಸಿಕೊಂಡಿದ್ದರು. ಪೊಲೀಸರ ಕ್ರಮಕ್ಕೆ ಮುಸ್ಲಿಮ್ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು.

ನಿನ್ನೆ ಕಾಂಗ್ರೆಸ್ ಮುಖಂಡ ಕೆ ಕೆ ಶಾಹುಲ್ ಹಮೀದ್ ನೇತೃತ್ವದ ಮುಸ್ಲಿಮ್ ನಾಯಕರ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಕೇಸು ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು. ಕೇಸ್ ವಾಪಸ್ ಪಡೆಯದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದರು. ಎಸ್‌ಡಿಪಿಐ ಪಕ್ಷ ನಾಳೆ(ಮೇ 31) ಶುಕ್ರವಾರ ಪ್ರತಿಭಟನೆ ಕೂಡ ಹಮ್ಮಿಕೊಂಡಿತ್ತು.

ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್

ಅಲ್ಲದೇ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ಭಂಗ ಉಂಟು ಮಾಡುವ ಹೇಳಿಕೆ ನೀಡಿದ್ದ ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶರಣ್ ಪಂಪವೆಲ್ ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್‌ನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

sharan pumpwell ಶರಣ್ ಪಂಪ್‌ವೆಲ್

“ಮಂಗಳೂರಿನ ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲು ನಡೆಸಿರುವ ನಮಾಜಿನ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಝ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸಲಾಗುವುದು ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ” ಎಂಬ ಬರವಣಿಗೆಯೊಂದಿಗೆ ಪೋಸ್ಟ್ ಮಾಡಿದ್ದರು.

“ಜನರಲ್ಲಿ ದ್ವೇಷ ಭಾವನೆ ಉಂಟಾಗುವಂತೆ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಬೆದರಿಕೆ ಹಾಕಿ ಎಚ್ಚರಿಕೆಯನ್ನು ನೀಡಿ ಸಮಾಜದಲ್ಲಿ ಭಯವನ್ನುಂಟು ಮಾಡುವ ರೀತಿಯಲ್ಲಿ ಪೋಸ್ಟ್‌ ಅನ್ನು ಮಾಡಿದ್ದಾಗಿದೆ. ಈ ಬಗ್ಗೆ ಮಂಗಳೂರು ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾದ್ಯತೆ ಇರುವುದರಿಂದ ಪ್ರಕರಣವು ದಾಖಲಾಗಿರುತ್ತದೆ” ಎಂದು ಮಂಗಳೂರು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...