ಮಂಗಳೂರು | ಪ್ರಚೋದನಾಕಾರಿ ಪೋಸ್ಟ್: ಆರು ಮಂದಿ ಪೊಲೀಸ್ ಬಲೆಗೆ

Date:

ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಶಾಂತಿ ಕದಡಲು ಮತ್ತು ಸೌಹಾರ್ದತೆಗೆ ಭಂಗ ತರಲು ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಕುರಿತು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಐದು ಪ್ರತ್ಯೇಕ ಪ್ರಕರಣಗಳಲ್ಲಿ ಆರು ಮಂದಿ ಆರೋಪಿಗಳನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬಂಧಿತರನ್ನು ಹೆಜಮಾಡಿಯ ಅಸ್ಲಾಂ (23), ಕಾಟಿಪಳ್ಳದ ಚೇತನ್ (20), ಹಳೆಯಂಗಡಿ ನಿತಿನ್ ಅಡಪ (23), ಫರಂಗಿಪೇಟೆಯ ರಿಯಾಝ್ ಇಬ್ರಾಹೀಂ (30), ಕಸಬಾ ಬೆಂಗ್ರೆಯ ಜಮಾಲ್ ಝಕೀರ್(21) ಮತ್ತು ಕೊಳವೈಲ್‌ನ ಗುರುಪ್ರಸಾದ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20250605 WA0026

ಬಂಧಿತನಾಗಿರುವ ಪೈಕಿ ಮೊಹಮ್ಮದ್ ಅಸ್ಲಾಂ (23), ಹೆಜಮಾಡಿ, ಉಡುಪಿ: ಸೌದಿ ಅರೇಬಿಯಾದಿಂದ ‘team_jokerzzz._’ ಎಂಬ ಇನ್‌ಸ್ಟಾಗ್ರಾಂ ಪುಟದ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ (ಅಪರಾಧ ಕ್ರಮಾಂಕ: 88/2025, ಕಲಂ 192, 353 (2) ಭಾರತೀಯ ನ್ಯಾಯ ಸಂಹಿತೆ) ಪ್ರಕರಣ ದಾಖಲಾಗಿತ್ತು. ಆರೋಪಿ ಮೊಹಮ್ಮದ್ ಅಸ್ಲಾಂ ವಿರುದ್ಧ ಎಲ್.ಓ.ಸಿ (Look Out Circular) ಹೊರಡಿಸಿ ದಸ್ತಗಿರಿ ಮಾಡಲಾಗಿದೆ.

ಚೇತನ್ (20), ಕಾಟಿಪಳ್ಳ, ಸುರತ್ಕಲ್ ಮತ್ತು ನಿತಿನ್ ಅಡಪ (23), ಹಳೆಯಂಗಡಿ: ಮುಸ್ಲಿಂ ಹೆಸರಿನ ಸಿಮ್ ಕಾರ್ಡ್ ಬಳಸಿ ‘team_karna_surathkal’ ಎಂಬ ಇನ್‌ಸ್ಟಾಗ್ರಾಂ ಪುಟ ತೆರೆದು, ಅದರ ಮೂಲಕ ‘ಚೆನ್ನಪ್ಪ @ ಮುತ್ತು ಸುರತ್ಕಲ್’ ಎಂಬಾತ ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ. ಈ ಸಂಬಂಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ (ಅಪರಾಧ ಕ್ರಮಾಂಕ: 58/2025, ಕಲಂ 196(1), 353(2) ಭಾರತೀಯ ನ್ಯಾಯ ಸಂಹಿತೆ) ಪ್ರಕರಣ ದಾಖಲಾಗಿತ್ತು. ಚೇತನ್ ಮತ್ತು ನಿತಿನ್ ಅಡಪ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ರಿಯಾಝ್ ಇಬ್ರಾಹಿಂ (30), ಫರಂಗಿಪೇಟೆ, ಮಂಗಳೂರು: ಸೌದಿ ಅರೇಬಿಯಾದಿಂದ ‘Beary_royal_nawab’ ಎಂಬ ಇನ್‌ಸ್ಟಾಗ್ರಾಂ ಪುಟದ ಮೂಲಕ ಪ್ರಚೋದನಾಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ.‌

ಹೀಗಾಗಿ ಆತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ (ಅಪರಾಧ ಕ್ರಮಾಂಕ: 44/2025, ಕಲಂ 353(2) ಭಾರತೀಯ ನ್ಯಾಯ ಸಂಹಿತೆ) ಹಾಗೂ ಮುಲ್ಕಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಕ್ರಮಾಂಕ: 42/2025, ಕಲಂ 353 (1)(c), 353(2) ಭಾರತೀಯ ನ್ಯಾಯ ಸಂಹಿತೆ) ಪ್ರಕರಣಗಳು ದಾಖಲಾಗಿವೆ. ಆರೋಪಿ ರಿಯಾಝ್ ಇಬ್ರಾಹಿಂ ವಿರುದ್ಧ ಎಲ್.ಓ.ಸಿ ಹೊರಡಿಸಿ ದಸ್ತಗಿರಿ ಮಾಡಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

ಜಮಾಲ್ ಝಾಕೀರ್ (21), ಕಸಬಾ ಬೆಂಗ್ರೆ, ಮಂಗಳೂರು ನಗರ: ‘Troll_bengare_ro_makka’ ಎಂಬ ಇನ್‌ಸ್ಟಾಗ್ರಾಂ ಪುಟದ ಮೂಲಕ ಪ್ರಚೋದನಾಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದ ಮೇಲೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಕ್ರಮಾಂಕ: 44/2025, ಕಲಂ 353 (1)(c), 353(2) ಭಾರತೀಯ ನ್ಯಾಯ ಸಂಹಿತೆ) ಪ್ರಕರಣ ದಾಖಲಾಗಿತ್ತು. ಜಮಾಲ್ ಝಾಕೀರ್‌ನನ್ನು ದಸ್ತಗಿರಿ ಮಾಡಲಾಗಿದೆ.

ಗುರುಪ್ರಸಾದ್, ಕೊಳವೈಲ್, ಹಳೆಯಂಗಡಿ, ಮಂಗಳೂರು ನಗರ: ‘Guru dprasad Haleyangadi’ ಎಂಬ ಫೇಸ್‌ಬುಕ್ ಖಾತೆಯ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದ ಮೇಲೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಕ್ರಮಾಂಕ: 53/2025, ಕಲಂ 196(1)(A), 353(2), 79, 56 ಭಾರತೀಯ ನ್ಯಾಯ ಸಂಹಿತೆ) ಪ್ರಕರಣ ದಾಖಲಾಗಿತ್ತು. ಗುರುಪ್ರಸಾದ್‌ನನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಎಲ್ಲಾ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ವಿಶೇಷ ತಂಡಗಳು ಮುಂದುವರೆಸಿವೆ ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...