ಮಂಗಳೂರು | ಕೊಂಕಣಿ ಭಾಷಾ ಮಂಡಳ್‌ನ ರಾಜ್ಯಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ಆಯ್ಕೆ

Date:

ಕೊಂಕಣಿ ಭಾಷಿಗರ ಸಂಘಟನೆಯಾದ ಕರ್ನಾಟಕ ಕೊಂಕಣಿ ಭಾಷಾ ಮಂಡಳ್‌ನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಕಾರ್ಯದರ್ಶಿಯಾಗಿ ವಕೀಲ ಲಿಸ್ಟನ್ ಡಿಸೋಜ ಆಯ್ಕೆಯಾಗಿದ್ದಾರೆ.

ಕಾನೂನು ವ್ಯಾಸಂಗ, ಪತ್ರಿಕಾ ಮಾಧ್ಯಮ ಉನ್ನತ ವ್ಯಾಸಂಗ ಮಾಡಿರುವ ರೇಮಂಡ್, 1985 ರಿಂದ ‌ಪತ್ರಕರ್ತರು. ಕೊಂಕಣಿ ಪತ್ರಿಕೆಗಳಲ್ಲಿ ಸಹ- ಸಂಪಾದಕ, ಸಂಪಾದಕರಾಗಿ ಕೆಲಸ ನಿರ್ವಹಿಸಿದ್ದಾರೆ. ಆಗಿನಿಂದಲೂ ಕೊಂಕಣಿ ಮಾತೃಭಾಷೆಗೆ ರಾಕ್ಣೊದಲ್ಲಿ ಪ್ರಚಾರಕರಾಗಿ ಕೆಲಸಮಾಡಿದರು. ನಂತರ ಮಿತ್ರ್ ಕೊಂಕಣಿ ಪತ್ರಿಕೆಯ ಸಹ ಸಂಪಾದಕರಾಗಿ ಹನ್ನೆರಡು ವರ್ಷಗಳ ಕಾಲ ಉಚಿತವಾಗಿ ಸೇವೆ ನೀಡಿದರು. ಕೆಥೊಲಿಕ್ ಸಭಾದ ಅಮ್ಚೊ ಸಂದೇಶ್ ಪತ್ರಿಕೆಯ ಸಂಪಾದಕರಾಗಿ ಅದನ್ನು ಲಾಭಕ್ಕೆ ತಂದು ನಂತರ ಕನ್ನಡದ ಜನವಾಹಿಯಲ್ಲಿ ವರದಿಗಾರರಾದರು. ದೈಜಿವರ್ಲ್ಡ್ ನಂತರ ಪಿಂಗಾರ ವಾರ ಪತ್ರಿಕೆ ಆರಂಭಿಸಿದರು. ಕಳೆದ ಇಪ್ಪತ್ತು ವರ್ಷಗಳ ಕಾಲ ಸಂಪಾದಕರಾಗಿ ಏಕೈಕ ಕ್ರೈಸ್ತರ ಪತ್ರಿಕೆ ನಡೆಸುತ್ತಿದ್ದಾರೆ. ಇಲ್ಲಿವರೆಗೆ ರೇಮಂಡ್‌ ಅವರ ನಾಲ್ಕು ನಾಟಕ, ಹದಿನೇಳು ಪುಸ್ತಕಗಳು ಪ್ರಕಟಗೊಂಡಿವೆ.

ಎಂಸಿಸಿ ಬ್ಯಾಂಕ್ ಆರ್ಥಿಕ ಕಷ್ಟದಲ್ಲಿ ಇದ್ದಾಗ ಲಾಭಕ್ಕೆ ತರಲು ತಂಡ ಕಟ್ಟಿ ನಿರ್ದೇಶಕ ಮಂಡಳಿಯ ಸದಸ್ಯರಾಗಿ ಶ್ರಮಿಸಿದರು. ಡಾನ್ ಬಾಸ್ಕೊ ಹಾಲ್ ಪುನರ್ನಿರ್ಮಾಣ ಮಾಡಲು ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ದುಡಿದರು. ಕ್ರಿಸ್ಟೊಫರ್ ಅಸೋಸಿಯೇಷನ್ ಮೆನ್ಸ್ ಹಾಸ್ಟೆಲ್ ಅಧ್ಯಕ್ಷರಾಗಿ ಮೂರು ವರ್ಷಗಳ ಕಾಲ ಇದ್ದು, ಕಟ್ಟಡದ ಹಾಸ್ಟೆಲಿನ ಕಾಯಕಲ್ಪ ಮಾಡಿ ನಿವಾಸಿಗಳಿಗೆ ನೆಮ್ಮದಿ ನೀಡಿದರು. ಕೆಥೊಲಿಕ್ ಸಭಾದ ಆರಂಭಕ್ಕೆ ಮೊದಲು ನಡೆದ ಒಪಿತ್ಯಾಗಿ ವಿರುದ್ಧದ ಚಳವಳಿಯಲ್ಲಿ ವಿದ್ಯಾರ್ಥಿಯಾಗಿ ಭಾಗವಹಿದರು. ಇಂದು ಕೊಂಕಣಿ ಮಾತೃಭಾಷೆಯ ಯೋಗ್ಯ ರಾಜ್ಯ ಮಟ್ಟದ ಅದ್ಯಕ್ಷರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಕೆಲಸ ನಿರಾಕರಣೆ; ಪ್ರತಿಭಟನೆಗಿಳಿದ ಹಳೆ ಬಂದರು ಹಮಾಲಿ ಕಾರ್ಮಿಕರು

ದಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹಿರಿಯ ಸದಸ್ಯರು, ಇತರ ಪದಾಧಿಕಾರಿಗಳಾಗಿ; ಕಾರ್ಯದರ್ಶಿಯಾಗಿ ವಕೀಲರು ಮತ್ತು ಕೊಂಕಣಿ ನಾಟಕ ಸಭೆಯ ಡೊನ್ ಬೊಸ್ಕೊ ಹೊಲ್ ಪುನರ್ನಿರ್ಮಾಣದ ರೂವಾರಿ ಲಿಸ್ಟನ್‌‌ ಡಿಸೋಜ, ಖಜಾಂಚಿಯಾಗಿ ಸ್ಕವ್ಟ್ ಮತ್ತು ಗೈಡ್ ದಕ ಜಿಲ್ಲಾ ಉಪಾಧ್ಯಕ್ಷರು ಮತ್ತು ನಿವೃತ್ತ ಬ್ಯಾಂಕ್ ಯೂನಿಯನ್ ಪದಾಧಿಕಾರಿಗಳು ಆದ ಲಯನ್ ಕೆ ವಸಂತ ರಾವ್, ಉಪಾಧ್ಯಕ್ಷರಾಗಿ ಜಿಎಸ್‌ಬಿ ಮಹಿಳಾ ಮಂಡಳ್ ಇದರ ಸಕ್ರಿಯ ಪದಾಧಿಕಾರಿ ಮೀನಾಕ್ಷಿ ಪೈ, ಸಹ ಕಾರ್ಯದರ್ಶಿ ಆಗಿ ಯುವ ಉದ್ಯಮಿ ಪ್ರಸಾದ್ ಶೆಣೈ ಅವಿರೋಧವಾಗಿ ಆಯ್ಕೆಯಾದರು. ಕೆಬಿಎಂಕೆ ಕಾರ್ಯಕಾರಿಣಿಯ ಅಹ್ವಾನಿತ ಸದಸ್ಯರಾದ ಹಿರಿಯರಾದ ಗೀತಾ ಸಿ ಕಿಣಿ ಚುನಾವಣಾ ಅಧಿಕಾರಿಯಾಗಿ ಆಯ್ಕೆಯನ್ನು ನಡೆಸಿ ಹೊಸ ಪದಾಧಿಕಾಗಳ ಘೋಷಣೆ ಮಾಡಿದರು.

ಕಾರ್ಯಕಾರಿ ಸದಸ್ಯರಾದ ಜೂಲಿಯೆಟ್‌ ಫೆರ್ನಾಂಡೀಸ್, ಲಾರೆನ್ಸ್ ಪಿಂಟೊ, ಜೊಸ್ಸಿ ಪಿಂಟೊ, ಸುರೇಶ್ ಶೆಣೈ, ಎಡೊಲ್ಫ್ ಡಿಸೋಜ, ಝಿನಾ ಫೆರ್ನಾಂಡೀಸ್, ಅರವಿಂದ್ ಶಾನ್ ಭಾಗ್ ಮತ್ತು ಶಾಂತಿ ವೆರೊನಿಕಾ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...