ಮಂಗಳೂರು | ಸಾಮಾಜಿಕ ಜವಾಬ್ದಾರಿ ಕವಿಗಳ ಆಶಯವಾಗಬೇಕು: ಬಹುಭಾಷಾ ಕವಿ ವಿಲ್ಸನ್ ಕಟೀಲ್

Date:

ಪ್ರಸ್ತುತ ಸಂದರ್ಭದಲ್ಲಿ ಕವಿಗಳಿಗೆ ಸಾಮಾಜಿಕ ಜಾಲತಾಣ ಸೇರಿದಂತೆ ಬರೆಯಲು ಅನೇಕ ಅವಕಾಶಗಳಿವೆ. ಆದರೆ ಬರಹಗಾರರು ಸಾಮಾಜಿಕ ಜವಬ್ದಾರಿಯ ಧ್ವನಿಯಾಗಿ ಶೋಷಣೆಯ ವಿರುದ್ಧ ಬರೆದಾಗಲೇ ಒಳ್ಳೆಯ ಕವಿತೆ ಸೃಷ್ಟಿಯಾಗಲು ಸಾಧ್ಯ ಎಂದು ಬಹುಭಾಷಾ ಕವಿ ವಿಲ್ಸನ್ ಕಟೀಲ್ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ಉರ್ವಾಸ್ಟೋರಿನ ತುಳುಭವನದಲ್ಲಿ ಹಮ್ಮಿಕೊಂಡ 5ನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಡೋಲು ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

“ಪ್ರಸ್ತುತ ಸನ್ನಿವೇಶದಲ್ಲಿ ಸಾಮಾಜಿಕ ಸ್ವಾಸ್ಥ್ಯ ಹಾಗೂ ಸಾಮರಸ್ಯವನ್ನು ಕಾಪಾಡಲು ತುಳುನಾಡಿನ ಪಾಡ್ದನಗಳಲ್ಲಿ ಉಲ್ಲೇಖ ಮಾಡಿರುವ ಸತ್ಯ, ನ್ಯಾಯ, ಧರ್ಮದ ಆಶಯಗಳು ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು, ಮಾಹಾತ್ಮ ಗಾಂಧಿ, ಬಸವಣ್ಣ ಅವರಂತಹ ದಾರ್ಶನಿಕರ ಆದರ್ಶಗಳನ್ನು ನಮ್ಮ ಪರಿಸರ ಹಾಗೂ ನಮ್ಮ ಊರಿನ ಭಾಷೆಗಳ ಮೂಲಕ ಅಭಿವ್ಯಕ್ತಪಡಿಸುವ ತುರ್ತು ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಮಲಾರ್ ಜಯರಾಮ್ ರೈ ಮಾತನಾಡಿ, “ತುಳು ಎಲ್ಲರೂ ಪ್ರೀತಿಸುವ ಭಾಷೆ ಹಾಗೂ ತುಳು ತುಳುನಾಡಿನ ಎಲ್ಲ ಭಾಷೆಗಳಿಗೂ ಪೋಷಕ ಸ್ಥಾನದಲ್ಲಿರುವ ಮತ್ತು ಕರಾವಳಿಯ ಎಲ್ಲ ಒಡನಾಡಿ ಭಾಷೆಗಳನ್ನು ಬೆಳೆಸುವ ಭಾಷೆಯಾಗಿದೆ” ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತುಳು ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, “ತುಳುನಾಡಿನ ಹದಿನಾಲ್ಕು ಭಾಷೆಗಳ ಕವಿಗಳನ್ನು ಒಟ್ಟು ಸೇರಿಸುವ ಮೂಲಕ ಭಾಷಾ ಸಾಮರಸ್ಯದ ಆಶಯವನ್ನು ಬಿಂಬಿಸುವ ಸಲುವಾಗಿ ಹಾಗೂ ಸಣ್ಣ ಸಮುದಾಯಗಳ ಒಳಗಿನ ಭಾಷೆಗಳಿಗೆ ಆದ್ಯತೆ, ಗೌರವ ನೀಡುವ ಸಲುವಾಗಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲ ಭಾಷೆಯವರನ್ನೂ ಒಂದುಗೂಡಿಸುವ ಹಿನ್ನೆಲೆಯಲ್ಲಿ ಅಕಾಡೆಮಿಯು ಬಹುಭಾಷಾ ಕವಿಗೋಷ್ಠಿ ಹಮ್ಮಿಕೊಂಡಿತತ್ತು” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಮಯೂರಿ ಫೌಂಡೇಶನ್ ಅಧ್ಯಕ್ಷ ಜಯ ಕೆ ಶೆಟ್ಟಿ ಮುಂಬಯಿ, ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ, ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯ ಹಾಗೂ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ ಸಿ ಭಂಡಾರಿ ಇದ್ದರು.‌

ಈ ಸುದ್ದಿ ಓದಿದ್ದೀರಾ? ಉಡುಪಿ | ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ವತಿಯಿಂದ ಓಣಂ ಸಂಭ್ರಮ

ಬಹುಭಾಷಾ ಕವಿಗಳಾದ ಚೆನ್ನಪ್ಪ ಅಳಿಕೆ(ತುಳು), ಮಂಜುಳಾ ಶೆಟ್ಟಿ(ತುಳು), ಸತೀಶ್ ಪಡುಬಿದ್ರಿ(ಕೊರಗ ಭಾಷೆ), ಸದಾನಂದ ನಾರಾವಿ(ಕನ್ನಡ), ಕವಿತಾ ಅಡೂರು(ಶಿವಳ್ಳಿ ತುಳು ), ರತ್ನಾ ಕೆ ಭಟ್ ತಲಂಜೇರಿ(ಹವ್ಯಕ ಕನ್ನಡ), ಕರುಣಾಕರ್ ಬಳ್ಕೂರು(ಕುಂದಗನ್ನಡ), ಶಮೀಮಾ ಕುತ್ತಾರ್(ಬ್ಯಾರಿ), ಉದಯ ಭಾಸ್ಕರ್(ಅರೆಭಾಷೆ), ಡಾ. ಮೀನಾಕ್ಷಿ ರಾಮಚಂದ್ರ(ಮಲೆಯಾಳಂ), ಬಾಲಕೃಷ್ಣ ಬೇರಿಕೆ(ಮರಾಠಿ), ರಾಧಿಕಾ ಪೈ(ಕೊಂಕಣಿ) ಚಂದ್ರಕಾಂತ್ ಗೋರೆ(ಚಿತ್ಪಾವನಿ), ಮೀರಾ ಭಟ್(ಕರಾಡ) ಕವಿತೆ ವಾಚಿಸಿದರು.

ತುಳು ಅಕಾಡೆಮಿಯ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿದರು, ಸದಸ್ಯೆ ಅಕ್ಷಯ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು ಹಾಗೂ ಸದಸ್ಯ ಬಾಬು ಕೊರಗ ಪಾಂಗಾಳ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...