ಮಂಗಳೂರು | ಯಾರೇ ಆದರೂ ಪ್ರಚೋದನೆ ಮಾಡಿದಲ್ಲಿ ಕ್ರಮ ಕೈಗೊಳ್ಳಿ: ಮುಸ್ಲಿಂ ಮುಖಂಡರಿಂದ ಸಚಿವರಿಗೆ ಮನವಿ

Date:

“ಮಂಗಳೂರು ಆಸುಪಾಸು ನಡೆದ ಎರಡು ಕೊಲೆಗಳಿಗೆ ಪ್ರಚೋದನೆಯೇ ಕಾರಣ. ಹಾಗಾಗಿ, ಹಿಂದು -ಮುಸ್ಲಿಂ ಯಾರೇ ಆದರೂ ಪ್ರಚೋದನೆ ಮಾಡಿದರೆ ಕ್ರಮ ಕೈಗೊಳ್ಳಿ. ಅದರಲ್ಲಿ ಮುಲಾಜಿಯೇ ಬೇಡ” ಎಂದು ಮಂಗಳೂರಿನ ಮುಸ್ಲಿಂ ಮುಖಂಡರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಉಸ್ತುವಾರಿ ಸಚಿವರ ಸಭೆಗೂ ಮುನ್ನ ಮುಸ್ಲಿಂ ಮುಖಂಡರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ ಬಳಿಕ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ನಿವೃತ್ತ ಪೊಲೀಸ್ ಅಧಿಕಾರಿ ಜಿ ಎ ಬಾವಾ, “ಸುಮಾರು 38 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿ ಬಂದಿದ್ದೇನೆ. ಆ ಸಮಯದಲ್ಲಿ ಇಂತಹ ಬೆಳವಣಿಗೆ ನೋಡಿರಲಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಅದು ಸಾಮರಸ್ಯದ ಜಿಲ್ಲೆ. ನಾವೆಲ್ಲ ಬಾಲ್ಯವನ್ನು ಹಿಂದೂ-ಮುಸ್ಲಿಂ ಎಂದು ನೋಡದೆ ಕಳೆದಿದ್ದೇವೆ. ನಾನು ಹಿಂದೂಗಳ ಮನೆಯಲ್ಲಿ ವಾಸವಿದ್ದುಕೊಂಡು ವಿದ್ಯಾಭ್ಯಾಸ ಪಡೆದವನು. ಅಂತಹ ಸೌಹಾರ್ದತೆಯ ವಾತಾವರಣ ನಮ್ಮ ಜಿಲ್ಲೆಯಲ್ಲಿತ್ತು. ಆದರೆ, ಇವತ್ತು ಸ್ವಾಥ ರಾಜಕಾರಣಕ್ಕಾಗಿ ನಮ್ಮ ಜಿಲ್ಲೆಯ ಸೌಹಾರ್ದತೆಯ ವಾತಾವರಣವನ್ನು ಕೆಡಿಸಲಾಗುತ್ತಿದ್ದು, ಜನರು ನೆಮ್ಮದಿಯಿಂದ ಬದುಕುವುದು ಕೂಡ ಕಷ್ಟ ಆಗಿದೆ” ಎಂದು ಬೇಸರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 31 at 1.31.04 PM

“ಮಂಗಳೂರಿನ ಎರಡು ಕೊಲೆಗಳಿಗೆ ಪ್ರಚೋದನೆಯೇ ಕಾರಣ. ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಸಚಿವರಲ್ಲಿ ಒತ್ತಾಯಿಸಿದ್ದೇವೆ. ಮಂಗಳೂರಿನ ಜನರು ಸಾಮರಸ್ಯದಿಂದ ಬದುಕಬೇಕು. ನಮ್ಮ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣವನ್ನು ಕಟ್ಟಿಕೊಡಬೇಕಿದೆ. ಇಲ್ಲಿನ ಪೊಲೀಸ್ ಇಲಾಖೆ ಯಾವುದೇ ಪಕ್ಷಪಾತವಿಲ್ಲದೆ, ಯಾವುದೇ ಮುಲಾಜಿಗೆ ಒಳಪಡದೆ ಕಠಿಣ ಕ್ರಮಗಳನ್ನು ಕೈಗೊಂಡರೆ ಇಲ್ಲಿನ ಪರಿಸ್ಥಿತಿ ತಕ್ಷಣವೇ ನಿಯಂತ್ರಣಕ್ಕೆ ಬರುತ್ತದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಸುದ್ದಿಗೋಷ್ಠಿ ವೇಳೆ ಸಚಿವ ಗುಂಡೂರಾವ್ ಜೊತೆಗೆ ವಾಗ್ವಾದಕ್ಕಿಳಿದ ಖಾದರ್ ಆಪ್ತ!

ಬಳಿಕ ಮಾತನಾಡಿದ ಹಿರಿಯ ಮುಖಂಡ ಇಬ್ರಾಹೀಂ ಕೋಡಿಜಾಲ್, “ಜಿಲ್ಲೆಯ ವಾತಾವರಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರ ಕೊನೆಗೂ ಕಮಿಷನರ್ ಹಾಗೂ ಎಸ್‌ಪಿಯವರನ್ನು ವರ್ಗಾವಣೆಗೊಳಿಸಿ, ಬೇರೆಯವರನ್ನು ನೇಮಕ ಮಾಡಿದೆ. ಇದು ಒಳ್ಳೆಯ ವಿಚಾರವಾದರೂ, ಅಧಿಕಾರಿಗಳ ಬದಲಾವಣೆಯಾದರೆ ಮಾತ್ರ ಎಲ್ಲವೂ ಸರಿಯಾಗುತ್ತದೆ ಎಂಬ ವಿಶ್ವಾಸ ನಮಗಿಲ್ಲ. ಕಮಿಷನರ್, ಎಸ್‌ಪಿ ಕೆಳಗಡೆ ಕಾರ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳ ಪೈಕಿ ಕೆಲವರು 15-20 ವರ್ಷಗಳಿಂದ ಒಂದೇ ಕಡೆಯಲ್ಲಿ ಕೆಲಸ ಮಾಡುತ್ತಿರುವ ವಿಚಾರ ನಮಗೆ ಗೊತ್ತಿದೆ. ಆದ್ದರಿಂದ ಪೊಲೀಸ್ ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ಆಗಬೇಕಿದೆ. ಆಗ ಸುಧಾರಣೆ ಸಾಧ್ಯವಿದೆ. ಇದನ್ನು ಸಿಎಂ ಹಾಗೂ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ” ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಸ್ಲಿಂ ಸಮುದಾಯ ಮುಖಂಡರಾದ ಕಣಚೂರು ಮೋನು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...