ಮಂಗಳೂರು | ತುಳು ಭವನದ ರಿಯಾಯಿತಿ ರದ್ದು ಮಾಡಿಲ್ಲ: ಬಿಜೆಪಿ ಶಾಸಕ ಕಾಮತ್ ಹೇಳಿಕೆಗೆ ತುಳು ಅಕಾಡೆಮಿ ಅಧ್ಯಕ್ಷರ ಸ್ಪಷ್ಟನೆ

Date:

“ಖಾಸಗಿ ಸಂಘ, ಸಂಸ್ಥೆಗಳು ಆಯೋಜಿಸುವ ತುಳು ಭಾಷೆ, ಸಾಹಿತ್ಯ , ಸಂಸ್ಕ್ರತಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮಂಗಳೂರಿನ ತುಳು ಭವನದಲ್ಲಿ ವಿಶೇಷವಾಗಿ ಶೇಕಡಾ ಐವತ್ತರಷ್ಟು ರಿಯಾಯಿತಿಯಲ್ಲಿ ಸಭಾಂಗಣವನ್ನು ನೀಡಲಾಗುತ್ತಿದೆ. ಇದೇ ವೇಳೆ ಯಕ್ಷಗಾನ , ನಾಟಕ ಆಯೋಜಿಸುವವರಿಗೆ ಇನ್ನೂ ಹೆಚ್ಚಿನ ರಿಯಾಯಿತಿಯಲ್ಲಿ ಸಭಾಂಗಣವನ್ನು ಒದಗಿಸಲಾಗುತ್ತದೆ, ಯಾವುದೇ ರಿಯಾಯಿತಿಯನ್ನು ರದ್ದು ಮಾಡಿಲ್ಲ” ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಸ್ಪಷ್ಟೀಕರಣ ನೀಡಿದ್ದಾರೆ.

“ತುಳುವರಿಗಾಗಿಯೇ ಇರುವ ಮಂಗಳೂರಿನ ಏಕೈಕ ತುಳು ಅಕಾಡೆಮಿ ಭವನದಲ್ಲಿ ತುಳು ಭಾಷೆ, ಸಂಸ್ಕೃತಿಗೆ ಸಂಬಂಧಿಸಿದ ಸಭೆ-ಸಮಾರಂಭ-ಕಾರ್ಯಕ್ರಮಗಳಿಗೆ ಈವರೆಗೂ ಇದ್ದ ಸಂಪೂರ್ಣ ರಿಯಾಯಿತಿಯನ್ನು ತೆಗೆದು ಹಾಕಲಾಗಿದೆ. ಇತರೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವಂತೆ ಬಾಡಿಗೆ ವಸೂಲಿ ಮಾಡುವ ನಿರ್ಧಾರವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ” ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸುಳ್ಳು ಆರೋಪ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ , “ಸಂಘ ಸಂಸ್ಥೆಗಳು ಅಕಾಡೆಮಿಯೊಂದಿಗೆ ಸಹಭಾಗಿತ್ವದಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಉಚಿತವಾಗಿ ಸಭಾಂಗಣವನ್ನು ಒದಗಿಸಲಾಗುತ್ತದೆ. ಸಾಹಿತ್ಯ , ಸಾಂಸ್ಕ್ರತಿಕ ಹೊರತುಪಡಿಸಿದ ಖಾಸಗಿ ಕಾರ್ಯಕ್ರಮಗಳಿಗೆ ಮಾತ್ರ ಪೂರ್ತಿ ಬಾಡಿಗೆ ಪಡೆಯಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಳುಲಿಪಿ ಕಲಿತವರಿಗೆ ಅಕಾಡೆಮಿ ವತಿಯಿಂದ ನೀಡಲಾಗುತ್ತಿದ್ದ ಸರ್ಟಿಫಿಕೇಟ್ ಸಹ ನಿಲ್ಲಿಸಲಾಗಿದೆ ಎಂಬ ಮತ್ತೊಂದು ಆರೋಪಕ್ಕೆ ಉತ್ತರಿಸಿರುವ ತುಳು ಅಕಾಡೆಮಿಯ ಅಧ್ಯಕ್ಷರು, “ಯಾವುದೇ ಸಂಘ , ಸಂಸ್ಥೆಗಳು ನಡೆಸುವ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸರ್ಟಿಫಿಕೇಟ್ ನೀಡುವುದು ಅಕಾಡೆಮಿ ಕಾರ್ಯವ್ಯಾಪ್ತಿಗೆ ಸಂಬಂಧಿಸಿದ ವಿಚಾರವಾಗಿರುವುದಿಲ್ಲ ಅಥವಾ ಅಕಾಡೆಮಿಯು ಪರೀಕ್ಷೆ ಪ್ರಾಧಿಕಾರವಾಗಿರುವುದಿಲ್ಲ. ಅಕಾಡೆಮಿಯ ವತಿಯಿಂದ ನೇರವಾಗಿ ಅಥವಾ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸುವ ತರಬೇತಿ ಶಿಬಿರ , ಕಮ್ಮಟ, ಸೆಮಿನಾರ್ ಗಳಲ್ಲಿ ಭಾಗವಹಿಸುವವರಿಗೆ ಸರ್ಟಿಫೀಕೇಟ್ ಆಯಾ ಸಂದರ್ಭದಲ್ಲಿ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಗಟ್ಟಿ 1
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್

ತುಳು ಮಾತೃ ಭಾಷಾ ಪ್ರಮಾಣ ಪತ್ರವನ್ನು (ತುಳು ಕೋಟ ಸರ್ಟಿಫೀಕೇಟ್) ಆಯಾ ವಿದ್ಯಾರ್ಥಿಗಳು ವಾಸಿಸುವ ತಾಲೂಕಿನ ತಹಶೀಲ್ದಾರರು ನೀಡುವವರಾಗಿದ್ದು, ಎಲ್ಲಾ ತಾಲೂಕುಗಳಲ್ಲಿ ಭಾಷಾ ಪ್ರಮಾಣ ಪತ್ರ ನೀಡಲಾಗುತ್ತಿದೆ. ಭಾಷಾ ಪ್ರಮಾಣ ಪತ್ರ ನೀಡುವ ಅಧಿಕಾರ ತಾಲೂಕು ದಂಡಾಧಿಕಾರಿಗಳ ವ್ಯಾಪ್ತಿಗೆ ಸೇರಿದ್ದಾಗಿರುತ್ತದೆ. ಕರ್ನಾಟಕದ ಯಾವುದೇ ಅಕಾಡೆಮಿಯು ವಿದ್ಯಾರ್ಥಿಗಳಿಗೆ ಭಾಷಾ ಪ್ರಮಾಣ ನೀಡುವ ಸಕ್ಷಮ ಪ್ರಾಧಿಕಾರವಾಗಿರುವುದಿಲ್ಲ. ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಭಾಷಾ ಪ್ರಮಾಣ ಪತ್ರದ ಅರ್ಜಿ ನಮೂನೆಯನ್ನು ತುಳು ಅಕಾಡೆಮಿಯ ನೋಟಿಸ್ ಬೋರ್ಡಿನಲ್ಲಿ ಲಗತ್ತಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ‘ಮೆಟ್ರೋ ಚಿಕ್ಸ್’ ಹೆಸರಲ್ಲಿ ಮಹಿಳೆಯರ ರಹಸ್ಯ ವಿಡಿಯೋ: ಆರೋಪಿ ಯುವಕನ ಬಂಧನ

ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರವನ್ನು ಪಡೆಯುವ ರೀತಿಯಲ್ಲೇ ಮಾತೃ ಭಾಷಾ ಪ್ರಮಾಣ ಪತ್ರವನ್ನು ಪಡೆಯಲು ಅವಕಾಶ ಇರುವಂತಹದು. ಶಾಲಾ ದಾಖಲಾತಿ ವಿವರದೊಂದಿಗೆ ತಹಶೀಲ್ದಾರರ ಕಛೇರಿಗೆ ಅರ್ಜಿ ಸಲ್ಲಿಸಿದಾಗ ಭಾಷಾ ಪ್ರಮಾಣ ಪತ್ರವನ್ನು ತಹಶೀಲ್ದಾರರು ನೀಡುತ್ತಾರೆ. ತುರ್ತು ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದ ದಿನದಂದೇ ಈ ಪ್ರಮಾಣ ಪತ್ರವನ್ನು ನೀಡುತ್ತಾರೆ. ತಹಶೀಲ್ದಾರರ ಹೊರತುಪಡಿಸಿ ಯಾರೇ ನೀಡುವ ಮಾತೃ ಭಾಷಾ ಸರ್ಟಿಫೀಕೇಟ್ ಗೆ ಕಾನೂನಿನ ಮಾನ್ಯತೆ ಇರುವುದಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೇಲಿನ ಎಲ್ಲ ವಿಚಾರಗಳ ಬಗ್ಗೆ ಮಂಗಳೂರು ದಕ್ಷಿಣದ ಶಾಸಕ ಶ್ರೀ ವೇದವ್ಯಾಸ ಕಾಮತ್ ಅವರು ಮಾಹಿತಿಯ ಕೊರತೆಯಿಂದ ವಾಸ್ತವ ಅಲ್ಲದ ಹೇಳಿಕೆಯನ್ನು ನೀಡಿರುವುದರಿಂದ ಈ ಸ್ಪಷ್ಟೀಕರಣವನ್ನು ನೀಡುವುದು ಅಗತ್ಯವಾಯಿತು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...