ಉಡುಪಿ | ರುಂಡ ಮುಂಡ ಬೇರ್ಪಟ್ಟಿರುವ ಕೊಳೆತ ಶವ‌ ಪತ್ತೆ

Date:

ಗುರುತು ಹಿಡಿಯಲಾಗದಷ್ಟು ಕೊಳೆತಿರುವ‌ ಅಪರಿಚಿತ ಪುರಷನ ಶವವೊಂದು, ಹೆರ್ಗ ಗ್ರಾಮದ ಸಣ್ಣಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ. ಮರದ ಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿ ಮೃತಪಟ್ಟು 20 ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಶವ ಕೊಳೆತಿರುವುದರಿಂದ‌ ನೇಣುಕುಣಿಕೆಯಲ್ಲಿ ಭಾರ‌ ತಡೆಯಲಾಗದೆ, ದೇಹದ ರುಂಡ ಬೆರ್ಪಟ್ಟಿದೆ.

ಘಟನಾ ಸ್ಥಳದಲ್ಲಿ ಹಾಜರಿದ್ದು ಮಣಿಪಾಲದ ಪೋಲಿಸಠಾಣೆಯ ಎ.ಎಸ್.ಐ ನಾಗೇಶ್ ನಾಯ್ಕ್, ಹೆಡ್ ಕಾನ್ಸ್ಟೇಬಲ್ ಸುಧಾಕರ್, ಸಿಬ್ಬಂದಿ ಸಂಗೀತ ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯ ಶವ ಪರೀಕ್ಷಾ ಘಟಕಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಇಲಾಖೆಗೆ ನೆರವಾದರು. ಮೃತ ವ್ಯಕ್ತಿಯ ವಾರಸುದಾರರು ಮಣಿಪಾಲ ಪೋಲಿಸ್ ಠಾಣೆಯ‌ನ್ನು ಸಂಪರ್ಕಿಸಲು ಸೂಚಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...