ಉಡುಪಿ | ಸಾಮಾಜಿಕ ಜವಾಬ್ದಾರಿ ನಿರ್ವಹಿಸುವಲ್ಲಿ ಮಣಿಪಾಲ ಸಂಸ್ಥೆಗಳಿಂದ ವಿಶೇಷ ಪ್ರಾಮುಖ್ಯತೆ – ಪ್ರಾಂಶುಪಾಲ ಡಾ.ಬಿ ಎಚ್ ಬಿ ಪೈ

Date:

ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವಲ್ಲಿ ಮಣಿಪಾಲ ಸಂಸ್ಥೆಗಳು ಬಹಳ ಹಿಂದಿನಿಂದಲೂ ವಿಶೇಷ ಬದ್ಧತೆಯನ್ನು ನಿರ್ವಹಿಸುತ್ತಾ ಬಂದಿದೆ. ಕಾರ್ಮಿಕ ಇಲಾಖೆಯ ಜನಪರ ಯೋಜನೆಗಳನ್ನು ಅಸಂಘಟಿತ ಕಾರ್ಮಿಕರ ವಲಯದಲ್ಲಿ ಜಾಗೃತಿ ಮೂಡಿಸುವ ಮತ್ತು ಅದರ ಸೌಲಭ್ಯತೆಗಳನ್ನು ಫಲಾನುಭವಿಗಳಿಗೆ ಮುಟ್ಟಿಸುವಂತಹ ಶಿಬಿರಗಳನ್ನು ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ನಿರಂತರವಾಗಿ ಆಯೋಜಿಸುತ್ತಾ ಬರುತ್ತಿರುವುದು ಶ್ಲಾಘನೀಯ ಎಂದು ಮಣಿಪಾಲ ಡಾ. ಟಿ ಎಂ ಎ ಫೈ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾದ ಡಾಕ್ಟರ್ ಬಿ ಎಚ್ ವೆಂಕಟರಮಣ ಪೈ ಅವರು ಅಭಿಮತ ವ್ಯಕ್ತ ಪಡಿಸಿದರು.

1004724457

ಅವರು ಭಾನುವಾರ ತಮ್ಮ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಆಶ್ರಯದಲ್ಲಿ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ, ಉಡುಪಿ ಡಾ ಟಿ ಎಂ ಎ ಪೈ ಪಾಲಿಟೆಕ್ನಿಕ್ ಮಣಿಪಾಲ, ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇವರ ಸಹಭಾಗಿತ್ವದಲ್ಲಿ ರಾಜ್ಯ ಸರಕಾರದಿಂದ ನೂತನವಾಗಿ ಸ್ಥಾಪನೆಯಾದ ಸಾರಿಗೆ ಮಂಡಳಿಗೆ ಅಸಂಘಟಿತ ಗ್ಯಾರೇಜು ಕಾರ್ಮಿಕರ ಆನ್ಲೈನ್ ನೊಂದಣಿ, ಸಾರ್ವಜನಿಕರಿಗಾಗಿ ಆಧಾರ್ ತಿದ್ದುಪಡಿ ಮತ್ತು ಅಂಚೆ ವಿಮಾ ಯೋಜನೆ ನೋಂದಣಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮಣಿಪಾಲ ಕೌಶಲ್ಯ ತರಬೇತಿ ಕೇಂದ್ರದ ಆಡಳಿತ ಅಧಿಕಾರಿ ಡಾಕ್ಟರ್ ಕಾಂತರಾಜ್ ಎ.ಎನ್, ಉಡುಪಿ ಕ್ಲಾಸಿಕ್ ಆಟೋಮೊಬೈಲ್ ನ ಆಡಳಿತ ನಿರ್ದೇಶಕ ಸಂತೋಷ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಶಾ ಅಲ್ತಾಫ್ ಅಹಮದ್, ಕಾರ್ಮಿಕ ನಿರೀಕ್ಷಿತರುಗಳಾದ ಸಂಜಯ್ ಮತ್ತು ಮಲ್ಲಿಕಾ ಪ್ರಸಾದ್, ಭಾರತೀಯ ಅಂಚೆ ಇಲಾಖೆಯ ಪ್ರತಿನಿಧಿಗಳಾದ ಜೀವನ್ ಮತ್ತು ತೌಸಿಫ್, ಸಂಘದ ಸ್ಥಾಪಕ ಅಧ್ಯಕ್ಷರಾದ ಪ್ರಭಾಕರ್ ಕೆ ಮತ್ತು ಚಯರ್ ಮ್ಯಾನ್ ವಿಲ್ಸನ್ ಅಂಚನ್, ಗೌರವ ಸಲಹೆಗಾರ ಉದಯ್ ಕಿರಣ್, ಉಪಾಧ್ಯಕ್ಷರಾದ ರಾಜೇಶ್ ಜತ್ತನ್ ಕ್ರೀಡಾ ಕಾರ್ಯದರ್ಶಿ ಮಧುಸೂದನ್ ಕನ್ನರ್ಪಾಡಿ ಮತ್ತಿತರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷರಾದ ರೋಷನ್ ಕರ್ಕಡ ಕಾಪು ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್ ರವರು ಕಾರ್ಯಕ್ರಮವನ್ನು ಸಂಘಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ವಿನಯ್ ಕುಮಾರ್ ಸ್ವಾಗತಿಸಿ ಕೋಶಾಧಿಕಾರಿ ಸಂತೋಷ ಕುಮಾರ್ ವಂದಿಸಿದರು. ನವೀನ್ ಕುಮಾರ್ ಉದ್ಯಾವರ ಕಾರ್ಯಕ್ರಮ ನಿರೂಪಡಿಸಿದರುದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...