ಮಣಿಪುರ ಹಿಂಸಾಚಾರ ತಡೆಯುವಲ್ಲಿ ರಾಜ್ಯ, ಕೇಂದ್ರ ಸರ್ಕಾರ ಸಂಪೂರ್ಣ ವಿಫಲ; ದಸಂಸ ಕಿಡಿ

Date:

ಮಣಿಪುರದಲ್ಲಿ ಕುಕ್ಕಿ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ ಇಡೀ ಸಮಾಜವೇ ತಲೆತಗ್ಗಿಸುವಂತಹ ಘಟನೆಯಾಗಿದೆ. ಇದನ್ನು ತಡೆಯುವಲ್ಲಿ ಬಿಜೆಪಿ ನೇತೃತ್ವದ ಮಣಿಪುರ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದಸಂಸ ಪ್ರತಿಭಟನಾಕಾರರು ವಿಜಯನಗರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿ ಮಾತನಾಡಿದರು. “ಕಳೆದ 3 ತಿಂಗಳುಗಳಿಂದ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರದಲ್ಲಿ ಮತ್ತೆ ಘರ್ಷಣೆ ನಡೆದಿದ್ದು, ಮೂವರ ಹತ್ಯೆ ನಡೆದಿದೆ. ತಮ್ಮ ನಿವಾಸದಲ್ಲಿ ಮಲಗಿದ್ದ ಮೂವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಬಳಿಕ ಮಾರಕಾಸ್ತ್ರದಿಂದ ಕೊಚ್ಚಿ, ಕ್ರೂರವಾಗಿ ಹತ್ಯೆ ಮಾಡಿರುವುದು ತಿಳಿದುಬಂದಿದೆ” ಎಂದರು.

“ಪೊಲೀಸರು ಮತ್ತು ದುಷ್ಕರ್ಮಿಗಳು ಒಟ್ಟಾಗಿ ಸೇರಿಯೇ ಈ ದುಷ್ಕೃತ್ಯ ಎಸಗಿದ್ದಾರೆ. ರಕ್ಷಣೆ ಕೇಳಿದ ಮಹಿಳೆಯರನ್ನು ಪೊಲೀಸರೇ ಪುಂಡರ ಗುಂಪಿಗೆ ಒಪ್ಪಿಸಿರುವುದು ಇದಕ್ಕೆ ಸಾಕ್ಷಿ. ಮಣಿಪುರ ಪೊಲೀಸರ ತನಿಖೆಯ ಮೇಲೆ ನಮಗೆ ವಿಶ್ವಾಸವಿಲ್ಲ. ಭದ್ರತೆ ದೃಷ್ಟಿಯಿಂದ ಹತ್ತಿರದ ನ್ಯಾಯಾಲಯಗಳಿಗೆ ದಾಖಲಿಸಲು ಅವಕಾಶ ಕಲ್ಪಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂತ್ರಸ್ತೆಯರು ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಭಯಬೀತರಾಗಿದ್ದಾರೆ. ಸಿಬಿಐ ಮುಂದೆ ಸತ್ಯ ಹೇಳುತ್ತಾರೆಂಬ ವಿಶ್ವಾಸವಿಲ್ಲ. ಹಾಗಾಗಿ ಮಹಿಳೆಯರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಸಬೇಕು ಆಗಷ್ಟೆ ಅವರು ಸತ್ಯ ಹಂಚಿಕೊಳ್ಳಲು ಸಾಧ್ಯ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಪೋಷಕರಿಲ್ಲದ ಪ್ರತಿಭಾವಂತೆ ಶಿಕ್ಷಣಕ್ಕೆ ದಾನಿಗಳಿಂದ ₹2.35 ಲಕ್ಷ ಆರ್ಥಿಕ ನೆರವು

ಡಿಜಿಪಿ ದರ್ಜೆಯ ಪೊಲೀಸ್ ಅಧಿಕಾರಿ ನೇತೃತ್ವದ ವಿಶೇಷ ತಂಡದ ಮೂಲಕ ತನಿಖೆ ನಡೆಸಬೇಕು. ವಿಚಾರಣೆಯನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು. ಸೂಕ್ತ ನ್ಯಾಯ ದೊರೆಯಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಮರಿಸ್ವಾಮಿ ಕೊಟ್ಟರು, ಎಚ್ ಸೋಮಶೇಖರ್, ಲಕ್ಷ್ಮಣ, ವೈ ಶೇಖರ, ನಾಗಪ್ಪ, ದುರುಗೇಶ್ ಕೂಡ್ಲಿಗಿ, ಅನಿಲ್ ಹುಲಿಕುಂಟೆ ಸೇರಿದಂತೆ ಬಹುತೇಕ ಮುಖಂಡರು, ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...