ಮಣಿಪುರ ಘಟನೆ | ಮಾಧ್ಯಮ ಸಂಸ್ಥೆಗಳ ವಿಡಿಯೋ ಬ್ಲಾಕ್ ಮಾಡಿದ ‘ಯೂಟ್ಯೂಬ್’

Date:

  • ‘ಬ್ಲಾಕ್’ ಮಾಡಿರುವುದಾಗಿ ಮಾಹಿತಿ ಹಂಚಿಕೊಂಡ ವಾರ್ತಾಭಾರತಿ, ಸನ್ಮಾರ್ಗ ನ್ಯೂಸ್
  • ವಿಡಿಯೋ ಪ್ರಸಾರವನ್ನು ಮಾತ್ರ ತಡೆ ಹಿಡಿಯುವಂತೆ ನಿರ್ದೇಶನ ನೀಡಿದ್ದ ಕೇಂದ್ರ ಸರ್ಕಾರ

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಸಾರ್ವಜನಿಕವಾಗಿ ಬೆತ್ತಲೆಗೊಳಿಸಿ ಲೈಂಗಿಕ ದೌರ್ಜನ್ಯ ಎಸಗಿದ ಹೇಯ ಕೃತ್ಯದ ಬಗ್ಗೆ ಚರ್ಚೆ ಹಾಗೂ ವಿಮರ್ಶೆ ನಡೆಸಿದ್ದ ಮಾಧ್ಯಮ ಸಂಸ್ಥೆಗಳ ವಿಡಿಯೋಗಳನ್ನು ‘ಯೂಟ್ಯೂಬ್’ ಬ್ಲಾಕ್ ಮಾಡಿರುವುದಾಗಿ ವರದಿಯಾಗಿದೆ.

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿ ಹರಿದಾಡುತ್ತಿರುವ ವಿಡಿಯೋವನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರವು ಟ್ವಿಟರ್ ಸಹಿತ ಇತರೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನಿರ್ದೇಶನ ನೀಡಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಪ್ರಕರಣವು ಪ್ರಸ್ತುತ ತನಿಖೆಯಲ್ಲಿರುವುದರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದು ದೇಶದ ಕಾನೂನುಗಳಿಗೆ ವಿರುದ್ಧವಾಗಿದೆ. ಹಾಗಾಗಿ, ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರವು ಸೂಚಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಣಿಪುರದ ಬೆತ್ತಲೆ ಮೆರವಣಿಗೆಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಿಳಿಸಿತ್ತಾದರೂ, ಚರ್ಚಾ ಕಾರ್ಯಕ್ರಮ ಹಾಗೂ ವಿಶ್ಲೇಷಣೆ ನಡೆಸಿರುವ ಕಾರ್ಯಕ್ರಮವನ್ನು ಕೂಡ ಪ್ರಸಾರ ಮಾಡದಂತೆ ತಡೆಹಿಡಿದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

WhatsApp Image 2023 07 21 at 3.51.47 PM

ತಮ್ಮ ಸಂಸ್ಥೆ ನಡೆಸಿರುವ ಚರ್ಚಾ ಕಾರ್ಯಕ್ರಮವನ್ನು ಯೂಟ್ಯೂಬ್ ಯಾವುದೇ ವೀಕ್ಷಕರಿಗೆ ಕಾಣಿಸದಂತೆ ಬ್ಲಾಕ್ ಮಾಡಿದೆ ಎಂದು ‘ವಾರ್ತಾಭಾರತಿ ಡಿಜಿಟಲ್ ಚಾನಲ್’ ಮಾಹಿತಿ ಹಂಚಿಕೊಂಡಿದೆ.

‘ಚರ್ಚಾ ಕಾರ್ಯಕ್ರಮದಲ್ಲಿ ಮಣಿಪುರ ಘಟನೆಯ ವಿಡಿಯೋವನ್ನಾಗಲಿ, ಫೋಟೋವನ್ನಾಗಲಿ ಬಳಸಿಲ್ಲ. ಒಮ್ಮೆ ಪ್ರಕರಣದ ಆರೋಪಿಗಳನ್ನು ಮಾತ್ರ ತೋರಿಸಲಾಗಿತ್ತು. ಘಟನೆಯಲ್ಲಿ ಸಂತ್ರಸ್ತ ಮಹಿಳೆಯರ ಫೋಟೋ, ವಿಡಿಯೋ ಯಾವುದನ್ನೂ ಕಾರ್ಯಕ್ರಮದಲ್ಲಿ ಬಳಸಿಲ್ಲ’ ಎಂದು ‘ವಾರ್ತಾಭಾರತಿ’ ತಿಳಿಸಿದೆ.

sanmarga

ಮಣಿಪುರದಲ್ಲಿ ನಡೆದ ಹೀನಾಯ ಕ್ರೌರ್ಯದ ಸುತ್ತ ನಮ್ಮ ಚಾನೆಲ್ ನಲ್ಲಿ ಪ್ರಸಾರವಾಗಿದ್ದ ‘ಎಡಿಟರ್ಸ್ ಪಿಕ್’ ವಿಶ್ಲೇಷಣಾ ಕಾರ್ಯಕ್ರಮವನ್ನು ಯಾವುದೇ ಸೂಚನೆ ನೀಡದೆ ಯೂಟ್ಯೂಬ್ ಬ್ಲಾಕ್ ಮಾಡಿರುವುದಾಗಿ ‘ಸನ್ಮಾರ್ಗ ನ್ಯೂಸ್’ ಕೂಡ ಮಾಹಿತಿ ಹಂಚಿಕೊಂಡಿದೆ.

‘ಸಂಪಾದಕ ಏ ಕೆ ಕುಕ್ಕಿಲ ಅವರು ನಡೆಸಿಕೊಟ್ಟ ಈ ಕಾರ್ಯಕ್ರಮ ಜುಲೈ 20ರ ಗುರುವಾರ ಸಂಜೆ ಏಳು ಗಂಟೆಗೆ ಪ್ರಸಾರವಾಗಿತ್ತು. ಈ ಕಾರ್ಯಕ್ರಮದಲ್ಲಿ ಮಣಿಪುರದ ಬೆತ್ತಲೆ ಪ್ರಕರಣದ ಜೊತೆ ಜೊತೆಗೇ ಈ ಹಿಂದಿನ ಬಿಲ್ಕಿಸ್ ಬಾನು ಪ್ರಕರಣವನ್ನು ಮತ್ತು ಅಪರಾಧಿಗಳ ಬಿಡುಗಡೆಯನ್ನೂ ವಿಶ್ಲೇಷಣೆಗೆ ಒಳಪಡಿಸಲಾಗಿತ್ತು. ಕಾರ್ಯಕ್ರಮ ವೀಕ್ಷಣೆಗೆ ಲಭ್ಯವಾಗುತ್ತಿಲ್ಲ ಎಂದು ವೀಕ್ಷಕರು ದೂರಿಕೊಂಡಾಗಲೇ ಕಾರ್ಯಕ್ರಮ ಬ್ಲಾಕ್ ಮಾಡಿರುವುದು ಚಾನೆಲ್ ಗಮನಕ್ಕೆ ಬಂದಿದೆ’ ಎಂದು ‘ಸನ್ಮಾರ್ಗ ನ್ಯೂಸ್’ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...